AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಗೆದ್ದ ಆಟಗಾರ, ಇದೀಗ ಜಿಂಬಾಬ್ವೆ ಕ್ರಿಕೆಟ್ ಅಂಗಳದ ಹೊಸ “ರಾಜಾ”..!

Sikandar Raza: ಈ ಹಂತದಲ್ಲಿ 110 ರನ್ ಬಾರಿಸಿದ್ದ ಇನ್ನೊಸೆಂಟ್ ಕಯಾ ಔಟಾದರೆ, ಸಿಕಂದರ್ ರಾಜಾ ಎಚ್ಚರಿಕೆಯ ಆಟ ಮುಂದುವರೆಸಿದರು. ಪರಿಣಾಮ ರಾಜಾ ಬ್ಯಾಟ್​ನಿಂದ 109 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 8 ಫೋರ್​ನೊಂದಿಗೆ ಅಜೇಯ 135 ರನ್​ ಮೂಡಿಬಂತು.

ಕ್ಯಾನ್ಸರ್ ಗೆದ್ದ ಆಟಗಾರ, ಇದೀಗ ಜಿಂಬಾಬ್ವೆ ಕ್ರಿಕೆಟ್ ಅಂಗಳದ ಹೊಸ ರಾಜಾ..!
Sikandar Raza
TV9 Web
| Edited By: |

Updated on: Aug 06, 2022 | 12:55 PM

Share

304 ರನ್​ಗಳ ಟಾರ್ಗೆಟ್​…ಈ ಸ್ಕೋರ್ ಬೆನ್ನತ್ತಿದ ತಂಡ 6 ರನ್​ಗಳಿಸುವಷ್ಟರಲ್ಲಿ ಪ್ರಮುಖ 2 ವಿಕೆಟ್​ ಕಳೆದುಕೊಂಡಿತು. ಇದಾಗ್ಯೂ ಅಂತಿಮವಾಗಿ ಚೇಸಿಂಗ್ ಮೂಲಕ ತಂಡವೊಂದು ಜಯ ಸಾಧಿಸುತ್ತದೆ ಎಂದು ಭಾವಿಸುತ್ತೀರಾ? ಅದು ಕೂಡ ಪ್ರಮುಖ ಬೌಲಿಂಗ್ ಬಳಗವನ್ನು ಹೊಂದಿರುವ ತಂಡದ ವಿರುದ್ದ ಎಂದರೆ…ಹೌದು, ಜಿಂಬಾಬ್ವೆ ತಂಡವು ಇದೀಗ ಮತ್ತೊಮ್ಮೆ ಕ್ರಿಕೆಟ್ ಅಂಗಳದಲ್ಲಿ ಪುಟಿದೇಳುತ್ತಿದೆ. ಪ್ರತಿ ಪಂದ್ಯದಲ್ಲೂ ಒಬ್ಬೊಬ್ಬರು ಮ್ಯಾಚ್ ವಿನ್ನರ್​ಗಳು ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಅನುಭವಿ ಆಟಗಾರರಿಂದ ಸ್ಥಿರ ಪ್ರದರ್ಶನ ಮೂಡಿ ಬರುತ್ತಿದೆ. ಇದೇ ಕಾರಣದಿಂದಾಗಿ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ದ ಜಿಂಬಾಬ್ವೆ ಟಿ20 ಸರಣಿ ಗೆದ್ದುಕೊಂಡಿತ್ತು. ಆ ಗೆಲುವಿನ ರೂವಾರಿಗಳೆಂದರೆ ರಿಯಾನ್ ಬರ್ಲ್ ಮತ್ತು ಸಿಕಂದರ್ ರಾಜಾ. ಇದೀಗ ಮೊದಲ ಏಕದಿನ ಪಂದ್ಯದಲ್ಲೂ ಜಿಂಬಾಬ್ವೆ ಭರ್ಜರಿ ಜಯ ಸಾಧಿಸಿದೆ. ಅದು ಕೂಡ 304 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ಇಲ್ಲಿ ವಿಶೇಷ.

ಬಾಂಗ್ಲಾ ನೀಡಿದ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಜಿಂಬಾಬ್ವೆ ಕೇವಲ 6 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಸಿಕಂದರ್ ರಾಜಾ ಹಾಗೂ ಇನ್ನೋಸೆಂಟ್ ಕಾಯಾ 192 ರನ್​ಗಳ ಜೊತೆಯಾಟವಾಡಿದರು. ಇಬ್ಬರೂ ಅಮೋಘ ಶತಕ ಸಿಡಿಸಿ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೊನೆಯ 10 ಓವರ್​ಗಳಲ್ಲಿ ಜಿಂಬಾಬ್ವೆ ತಂಡಕ್ಕೆ 62 ರನ್​ಗಳ ಅವಶ್ಯಕತೆಯಿತ್ತು.

ಈ ಹಂತದಲ್ಲಿ 110 ರನ್ ಬಾರಿಸಿದ್ದ ಇನ್ನೊಸೆಂಟ್ ಕಯಾ ಔಟಾದರೆ, ಸಿಕಂದರ್ ರಾಜಾ ಎಚ್ಚರಿಕೆಯ ಆಟ ಮುಂದುವರೆಸಿದರು. ಪರಿಣಾಮ ರಾಜಾ ಬ್ಯಾಟ್​ನಿಂದ 109 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 8 ಫೋರ್​ನೊಂದಿಗೆ ಅಜೇಯ 135 ರನ್​ ಮೂಡಿಬಂತು. ಅಲ್ಲದೆ ಅಂತಿಮ ಹಂತದವರೆಗೆ ನಿಂತು 49ನೇ ಓವರ್​ನ 2ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸಿಕಂದರ್ ರಾಜಾ ಜಿಂಬಾಬ್ವೆ ತಂಡಕ್ಕೆ 5 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಿಶೇಷ ಎಂದರೆ ಇದೇ ಸಿಕಂದರ್ ರಾಜಾ ಈ ಹಿಂದೊಮ್ಮೆ ಜಿಂಬಾಬ್ವೆ ತಂಡದಲ್ಲಿ ಹೊಸ ಭರವಸೆ ಮೂಡಿಸಿದ್ದರು. ಇದಾದ ಬಳಿಕ ಅವರಿಗೆ ಅಸ್ಥಿಮಜ್ಜೆಯಲ್ಲಿ ಸೋಂಕು ತಗುಲಿತ್ತು. ಇದರಿಂದ ಸಿಕಂದರ್‌ ರಾಜಾ ಕ್ಯಾನ್ಸರ್ ರೋಗಕ್ಕೆ ತುತ್ತಾಗುವ ಅಪಾಯ ಎದುರಿಸಿದ್ದರು. ಇದೇ ಕಾರಣದಿಂದಾಗಿ ರಾಜಾ ಕೆಲ ಕಾಲ ಮೈದಾನದಿಂದ ಹೊರಗುಳಿದಿದ್ದರು. ಅದೃಷ್ಟವಶಾತ್ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆದ ಪರಿಣಾಮ ಅವರು ಗುಣಮುಖರಾಗಿ ಮತ್ತೆ ಜಿಂಬಾಬ್ವೆ ತಂಡದಲ್ಲಿ ಅವಕಾಶ ಪಡೆದರು.

ಆದರೆ ಅವರ ಕಂಬ್ಯಾಕ್ ಮಾತ್ರ ಅದ್ಭುತ ಫಾರ್ಮ್​ನೊಂದಿಗೆ ಎಂಬುದು ವಿಶೇಷ. ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಪ್ರತಿ ಪಂದ್ಯದಲ್ಲೂ ಆಲ್​ರೌಂಡರ್ ಪ್ರದರ್ಶನ ನೀಡುತ್ತಿರುವ ಸಿಕಂದರ್ ರಾಜಾ ಇದೀಗ ಜಿಂಬಾಬ್ವೆ ತಂಡಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ. ಅಷ್ಟೇ ಅಲ್ಲದೆ ತಂಡವು ಅತ್ಯುತ್ತಮ ಪ್ರದರ್ಶನ ಮುಂದುವರೆಸಿದ್ದದ್ದು, ಮುಂಬರುವ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲೂ ಭರ್ಜರಿ ಪ್ರದರ್ಶನ ನೀಡಿ ಮತ್ತೊಮ್ಮೆ ವಿಶ್ವ ಕ್ರಿಕ್ರೆಟ್ ಪ್ರೇಮಿಗಳ ಮನಗೆಲ್ಲುವ ಇರಾದೆಯಲ್ಲಿದ್ದಾರೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​