AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ

RCB's 2026 IPL Journey Starts in Bengaluru: 2026ರ ಐಪಿಎಲ್ ಸಮೀಪಿಸುತ್ತಿದ್ದು, ಹಾಲಿ ಚಾಂಪಿಯನ್ ಆರ್‌ಸಿಬಿಗೆ ಬೆಂಗಳೂರಿನಲ್ಲೇ ತವರು ಪಂದ್ಯಗಳು ನಡೆಯಲಿವೆ. ಅಭಿಮಾನಿಗಳಿಗೆ ಇದು ಭರ್ಜರಿ ಸಿಹಿ ಸುದ್ದಿ. ಉದ್ಘಾಟನಾ ಪಂದ್ಯವೂ ಬೆಂಗಳೂರಿನಲ್ಲಿ ನಿಗದಿಯಾಗಿದ್ದು, ಸಾಂಪ್ರದಾಯಿಕವಾಗಿ ಪಂಜಾಬ್ ಕಿಂಗ್ಸ್ ಜೊತೆಗಿರಬೇಕಿತ್ತು. ಆದರೆ, ವರದಿಗಳ ಪ್ರಕಾರ ಆರ್‌ಸಿಬಿ ಈ ಬಾರಿ ಕೆಕೆಆರ್ ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿದೆ.

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ
Rcb
ಪೃಥ್ವಿಶಂಕರ
|

Updated on:Mar 03, 2026 | 5:54 PM

Share

2026 ರ ಐಪಿಎಲ್ (IPL 2026) ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ (RCB) ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯವನ್ನು ಆಡಬೇಕಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ಆರ್​ಸಿಬಿ, ಕೆಕೆಆರ್ ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿದೆ ಎಂದು ವರದಿಯಾಗಿದೆ.

ಚಿನ್ನಸ್ವಾಮಿಗೆ ಮತ್ತೆ ಮರಳಿದ ಕ್ರಿಕೆಟ್

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಳೆದ ವರ್ಷ ನಡದಿದ್ದ ದುರಂತದ ಬಳಿಕ ಬೆಂಗಳೂರಿನಲ್ಲಿ ಒಂದೇ ಒಂದು ಕ್ರಿಕೆಟ್ ಪಂದ್ಯವೂ ನಡೆದಿರಲಿಲ್ಲ. ಹಾಗೆಯೇ ರಾಜ್ಯ ಸರ್ಕಾರ ಮತ್ತು ಆರ್​ಸಿಬಿ ಫ್ರಾಂಚೈಸಿ ನಡುವಿನ ಜಟಾಪಟಿಗಳಿಂದ ಈ ಬಾರಿ ಆರ್​ಸಿಬಿ ತನ್ನ ತವರು ಪಂದ್ಯಗಳನ್ನು ಬೇರೆಡೆ ಆಡಲಿದೆ ಎಂದು ವರದಿಗಳಾಗಿದ್ದವು. ಇದಕ್ಕೆ ಪೂರಕವಾಗಿ ಆರ್​ಸಿಬಿ ಫ್ರಾಂಚೈಸಿ ಕೂಡ ಬೇರೆ ಸ್ಥಳಗಳ ಹುಡುಕಾಟದಲ್ಲಿತ್ತು. ಆದರೀಗ ಆರ್​ಸಿಬಿ ಫ್ರಾಂಚೈಸಿ ಎಲ್ಲಾ ಬೇಡಿಕೆಗಳು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಆದೇಶಗಳನ್ನು ಕೆಎಸ್​ಸಿಎ ಸಂಪೂರ್ಣವಾಗಿ ಜಾರಿಗೆ ತರುವ ಕೆಲಸ ಮಾಡುತ್ತಿರುವುದರಿಂದ ಚಿನ್ನಸ್ವಾಮಿಗೆ ಮತ್ತೆ ಕ್ರಿಕೆಟ್ ಮರಳಿದೆ.

ಬೆಂಗಳೂರಿನಲ್ಲಿ 5 ಪಂದ್ಯಗಳು

2026 ರ ಐಪಿಎಲ್ ವೇಳಾಪಟ್ಟಿ ಪ್ರಸ್ತುತ ಪ್ರಕಟವಾಗಿಲ್ಲ. ಆದಾಗ್ಯೂ ಈ ಬಾರಿಯ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾಗಲಿದೆ ಎಂದು ವರದಿಯಾಗಿದೆ. ಅದರಂತೆ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ ಎಂದು ವರದಿಯಾಗಿದೆ. ಇದರ ಜೊತೆಗೆ ಆರ್​ಸಿಬಿ ತವರು ಪಂದ್ಯಗಳ ಲೆಕ್ಕದಲ್ಲಿ ಐದು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಲಿದ್ದು, ಉಳಿದ ಎರಡು ಪಂದ್ಯಗಳನ್ನು ಛತ್ತೀಸ್​ಗಢದ ರಾಯ್​ಪುರದಲ್ಲಿ ಆಡಲಿದೆ ಎಂದು ಹೇಳಲಾಗುತ್ತಿದೆ. ಇದರರ್ಥ ಬೆಂಗಳೂರು ಹೊರತಾಗಿ ರಾಯ್​ಪುರ ಕೂಡ ಆರ್​ಸಿಬಿಯ ಎರಡನೇ ತವರು ಮೈದಾನವಾಗಲಿದೆ.

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

ಆರ್​ಸಿಬಿ ಸಿಎಒ ಹೇಳಿದ್ದಿದು

ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಆರ್​ಸಿಬಿ ಸಿಇಒ ರಾಜೇಶ್ ಮೆನನ್, ‘ಚಿನ್ನಸ್ವಾಮಿ ಕ್ರೀಡಾಂಗಣವು ನಮಗೆ ತವರು ಮೈದಾನಕ್ಕಿಂತ ಹೆಚ್ಚಿನದು. ತಂಡವಾಗಿ ನಮ್ಮ ಗುರುತು ನಿಜವಾಗಿಯೂ ಜೀವಂತವಾಗುವ ಸ್ಥಳ ಇದು. ಬೆಂಗಳೂರಿಗೆ ನಮ್ಮ ಅಭಿಮಾನಿಗಳು ತರುವ ಶಕ್ತಿಯು ನಮ್ಮ ಆಟಗಾರರಿಗೆ ಯಾವಾಗಲೂ ಪ್ರೇರಕ ಶಕ್ತಿಯಾಗಿದೆ, ಆಟದ ಪ್ರತಿಯೊಂದು ಹಂತದಲ್ಲೂ ಅವರಿಗೆ ಸ್ಫೂರ್ತಿ ನೀಡುತ್ತದೆ. ನಮ್ಮ ಅಭಿಮಾನಿಗಳು ಬೇಷರತ್ತಾಗಿ ನಮ್ಮೊಂದಿಗೆ ನಿಂತಿದ್ದು, ಅವರು ತಮ್ಮ ತಂಡವು ಮನೆಯಲ್ಲಿ ಆಡುವುದನ್ನು ವೀಕ್ಷಿಸುವ ಅವಕಾಶಕ್ಕೆ ಅರ್ಹರು.

ರಾಜ್ಯ ಸರ್ಕಾರ, ಕೆಎಸ್​ಸಿಎ ಜೊತೆಗಿನ ಚರ್ಚೆಗಳು ಮತ್ತು ಅನುಮತಿಗಳ ಕುರಿತು ಅಗತ್ಯವಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ, ಆರ್‌ಸಿಬಿ ಬೆಂಗಳೂರಿನಲ್ಲಿ ಐದು ಪಂದ್ಯಗಳನ್ನು ಆಡಲಿದೆ ಎಂದು ದೃಢೀಕರಿಸಲು ನಮಗೆ ಸಂತೋಷವಾಗಿದೆ. ಇದನ್ನು ಸಾಧ್ಯವಾಗಿಸುವಲ್ಲಿ ಬೆಂಬಲ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರ, ಕೆಎಸ್‌ಸಿಎ ಮತ್ತು ಕರ್ನಾಟಕ ಪೊಲೀಸರಿಗೆ ನಾವು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Tue, 3 March 26

Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ