AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು RCB = ರಾಯಲ್ ಚಾಲೆಂಜರ್ಸ್​ ಬಾಂಬೆ..!

IPL 2022: ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಕೇವಲ 3 ಗೆಲುವು ದಾಖಲಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ​.

ಇಂದು RCB = ರಾಯಲ್ ಚಾಲೆಂಜರ್ಸ್​ ಬಾಂಬೆ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 21, 2022 | 2:59 PM

Share

IPL 2022: ಐಪಿಎಲ್​ನ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ (DC vs MI) ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ (RCB) ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಮಾತ್ರ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. ಹಾಗೆಯೇ ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ. ಹಾಗಾಗಿ ಡೆಲ್ಲಿ – ಮುಂಬೈ (MI vs DC)  ಕದನವು ಆರ್​ಸಿಬಿ ತಂಡದ ಪ್ಲೇಆಫ್​ ಅನ್ನು ನಿರ್ಧರಿಸಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕೆಂದು ಆರ್​ಸಿಬಿ ಅಭಿಮಾನಿಗಳು ಬಯಸುತ್ತಿದ್ದಾರೆ. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಆರ್​ಸಿಬಿ ತಂಡವು ಐಪಿಎಲ್​ನಿಂದ ಹೊರಬೀಳಲಿದೆ. ಇದಾಗ್ಯೂ ಈ ಪಂದ್ಯದ ಫಲಿತಾಂಶ ಮುಂಬೈ ಇಂಡಿಯನ್ಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಏಕೆಂದರೆ ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಕೇವಲ 3 ಗೆಲುವು ದಾಖಲಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ​. ಸೋತರೆ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇಆಫ್​ ಪ್ರವೇಶಿಸಲಿದೆ. ಹೀಗಾಗಿಯೇ ಖುದ್ದು ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಸೇರಿದಂತೆ ಬಹುತೇಕ ಆರ್​ಸಿಬಿ ಆಟಗಾರರು ಮುಂಬೈ ಇಂಡಿಯನ್ಸ್ ಗೆಲ್ಲಲಿ ಎಂದು ಬಯಸಿದ್ದಾರೆ.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ವಿರಾಟ್ ಕೊಹ್ಲಿ, ಶನಿವಾರ ಮುಂಬೈ ಇಂಡಿಯನ್ಸ್​ಗೆ ಹೆಚ್ಚುವರಿ 25 ಮಂದಿ ಬೆಂಬಲಿಗರು (ಆರ್‌ಸಿಬಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ) ಇರಲಿದ್ದಾರೆ. ಅವರು ಕ್ರೀಡಾಂಗಣದಿಂದ ಹುರಿದುಂಬಿಸುವುದನ್ನು ಸಹ ಕಾಣಬಹುದು ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮುಂಬೈ ಇಂಡಿಯನ್ಸ್​ ನಮ್ಮ ಸಪೋರ್ಟ್ ಎಂದು ತಿಳಿಸಿದ್ದಾರೆ. ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕೆಂದು ಬಯಸುತ್ತಿದ್ದಾರೆ.

ಇದರ ಬೆನ್ನಲ್ಲೇ ಮಾಜಿ ಆರ್​ಸಿಬಿ ಆಟಗಾರ ವಾಸಿಂ ಜಾಫರ್ ಹಂಚಿಕೊಂಡಿರುವ ಪೋಸ್ಟ್​ವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಪಂದ್ಯವಾಡುತ್ತಿರುವುದು ಅವರು, ಆದರೆ ಪಂದ್ಯ ನಮ್ಮದು ಎಂಬ ಪೋಸ್ಟ್​ವೊಂದನ್ನು ಜಾಫರ್ ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ ಇವತ್ತು ಆರ್​ಸಿಬಿ ಅಂದರೆ ರಾಯಲ್ ಚಾಲೆಂಜರ್ಸ್ ಬಾಂಬೆ (RCB=Royal Challengers Bombay) ಎಂಬ ಕ್ಯಾಪ್ಷನ್ ನೀಡಿದ್ದಾರೆ.

ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯವಾಡುತ್ತಿದ್ದರೂ, ಪಂದ್ಯದ ಫಲಿತಾಂಶ ಆರ್​ಸಿಬಿಗೆ ಮುಖ್ಯ. ಹೀಗಾಗಿ ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಇದು ರಾಯಲ್ ಚಾಲೆಂಜರ್ಸ್ ಬಾಂಬೆ (ಮುಂಬೈ) ಪಂದ್ಯ ಎಂದು ವಾಸಿಂ ಜಾಫರ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಒಟ್ಟಿನಲ್ಲಿ ಇಂದಿನ ಪಂದ್ಯವು ಮುಂಬೈ ಇಂಡಿಯನ್ಸ್​ ಅಭಿಮಾನಿಗಳಿಗಿಂತ ಆರ್​ಸಿಬಿ ಅಭಿಮಾನಿಗಳಿಗೆ ಬಹುಮುಖ್ಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ತಾರೆ ಎಂಬುದೇ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಅಭಿಮಾನಿಗಳ ಕುತೂಹಲ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ