AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ‘ಬಿಗ್ ಬಾಯ್ಸ್’ ಹೇಳಿಕೆ!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು 'ಬಿಗ್ ಬಾಯ್ಸ್' ಹೇಳಿಕೆ!
Rcb - Ambati RayuduImage Credit source: IPL
ಝಾಹಿರ್ ಯೂಸುಫ್
|

Updated on: Jun 01, 2026 | 12:31 PM

Share

17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದು 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಐಪಿಎಲ್​ನಲ್ಲಿ ಸತತ ಎರಡು ಟ್ರೋಫಿ ಗೆದ್ದ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯ ಬೆನ್ನಲ್ಲೇ, ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟು ಟೀಕಾಗಾರನೆಂದೇ ಗುರುತಿಸಿಕೊಂಡಿದ್ದ ಅಂಬಾಟಿ ರಾಯುಡು ಅವರೇ ಇದೀಗ ಆರ್​ಸಿಬಿ ತಂಡವನ್ನು ‘ಬಿಗ್ ಬಾಯ್ಸ್’ ಪಡೆ ಎಂದು ಹೊಗಳಿದ್ದಾರೆ. ಅಂದರೆ ಸಾಟಿಯಿಲ್ಲದ ಸರದಾರರು ಎಂದರ್ಥ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಯುಡು, ಆರ್‌ಸಿಬಿ ತಂಡದ ಈ ಅದ್ಭುತ ಪರಿವರ್ತನೆಯನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

“ಈ ಹಿಂದೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ ಅವರಂತಹ ಸ್ಟಾರ್ ಆಟಗಾರರ ಮೇಲೆ ಅವಲಂಭಿತವಾಗಿತ್ತು. ಆದರೆ ಇದೀಗ ತಂಡ ಬದಲಾಗಿದೆ. ಒಂದು ತಂಡವಾಗಿ ಹೋರಾಡುತ್ತಿದ್ದಾರೆ”.

“ಆರ್​ಸಿಬಿ ತಂಡದ ಪ್ರದರ್ಶನವನ್ನು ಗಮನಿಸಿದರೆ, ಅವರು ಐಪಿಎಲ್​ನ ಬಿಗ್ ಬಾಯ್ಸ್ ಎಂಬುದರಲ್ಲಿ ಸಂಶಯವೇ ಇಲ್ಲ. ಪ್ರಸ್ತುತ ಇರುವ ತಂಡವು ಈ ಹಿಂದಿನ ಚಾಂಪಿಯನ್​ಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್​ ತಂಡಗಳಿಗಿಂತ ಬಲಿಷ್ಠವಾಗಿದೆ” ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

“ಅಷ್ಟೇ ಅಲ್ಲದೆ ಇದು ಆರ್​ಸಿಬಿ ತಂಡದ ಯುಗ. ಈ ಯುಗದಲ್ಲಿ ಅವರು ಈ ಹಿಂದಿನ ಚಾಂಪಿಯನ್​ ತಂಡಗಳಿಗೆ ಸಮನಾದ ಪ್ರದರ್ಶನ ನೀಡುತ್ತಿದೆ. ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ರಾಯುಡು ಅವರನ್ನು ಆರ್​ಸಿಬಿ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

ಏಕೆಂದರೆ ಅಂಬಾಟಿ ರಾಯುಡು ಈ ಹಿಂದೆ ಆರ್​ಸಿಬಿ ತಂಡವನ್ನು ಲೇವಡಿ ಮಾಡಿದ್ದರು. ಅಲ್ಲದೆ ಅವಕಾಶ ಸಿಕ್ಕಾಗೆಲ್ಲಾ ಆರ್​ಸಿಬಿ ತಂಡವನ್ನು ಟೀಕಿಸಿದ್ದರು. ಇದಕ್ಕೆ ಸಾಕ್ಷಿ ಅವರ ಈ ಹಿಂದಿನ ಹೇಳಿಕೆಗಳು…

  • ಟ್ರೋಫಿ ಸಂಖ್ಯೆಯ ಲೇವಡಿ: RCB ತನ್ನ ಮೊದಲ ಐಪಿಎಲ್ ಟ್ರೋಫಿ ಗೆದ್ದಾಗ ಲೇವಡಿ ಮಾಡಿದ್ದ ರಾಯುಡು, “ನಿಮಗೆ ಒಂದು ಕಪ್ ಗೆಲ್ಲಲು 18 ವರ್ಷ ಬೇಕಾಯಿತು, ಹಾಗಾದರೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 5 ಟ್ರೋಫಿಗಳ ದಾಖಲೆ ಸರಿಗಟ್ಟಲು ನಿಮಗೆ 72 ವರ್ಷ ಬೇಕಾಗಬಹುದು” ಎಂದು ಕಾಲೆಳೆದಿದ್ದರು.
  • ಸಂಭ್ರಮಾಚರಣೆಗೆ ಟೀಕೆ: 2024ರ ಐಪಿಎಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಟೂರ್ನಿಯಿಂದ ಹೊರಹಾಕಿದಾಗ ಆರ್‌ಸಿಬಿ ಆಟಗಾರರು ಮತ್ತು ಅಭಿಮಾನಿಗಳು ರಸ್ತೆಯಲ್ಲಿ ಅತಿಯಾಗಿ ಸಂಭ್ರಮಿಸಿದ್ದನ್ನು ರಾಯುಡು ಟೀಕಿಸಿದ್ದರು. “ಕೇವಲ ಸಂಭ್ರಮಾಚರಣೆಗಳು ನಿಮಗೆ ಟ್ರೋಫಿ ತಂದುಕೊಡುವುದಿಲ್ಲ” ಎಂದು ತಿವಿದಿದ್ದರು.

ಇದನ್ನೂ ಓದಿ: Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬದಲಾಗಿದೆ. ಈ ಹಿಂದೆ ಟೀಕಿಸಿದ ಅಂಬಾಟಿ ರಾಯುಡುವೇ, ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More