AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ದಾಖಲೆಯನ್ನೇ ಧೂಳೀಪಟ ಮಾಡಿದ RCB

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

CSK ದಾಖಲೆಯನ್ನೇ ಧೂಳೀಪಟ ಮಾಡಿದ RCB
RCBImage Credit source: IPL
ಝಾಹಿರ್ ಯೂಸುಫ್
|

Updated on: May 27, 2026 | 8:03 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಆರ್ಭಟಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹೆಸರಿನಲ್ಲಿದ್ದ 2 ಭರ್ಜರಿ ರೆಕಾರ್ಡ್​ಗಳನ್ನು ಅಳಿಸಿ ಹಾಕಿದ್ದಾರೆ.

ಧರ್ಮಾಶಾಲಾದಲ್ಲಿ ನಡೆದ ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ (19), ವಿರಾಟ್ ಕೊಹ್ಲಿ (43), ದೇವದತ್ ಪಡಿಕ್ಕಲ್ (30), ರಜತ್ ಪಾಟಿದಾರ್ (93), ಕೃನಾಲ್ ಪಾಂಡ್ಯ (43) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು ಬಾರಿಸಿದ ಒಟ್ಟು ಬೌಂಡರಿಗಳ ಸಂಖ್ಯೆ ಬರೋಬ್ಬರಿ 38 .

ಇದರೊಂದಿಗೆ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು (ಫೋರ್ ಮತ್ತು ಸಿಕ್ಸ್​) ಬಾರಿಸಿದ ದಾಖಲೆ ಆರ್​ಸಿಬಿ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೆಸರಿನಲ್ಲಿತ್ತು.

CSK ದಾಖಲೆ ಉಡೀಸ್:

2012ರ ಪ್ಲೇಆಫ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ದಾಂಡಿಗರು ಬರೋಬ್ಬರಿ 33 ಬೌಂಡರಿಗಳನ್ನು ಬಾರಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ಇದೀಗ 14 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಆರ್​​ಸಿಬಿ ದಾಂಡಿಗರು ಯಶಸ್ವಿಯಾಗಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಬ್ಯಾಟರ್​ಗಳು 14 ಸಿಕ್ಸ್ ಹಾಗೂ 24 ಫೋರ್​ಗಳೊಂದಿಗೆ ಒಟ್ಟು 38 ಬೌಂಡರಿಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ತಂಡವೆಂಬ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಕಲೆಹಾಕಿದ್ದು 254 ರನ್​ಗಳು. ಈ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆರ್​ಸಿಬಿ 92 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

CSK ದಾಖಲೆ ಧೂಳೀಪಟ:

ಈ ಗೆಲುವಿನೊಂದಿಗೆ ಐಪಿಎಲ್​ ಪ್ಲೇಆಫ್​​ನಲ್ಲಿ (ನಾಕೌಟ್ ಅಲ್ಲದೇ) ಅತ್ಯಧಿಕ ರನ್​ಗಳ ಅಂತರದಿಂದ ವಿಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೆಸರಿನಲ್ಲಿತ್ತು.

ಸಿಎಸ್​ಕೆ ತಂಡವು 2012 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪ್ಲೇಆಫ್​ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿ ಇತಿಹಾಸ ನಿರ್ಮಿಸಿದ್ದರು. ಇದೀಗ 92 ರನ್​ಗಳ ಭರ್ಜರಿ ಜಯದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಈ ಮೂಲಕ ಐಪಿಎಲ್ ಪ್ಲೇಆಫ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಮ್ಮದಾಗಿಸಿಕೊಂಡಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮದುವೆ ಆಮಂತ್ರಣದಲ್ಲಿ ವಧು-ವರರ ಫೋಟೋ ಇರಬಹುದಾ?
ಮದುವೆ ಆಮಂತ್ರಣದಲ್ಲಿ ವಧು-ವರರ ಫೋಟೋ ಇರಬಹುದಾ?
ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು
ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್