AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿಯ ನಾಯಕತ್ವಕ್ಕೆ ಕುತ್ತು: ಟೂರ್ನಿ ಮಧ್ಯದಲ್ಲೇ ಹೊಸ ನಾಯಕನ ಆಯ್ಕೆ?

RCB: ದ್ವಿತಿಯಾರ್ಧದಲ್ಲಿ ಕೆಕೆಆರ್​​ ವಿರುದ್ದ ಸೋಲಿನೊಂದಿಗೆ ಆರ್​ಸಿಬಿ ಅಭಿಯಾನ ಆರಂಭಿಸಿದ್ದು, ಮುಂದಿನ ಪಂದ್ಯವನ್ನು ಸೆಪ್ಟೆಂಬರ್ 24 ರಂದು ಆಡಲಿದೆ.

Virat Kohli: ಕೊಹ್ಲಿಯ ನಾಯಕತ್ವಕ್ಕೆ ಕುತ್ತು: ಟೂರ್ನಿ ಮಧ್ಯದಲ್ಲೇ ಹೊಸ ನಾಯಕನ ಆಯ್ಕೆ?
Virat kohli
TV9 Web
| Edited By: |

Updated on: Sep 22, 2021 | 2:27 PM

Share

ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ಇತ್ತೀಚೆಗಷ್ಟೇ ತಮ್ಮ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಈ ಘೋಷಣೆ ಬೆನ್ನಲ್ಲೇ ನಡೆದ ಕೊಲ್ಕತ್ತಾ ನೈಟ್​ ರೈಡರ್ಸ್ (KKR)​ ವಿರುದ್ದದ ಪಂದ್ಯದಲ್ಲಿ ಆರ್​ಸಿಬಿ (Rcb) ಹೀನಾಯವಾಗಿ ಸೋಲನುಭವಿಸಿದೆ. ಇತ್ತ ಮುಂದಿನ ಸೀಸನ್​ನಲ್ಲಿ ಕೇವಲ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಯುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಕೊಹ್ಲಿಯ ಈ ದಿಢೀರ್ ರಾಜಿನಾಮೆ ಘೋಷಣೆಯಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಅನೇಕ ಮಾಜಿ ಕ್ರಿಕೆಟರುಗಳು ಅಭಿಪ್ರಾಯಪಟ್ಟಿದ್ದರು. ಈ ಅಭಿಪ್ರಾಯ ನಿಜವಾಗಲಿದೆ ಎಂಬಂತೆ ದ್ವಿತಿಯಾರ್ಧದದ ಮೊದಲ ಪಂದ್ಯದಲ್ಲೇ ಆರ್​ಸಿಬಿ ಮುಗ್ಗರಿಸಿದೆ. ಇನ್ನು ಮೊದಲಾರ್ಧದಲ್ಲಿ ಉತ್ತಮವಾಗಿ ಆಡಿದ್ದ ಆರ್​ಸಿಬಿ ದ್ವಿತಿಯಾರ್ಧದಲ್ಲಿ ಹೀನಾಯ ಪ್ರದರ್ಶನ ನೀಡಿರುವುದು ಆರ್​ಸಿಬಿ ಫ್ರಾಂಚೈಸಿಯ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಟೂರ್ನಿಯ ಮಧ್ಯೆ ಭಾಗದಲ್ಲೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಸಲಿದೆ ಎಂಬ ಗಾಢವಾದ ಸುದ್ದಿಯೊಂದು ಹರಿದಾಡುತ್ತಿದೆ.

ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನು ಟೂರ್ನಿಯ ಮಧ್ಯದಲ್ಲೇ ಕೈ ಬಿಡುವ ಸಾಧ್ಯತೆಯಿದೆ ಎಂದು ಮಾಜಿ ಕ್ರಿಕೆಟಿಗರೊಬ್ಬರು ಮಾಹಿತಿ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಈ ಬಗ್ಗೆ ಚರ್ಚಿಸಿದ್ದು, ಅದರಂತೆ ಕೊಹ್ಲಿಯನ್ನು ಕೆಳಗಿಳಿಸಿ ಉಳಿದ ಪಂದ್ಯಗಳಿಗೆ ಮತ್ತೋರ್ವ ನಾಯಕನನ್ನು ನೇಮಿಸಲಿದೆ. ಸದ್ಯ ಕೊಹ್ಲಿ ಕೂಡ ಕಳಪೆ ಫಾರ್ಮ್​ನಲ್ಲಿದ್ದು, ಹಾಗೆಯೇ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ನಾಯಕತ್ವವನ್ನು ತ್ಯಜಿಸಲು ಈಗಾಗಲೇ ನಿರ್ಧರಿಸಿದ್ದಾರೆ. ಹೀಗಾಗಿ ಫ್ರಾಂಚೈಸಿಯ ಈ ನಿರ್ಧಾರಕ್ಕೆ ಕೊಹ್ಲಿ ಕೂಡ ಸಮ್ಮತಿ ಸೂಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಹೆಸರು ಹೇಳಲಿಚ್ಛಿಸದ ಮಾಜಿ ಕ್ರಿಕೆಟಿಗ, ಐಪಿಎಲ್​ನಲ್ಲಿ ಇಂತಹ ಬದಲಾವಣೆ ಹೊಸದೇನಲ್ಲ. ಈ ಹಿಂದೆ ಕೂಡ ಹಲವು ತಂಡಗಳು ಅರ್ಧದಲ್ಲೇ ನಾಯಕನನ್ನು ಬದಲಿಸಿದೆ. ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಬದಲು ಇಯಾನ್ ಮೊರ್ಗನ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿತ್ತು. ಅಷ್ಟೇ ಅಲ್ಲದೆ ಐಪಿಎಲ್​ನ ಮೊದಲಾರ್ಧದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಅವರನ್ನು ಕೆಳಗಿಳಿಸಿ, ಕೇನ್ ವಿಲಿಯಮ್ಸನ್​ಗೆ ನಾಯಕತ್ವ ನೀಡಲಾಗಿತ್ತು. ಇದೇ ರೀತಿಯಲ್ಲೇ ಆರ್​ಸಿಬಿ ತಂಡದ ಉಳಿದ 6 ಪಂದ್ಯಗಳ ನಡುವೆ ತಂಡದ ನಾಯಕತ್ವ ಬದಲಾವಣೆ ಆಗಲಿದೆ ಎಂದು ಮಾಜಿ ಕ್ರಿಕೆಟಿಗ ಮಾಹಿತಿ ಬಿಚ್ಚಿಟ್ಟಿದ್ದಾರೆ.

ದ್ವಿತಿಯಾರ್ಧದಲ್ಲಿ ಕೆಕೆಆರ್​​ ವಿರುದ್ದ ಸೋಲಿನೊಂದಿಗೆ ಆರ್​ಸಿಬಿ ಅಭಿಯಾನ ಆರಂಭಿಸಿದ್ದು, ಮುಂದಿನ ಪಂದ್ಯವನ್ನು ಸೆಪ್ಟೆಂಬರ್ 24 ರಂದು ಆಡಲಿದೆ. ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದ ನಡೆಯಲಿರುವ ಈ ಪಂದ್ಯದ ವೇಳೆ ಅಥವಾ ಆ ಪಂದ್ಯದ ಫಲಿತಾಂಶದ ಬಳಿಕ ಆರ್​ಸಿಬಿ ತಂಡದ ನಾಯಕತ್ವ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಆರ್​ಸಿಬಿ ಫ್ರಾಂಚೈಸಿ ಇಂತಹ ನಿರ್ಧಾರ ಕೈಗೊಂಡರೆ, ಕೊಹ್ಲಿ ನಾಯಕತ್ವದಲ್ಲಿ ಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗುವುದಂತು ಸತ್ಯ.

ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್​ಗಳ ಪಟ್ಟಿ ಇಲ್ಲಿದೆ

ಇದನ್ನೂ ಓದಿ: IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

(RCB could remove Virat Kohli as captain mid-way through UAE leg)

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ