AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಔಟಾದಾಗ ನಾನ್​ ಸ್ಟ್ರೈಕ್​ನಲ್ಲಿ ಜಡೇಜಾ ಆಡಿದ ಮಾತು ಸ್ಟಂಪ್ ಮೈಕ್​ನಲ್ಲಿ ಸೆರೆ: ಏನು ಹೇಳಿದ್ರು ನೋಡಿ

India vs Australia 2nd ODI: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಪರ ಗರಿಷ್ಠ ರನ್ ಕಲೆಹಾಕಿದ್ದೇ ವಿರಾಟ್ ಕೊಹ್ಲಿ (31 ರನ್). ಆಕ್ರಮಣಕಾರಿ ಆಟವಾಡುತ್ತಿದ್ದದ ಕೊಹ್ಲಿ 16ನೇ ಓವರ್​ನಲ್ಲಿ ಎಲ್​ಬಿ ಬಲೆಗೆ ಬಿದ್ದರು.

Virat Kohli: ವಿರಾಟ್ ಕೊಹ್ಲಿ ಔಟಾದಾಗ ನಾನ್​ ಸ್ಟ್ರೈಕ್​ನಲ್ಲಿ ಜಡೇಜಾ ಆಡಿದ ಮಾತು ಸ್ಟಂಪ್ ಮೈಕ್​ನಲ್ಲಿ ಸೆರೆ: ಏನು ಹೇಳಿದ್ರು ನೋಡಿ
Ravindra Jadeja and Virat Kohli
Vinay Bhat
|

Updated on:Mar 20, 2023 | 7:56 AM

Share

ಈ ವರ್ಷದ ಐಸಿಸಿ ಏಕದಿನ ವಿಶ್ವಕಪ್​ನ ತಯಾರಿಗಾಗಿ ನಡೆಯುತ್ತಿರುವ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತದ (India vs Australia) ಪ್ರದರ್ಶನ ಕಳಪೆ ಆಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಆಡಿದ ಆಟ ಮ್ಯಾನೇಜ್ಮೆಂಟ್​ಗೆ ತಲೆನೋವಾಗಿ ಪರಿಣಮಿಸಿದೆ. ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಕೇವಲ 49 ರನ್​ಗು ಮುನ್ನವೇ ಟೀಮ್ ಇಂಡಿಯಾದ (Team India) ಅರ್ಧ ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡರು. ಪಂದ್ಯ ಆರಂಭವಾದ ಮೂರನೇ ಎಸೆತದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ರೋಹಿತ್ ಪಡೆ ಒಟ್ಟು ಗಳಿಸಿದ್ದು ಕೇವಲ 117 ರನ್. ವಿರಾಟ್ ಕೊಹ್ಲಿ (Virat Kohli) ಕ್ರೀಸ್​ನಲ್ಲಿ ಇರುವ ವರೆಗೆ ತಂಡ ಸವಾಲಿನ ಮೊತ್ತ ಕಲೆಹಾಕಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಇವರು ಕೂಡ ಔಟಾಗಿದ್ದು ಹೊಡೆತ ಬಿದ್ದಿತು.

ಭಾರತ ಪರ ಗರಿಷ್ಠ ರನ್ ಕಲೆಹಾಕಿದ್ದೇ ವಿರಾಟ್ ಕೊಹ್ಲಿ. 35 ಎಸೆತಗಳಲ್ಲಿ 4 ಫೋರ್​ನೊಂದಿಗೆ 31 ರನ್ ಗಳಿಸಿದರು. ಆಕ್ರಮಣಕಾರಿ ಆಟವಾಡುತ್ತಿದ್ದದ ಕೊಹ್ಲಿ 16ನೇ ಓವರ್​ನ ನೇಥನ್ ಎಲಿಸ್ ಅವರ ಎರಡನೇ ಎಸೆತದಲ್ಲಿ ಎಲ್​ಬಿ ಬಲೆಗೆ ಬಿದ್ದರು. ಕ್ರಾಸ್ ಬ್ಯಾಟ್ ಶಾಟ್ ಹೊಡೆಯುವಲ್ಲಿ ಸಂಪೂರ್ಣ ವಿಫಲರಾದ ವಿರಾಟ್ ಆರನೇ ಬ್ಯಾಟರ್ ಆಗಿ ಪೆವಿಲಿಯನ್ ಸೇರಿಕೊಳ್ಳಬೇಕಾಯಿತು. ಎಲ್​ಬಿಗೆ ಆಸೀಸ್ ಆಟಗಾರರು ಮನವಿ ಮಾಡಿದ ತಕ್ಷಣ ಅಂಪೈರ್ ಔಟ್ ಎಂಬ ಸೂಚನೆ ನೀಡಿದರು.

ಇದನ್ನೂ ಓದಿ
Image
Rohit Sharma: ತಂಡದ ಹೀನಾಯ ಸೋಲಿಗೆ ನಾಯಕ ರೋಹಿತ್ ಶರ್ಮಾ ದೂರಿದ್ದು ಯಾರನ್ನು ಗೊತ್ತೇ?
Image
Team India: ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಅತೀ ಕಡಿಮೆ ಸ್ಕೋರ್ ಎಷ್ಟು ಗೊತ್ತಾ?
Image
Mitchell Starc: ಟೀಮ್ ಇಂಡಿಯಾ ವಿರುದ್ಧ 5 ವಿಕೆಟ್ ಉರುಳಿಸಿ ಟಾಪ್-3 ಗೆ ಎಂಟ್ರಿ ಕೊಟ್ಟ ಮಿಚೆಲ್ ಸ್ಟಾರ್ಕ್​
Image
IPL 2023: ಐಪಿಎಲ್ 5 ತಂಡಗಳ ಹೊಸ ಜೆರ್ಸಿ ಅನಾವರಣ

IPL 2023: ಐಪಿಎಲ್​ಗೆ ಮತ್ತೆ ಕೋವಿಡ್​ ಭೀತಿ..!

ಅಂಪೈರ್ ಔಟ್ ಕೊಟ್ಟಾಗ ಕೊಹ್ಲಿ ಡಿಆರ್​ಎಸ್ ಮೊರೆ ಹೋಗಲು ಮುಂದಾದರು. ಆದರೆ, ನಾನ್​ಸ್ಟ್ರೈಕ್​ನಲ್ಲಿದ್ದ ರವೀಂದ್ರ ಜಡೇಜಾ ಇದು ಖಚಿತವಾಗಿ ಔಟ್, ಡಿಆರ್​ಎಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಕೊಹ್ಲಿ ಬಳಿ ಹೇಳಿದ್ದಾರೆ. ಜಡೇಜಾ ಹಾಗೂ ಕೊಹ್ಲಿ ನಡುವಣ ಈ ಸಂಭಾಷಣೆ ಸ್ಟಂಪ್​ಮೈಕ್​ನಲ್ಲಿ ಸೆರೆಯಾಗಿದೆ. ಬಳಿಕ ವಿರಾಟ್ ಒಲ್ಲದ ಮನಸ್ಸಿನಲ್ಲಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕೊಹ್ಲಿ ಬೆನ್ನಲ್ಲೇ 16 ರನ್ ಗಳಿಸಿದ್ದ ಜಡೇಜಾ ಕೂಡ ಔಟಾದರರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ:

ಈ ಪಂದ್ಯದಲ್ಲಿ ಟಾಸ್ ಸೋತು ಭಾರತ ಬ್ಯಾಟಿಂಗ್​ಗೆ ಇಳಿಯಿತು. ಟೀಮ್ ಇಂಡಿಯಾ ಅಂದುಕೊಂಡ ಯೋಜನೆಯಂತೆ ಯಾವುದೂ ನಡೆಯಲಿಲ್ಲ. ಮಿಚೆಲ್ ಸ್ಟಾರ್ಕ್ ಬೌಲಿಂಗ್ ಬಿರುಗಾಳಿಗೆ ಮೊದಲ ಓವರ್​ನ ಮೂರನೇ ಎಸೆತದಲ್ಲೇ ಭಾರತ ಶುಭ್​ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡಿತು. ನಂತರ ರೋಹಿತ್ ಶರ್ಮಾ (13,) ಸೂರ್ಯ ಕುಮಾರ್​ ಯಾದವ್​ (0) ವಿಕೆಟ್​ ಒಪ್ಪಿಸಿದರು. 9ನೇ ಓವರ್​ನಲ್ಲಿ ಕೆಎಲ್​ ರಾಹುಲ್​ (9) ಔಟಾದರೆ ಹಾರ್ದಿಕ್​ ಪಾಂಡ್ಯ (1), ನಂತರದಲ್ಲಿ ಕೊಹ್ಲಿ-ಜಡೇಜಾ ಕೂಡ ವಿಕೆಟ್ ಒಪ್ಪಿಸಿದರು. ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 29 ರನ್ ಬಾರಿಸಿ ತಂಡದ ಮೊತ್ತವನ್ನು 100 ದಾಟಿಸಿದರು. ಅಂತಿಮವಾಗಿ ಭಾರತ 26 ಓವರ್​ಗಳಲ್ಲಿ 117 ರನ್​ಗೆ ಸರ್ವಪತನ ಕಂಡಿತು. ಆಸೀಸ್ ಪರ ಸ್ಟಾರ್ಕ್ 5 ವಿಕೆಟ್ ಕಬಳಿಸಿದರೆ, ಸೀನ್ ಅಬಾಟ್ 3 ಮತ್ತು ನೇಥನ್ ಎಲಿಸ್ 2 ವಿಕೆಟ್​ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕರಾದ ಟ್ರಾವಿಸ್ ಹೆಡ್ 51 ರನ್​ ಮತ್ತು ಮಿಚೆಲ್ ಮಾರ್ಷ್ 66 ರನ್​ ಗಳಸಿ ಗೆಲುವಿಗೆ ಕಾರಣರಾದರು. ಭಾರತ ತಂಡ ತವರಿನಲ್ಲಿ ಅತಿ ಕಡಿಮೆ ಮೊತಕ್ಕೆ ಕುಸಿದ ನಾಲ್ಕನೇ ಮ್ಯಾಚ್​ ಇದಾಯಿತು. ಈ ಮೂಲಕ ಕೆಟ್ಟ ದಾಖಲೆ ಬರೆಯಿತು. ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಕಾಂಗರೂ ಪಡೆ 10 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ. ಹೀಗಾಗಿ ಅಂತಿಮ ತೃತೀಯ ಏಕದಿನ ಪಂದ್ಯ ಕುತೂಹಲ ಕೆರಳಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:56 am, Mon, 20 March 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​