AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಆರ್​ಸಿಬಿ ತಂಡಕ್ಕೆ ಹೊಸ ನಿರ್ದೇಶಕರ ನೇಮಕ..!

RCB: ಈ ಮಾಹಿತಿಯನ್ನು ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫ್ರಾಂಚೈಸ್, ಇಂಗ್ಲೆಂಡ್ ತಂಡದ ಪ್ರದರ್ಶನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮೊ ಬೊಬಾಟ್ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ.

RCB: ಆರ್​ಸಿಬಿ ತಂಡಕ್ಕೆ ಹೊಸ ನಿರ್ದೇಶಕರ ನೇಮಕ..!
ಮೊ ಬೊಬಾಟ್
ಪೃಥ್ವಿಶಂಕರ
|

Updated on:Sep 29, 2023 | 3:35 PM

Share

2024ರ ಐಪಿಎಲ್ (IPL 2024) ಆರಂಭಕ್ಕೂ ಮುನ್ನ ತಂಡದಲ್ಲಿ ಹಲವು ಪ್ರಮುಖ ಬದಲಾವಣೆಗಳಿಗೆ ಕೈಹಾಕಿರುವ ಆರ್​ಸಿಬಿ (RCB) ಫ್ರಾಂಚೈಸ್ ಇದೀಗ ತಂಡಕ್ಕೆ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ. ಈ ಮಾಹಿತಿಯನ್ನು ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫ್ರಾಂಚೈಸ್, ಇಂಗ್ಲೆಂಡ್ ತಂಡದ ಪ್ರದರ್ಶನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮೊ ಬೊಬಾಟ್ (Mo Bobat) ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ. ಈ ಹಿಂದೆ ಮೈಕ್ ಹೆಸ್ಸನ್ (Mike Hesson) ನಿರ್ವಹಿಸಿದ್ದ ಈ ಪಾತ್ರವನ್ನು ಇನ್ನು ಮುಂದೆ ಬೊಬಾಟ್ ನಿರ್ವಹಿಸಲಿದ್ದಾರೆ. ಪ್ರಸ್ತುತ ಇಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೊಬಾಬ್ ಮುಂದಿನ ವರ್ಷದ ಆರಂಭದಲ್ಲಿ ಇಸಿಬಿಯಲ್ಲಿ ತಮ್ಮ ಸ್ಥಾನವನ್ನು ತೊರೆದು ಆರ್​ಸಿಬಿ ಸೇರಿಕೊಳ್ಳಲಿದ್ದಾರೆ.

ಇಸಿಬಿ ತಂಡದಲ್ಲಿ ಅದ್ಭುತ ಸಾಧನೆ

ಈ ಬಗ್ಗೆ ತನ್ನ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಫ್ರಾಂಚೈಸ್, ‘ಆರ್‌ಸಿಬಿ ತಂಡದ ನಿರ್ದೇಶಕರಾಗಿ ಮೊ ಬೊಬಾಟ್ ಅವರನ್ನು ನೇಮಿಸಲಾಗಿದೆ. 2019 ರಿಂದ ಇಂಗ್ಲೆಂಡ್ ಕ್ರಿಕೆಟ್‌ ತಂಡದ ಪ್ರದರ್ಶನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಬೊಬಾಟ್, 12 ವರ್ಷಗಳ ಕಾಲ ಇಸಿಬಿ ಸೆಟಪ್‌ನ ಭಾಗವಾಗಿದ್ದಾರೆ. ಈ ಸಮಯದಲ್ಲಿ ಇಂಗ್ಲೆಂಡ್ ಟಿ20 ಮತ್ತು ಏಕದಿನ ವಿಶ್ವಕಪ್‌ಗಳನ್ನು ಎತ್ತಿಹಿಡಿದಿದೆ. ಅಲ್ಲದೆ ಬೊಬಾಟ್ ಅವರು, ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಆಂಡಿ ಫ್ಲವರ್ ಅವರೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡಿದ್ದಾರೆ’ ಎಂದು ಪೋಸ್ಟ್‌ನಲ್ಲಿ ಬರೆದಿದೆ.

RCB: ‘ನಿರಾಸೆ ತಂದಿದೆ’; ಆರ್​ಸಿಬಿಯಿಂದ ಹೊರಬಿದ್ದ ಕೂಡಲೇ ಮೌನ ಮುರಿದ ಮೈಕ್ ಹೆಸ್ಸನ್

ಸಂತಸ ವ್ಯಕ್ತಪಡಿಸಿದ ಪ್ರಥಮೇಶ್ ಮಿಶ್ರಾ

ಆರ್​ಸಿಬಿ ಚೇರ್ಮನ್ ಪ್ರಥಮೇಶ್ ಮಿಶ್ರಾ ಈ ಬಗ್ಗೆ ಮಾತನಾಡಿ, ‘ತಂಡದ ಕ್ರಿಕೆಟ್ ನಿರ್ದೇಶಕರಾಗಿ ಮೊ ಬೊಬಾಟ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಆರ್​ಸಿಬಿ ಯಾವಾಗಲೂ ಪ್ರದರ್ಶನ-ಆಧಾರಿತ ವಿಧಾನದ ಮೇಲೆ ಕೇಂದ್ರೀಕರಿಸಿದೆ. ಇಷ್ಟು ದಿನ ಇಂಗ್ಲೆಂಡ್ ತಂಡದಲ್ಲಿ ಈ ಪಾತ್ರ ನಿರ್ವಹಿಸಿರುವ ಬೊಬಾಟ್ ಅವರು ತಮ್ಮನ್ನು ತಾವು ಈಗಾಗಲೇ ಸಾಬೀತುಪಡಿಸಿದ್ದಾರೆ. ಪರಿಣತಿ ಮತ್ತು ವರ್ಷಗಳ ಅನುಭವದೊಂದಿಗೆ ಅವರು ಆರ್​ಸಿಬಿ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದಿದ್ದಾರೆ.

ಬೊಬಾಟ್ ಹೇಳಿದ್ದಿದು

ಇನ್ನು ಆರ್​ಸಿಬಿ ತಂಡಕ್ಕೆ ಸೇರಿದ ಬಳಿಕ ಮಾತನಾಡಿದ ಬೊಬಾಟ್, ‘ನಾನು ಆರ್​ಸಿಬಿ ತಂಡದವನ್ನು ಕ್ರಿಕೆಟ್ ನಿರ್ದೇಶಕನಾಗಿ ಸೇರಲು ಉತ್ಸುಕನಾಗಿದ್ದೇನೆ. ಆರ್ಸಿಬಿ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಅವರಿಗೆ ಸೇವೆ ಸಲ್ಲಿಸಲು ಇದು ದೊಡ್ಡ ಗೌರವವಾಗಿದೆ. ಆಂಡಿ ಫ್ಲವರ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Fri, 29 September 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ