IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…

RCB: ಮೊದಲ ಕ್ವಾಲಿಫೈಯರ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಿಸಿ ಫೈನಲ್ ಪ್ರವೇಶಿಸಿದರೆ ಇದೇ ಮೈದಾನದಲ್ಲಿ ಮತ್ತೆ ಆಡುವ ಅವಕಾಶ ದೊರೆಯಲಿದೆ.

IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ...
RCB
Follow us
| Updated By: ಝಾಹಿರ್ ಯೂಸುಫ್

Updated on: Oct 05, 2021 | 6:12 PM

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ (IPL 2021) ಸೀಸನ್​ನಲ್ಲೂ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ಆದರೆ ಆರ್​ಸಿಬಿಗೆ ಇನ್ನು 2 ಪಂದ್ಯಗಳು ಬಾಕಿಯಿದೆ. ಅಕ್ಟೋಬರ್ 6 ರಂದು ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಸನ್​​ರೈಸರ್ಸ್​ ಹೈದರಾಬಾದ್ (RCB vs SRH) ವಿರುದ್ದ ಆಡಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಸೆಣಸಲಿದೆ. ಈ ಎರಡು ಪಂದ್ಯಗಳು ಆರ್​ಸಿಬಿ ಪಾಲಿಗೆ ಮಹತ್ವದ್ದು ಎಂಬುದು ವಿಶೇಷ. ಏಕೆಂದರೆ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ 20 ಅಂಕಗಳನ್ನು ಪಡೆಯಲಿದೆ. ಇದರಿಂದ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ಆರ್​ಸಿಬಿಗೆ ದೊರೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದರಿಂದ ಸಿಗುವ ಪ್ರಯೋಜನವೆಂದರೆ ಫೈನಲ್​ಗೇರಲು ಎರಡು ಅವಕಾಶ ದೊರೆಯುತ್ತದೆ.

ಅಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದರೆ ಆ ತಂಡವು ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ 2ನೇ ಕ್ವಾಲಿಫೈಯರ್​​ನಲ್ಲಿ ಗೆದ್ದ ತಂಡದೊಡನೆ ಎಲಿಮಿನೇಟರ್ ಪಂದ್ಯವನ್ನಾಡುವ ಅವಕಾಶ ದೊರೆಯಲಿದೆ. ಇದರಿಂದ ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ ಎಲಿಮಿನೇಟರ್​ ಪಂದ್ಯದ ಮೂಲಕ ಫೈನಲ್​ಗೆ ಪ್ರವೇಶಿಸುವ ಚಾನ್ಸ್ ಇರಲಿದೆ. ಆರ್​ಸಿಬಿಗೆ ಇಂತಹ ಅವಕಾಶ ದೊರೆಯಬೇಕಿದ್ದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆಯಲೇಬೇಕು. ಇನ್ನು ಆರ್​ಸಿಬಿಗೆ 2ನೇ ಸ್ಥಾನ ಪಡೆಯಲು ಉತ್ತಮ ಅವಕಾಶವಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಈ ಮೂಲಕ ಅಂಕಪಟ್ಟಿಯಲ್ಲಿರುವ ಅಗ್ರ ತಂಡದೊಂದಿಗೆ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಬಹುದು.

ಇನ್ನು ಅಂಕಪಟ್ಟಿಯಲ್ಲಿ ಕೊಹ್ಲಿ ಪಡೆ 2ನೇ ಸ್ಥಾನ ಪಡೆಯುವುದರಿಂದ ಸಿಗುವ ಮತ್ತೊಂದು ಪ್ರಯೋಜನವೆಂದರೆ ದುಬೈ ಸ್ಟೇಡಿಯಂನಲ್ಲಿ ಆಡೋದು. ಹೌದು, ಮೊದಲ ಕ್ವಾಲಿಫೈಯರ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಿಸಿ ಫೈನಲ್ ಪ್ರವೇಶಿಸಿದರೆ ಇದೇ ಮೈದಾನದಲ್ಲಿ ಮತ್ತೆ ಆಡುವ ಅವಕಾಶ ದೊರೆಯಲಿದೆ. ಅಂದರೆ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ನಡೆಯಲಿದ್ದು, ಹೀಗಾಗಿ ದುಬೈನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡುವ ಮೂಲಕ ಸಕಲ ರೀತಿಯಲ್ಲೂ ಸಜ್ಜಾಗಬಹುದು. ಹೀಗಾಗಿ 2ನೇ ಸ್ಥಾನಕ್ಕೇರಲು ಕೊಹ್ಲಿ ಪಡೆಗೆ ಮುಂದಿನ 2 ಪಂದ್ಯಗಳು ಕೂಡ ಮಹತ್ವದ್ದಾಗಿದೆ.

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

(RCB eye SRH scalp to remain in the fray for top two)

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ