AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಜಡೇಜಾರನ್ನು ಆಯ್ಕೆ ಮಾಡುವುದರಿಂದ ಪ್ರಯೋಜನವಿಲ್ಲ ಎಂದ ಲೆಜೆಂಡರಿ ಕ್ರಿಕೆಟರ್..!

Asia Cup 2022: ಟಿ20 ವಿಶ್ವಕಪ್‌ನಿಂದ ಒಟ್ಟು 7 ಪಂದ್ಯಗಳನ್ನು ಆಡಿರುವ ಅವರು ಈ ಏಳು ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಮಾತ್ರ ಕಬಳಿಸಲು ಶಕ್ತರಾಗಿದ್ದಾರೆ.

ಟಿ20 ವಿಶ್ವಕಪ್​ಗೆ ಜಡೇಜಾರನ್ನು ಆಯ್ಕೆ ಮಾಡುವುದರಿಂದ ಪ್ರಯೋಜನವಿಲ್ಲ ಎಂದ ಲೆಜೆಂಡರಿ ಕ್ರಿಕೆಟರ್..!
Ravindra Jadeja
TV9 Web
| Edited By: |

Updated on:Aug 14, 2022 | 8:44 PM

Share

ಏಷ್ಯಾಕಪ್ (Asia Cup) ಮುಗಿದ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಬೇಕಾಗಿದೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಟಿ20 ವಿಶ್ವಕಪ್​ಗೆ (T20 World Cup) ಯಾರು ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲಕಾರಿ ವಿಚಾರವಾಗಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಅನೇಕ ಆಟಗಾರರು ಕಾತುರದಿಂದ ಕಾಯುತ್ತಿದ್ದಾರೆ. ಅವರಲ್ಲಿ ರವೀಂದ್ರ ಜಡೇಜಾ (Ravindra Jadeja) ಕೂಡ ಸೇರಿದ್ದಾರೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಜಡೇಜಾ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ.

ಜಡೇಜಾರಿಂದ ಪ್ರಯೋಜನವಿಲ್ಲ ಎಂದ ಆಕಾಶ್ ಚೋಪ್ರಾ

ರವೀಂದ್ರ ಜಡೇಜಾ ಅವರು ಏಷ್ಯಾಕಪ್‌ಗಾಗಿ ಭಾರತದ 15 ಆಟಗಾರರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಇದೇ ವೇಳೆ ಟಿ20 ವಿಶ್ವಕಪ್‌ಗೆ ಜಡೇಜಾ ಕೂಡ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಆದರೆ ಜಡೇಜಾ ಆಟದ ಬಗ್ಗೆ ಆಕಾಶ್ ದೊಡ್ಡ ಹೇಳಿಕೆ ನೀಡಿದ್ದಾರೆ. ‘ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ರವೀಂದ್ರ ಜಡೇಜಾ ನಿಸ್ಸಂದೇಹವಾಗಿ ಆಡಲಿದ್ದಾರೆ. ಇದು ನಿಮಗೂ ಗೊತ್ತು, ನನಗೂ ಗೊತ್ತು. ಆದರೆ, ಈ ಬಾರಿ ಅವರು ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಹೆಚ್ಚು ಪರಿಣಾಮಕಾರಿಯಾಗಲು ಸಾಧ್ಯವಿಲ್ಲ. ಅವರ ಅಂಕಿಅಂಶಗಳನ್ನು ಗಮನಿಸಿದರೆ, ಟಿ20 ವಿಶ್ವಕಪ್‌ನಿಂದ ಒಟ್ಟು 7 ಪಂದ್ಯಗಳನ್ನು ಆಡಿರುವ ಅವರು ಈ ಏಳು ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಮಾತ್ರ ಕಬಳಿಸಲು ಶಕ್ತರಾಗಿದ್ದಾರೆ. ಅವರ ಸರಾಸರಿ 43 ಕ್ಕಿಂತ ಹೆಚ್ಚಿದ್ದು, ರನ್​ರೇಟ್​ ಕೂಡ 8.5 ರ ಆಸುಪಾಸಿನಲ್ಲಿದೆ. ಹೀಗಾಗಿ ಜಡೇಜಾ ಸ್ಪಿನ್ನಿಂದ ಟೀಂ ಇಂಡಿಯಾ ಹೆಚ್ಚಿನದ್ದನ್ನು ನಿರೀಕ್ಷಿಸುವಂತಿಲ್ಲ ಅಂದಿದ್ದಾರೆ.

ಅಶ್ವಿನ್ ಮತ್ತು ಪಟೇಲ್ ಬಗ್ಗೆ

ಇದುವರೆಗೂ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಜಡೇಜಾ ವಿಕೆಟ್ ಪಡೆಯುವ ಸಾಮರ್ಥ್ಯ ಇನ್ನೂ ಕಂಡುಬಂದಿಲ್ಲ. ಇದೇ ಕಥೆ ಐಪಿಎಲ್‌ನಲ್ಲೂ ಕಂಡು ಬಂದಿದೆ. ಅವರು ಕಳೆದ ಐಪಿಎಲ್‌ನಲ್ಲಿ 10 ಪಂದ್ಯಗಳನ್ನು ಆಡಿದ, ಸುಮಾರು 50 ರ ಸರಾಸರಿಯಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಸಮಯದಲ್ಲಿ ಅವರ ರನ್​ರೇಟ್ 7.50 ಆಗಿದ್ದು, ಸ್ಟ್ರೈಕ್ ರೇಟ್ ಸುಮಾರು 40 ಆಗಿತ್ತು. ಜಡೇಜಾ ಹೊರತುಪಡಿಸಿ, ಆಕಾಶ್ ಚೋಪ್ರಾ, ಅಶ್ವಿನ್ ಮತ್ತು ಅಕ್ಷರ್ ಪಟೇಲ್‌ಗೆ ಅದೇ ಕಾಮೆಂಟ್ ಮಾಡಿದ್ದಾರೆ.

2021ರ ಟಿ20 ವಿಶ್ವಕಪ್‌ನಿಂದ ಅಶ್ವಿನ್ ಮತ್ತು ಅಕ್ಷರ್ ಕೂಡ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಲು ಸಾಧ್ಯವಾಗಿಲ್ಲ. ಆಸ್ಟ್ರೇಲಿಯಾದಲ್ಲಿಯೂ ಅವರ ವಿಕೆಟ್ ಟೇಕಿಂಗ್ ಸರಾಸರಿ ಒಂದೇ ಆಗಿರುತ್ತದೆ, ಅಂದರೆ ಈ ಬೌಲರ್‌ಗಳಿಗೆ ಆಸೀಸ್ ನಾಡಲ್ಲಿ ವಿಕೆಟ್ ತೆಗೆಯಲು ಸಾಧ್ಯವಾಗುವುದಿಲ್ಲ. ಆದರೆ ಆಕಾಶ್ ಚೋಪ್ರಾ ಯಜುವೇಂದ್ರ ಚಹಲ್​ಗೆ ಫುಲ್ ಮಾಕ್ರ್ಸ್​ ನೀಡಿದ್ದು, ಚಹಲ್ ವಿಕೆಟ್ ಪಡೆಯುವಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದು ಬಣ್ಣಿಸಿದ್ದಾರೆ. ಕಳೆದ ವಿಶ್ವಕಪ್‌ನ ತಂಡದಲ್ಲಿ ಚಹಲ್​ರನ್ನು ಸೇರಿಸದಿರುವುದು ದೊಡ್ಡ ತಪ್ಪಾಗಿದ್ದು, ಈ ಬಾರಿ ಅದನ್ನು ಪುನರಾವರ್ತಿಸಬಾರದು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

Published On - 8:44 pm, Sun, 14 August 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!