AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…

RCB: ಮೊದಲ ಕ್ವಾಲಿಫೈಯರ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಿಸಿ ಫೈನಲ್ ಪ್ರವೇಶಿಸಿದರೆ ಇದೇ ಮೈದಾನದಲ್ಲಿ ಮತ್ತೆ ಆಡುವ ಅವಕಾಶ ದೊರೆಯಲಿದೆ.

IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ...
RCB
TV9 Web
| Edited By: |

Updated on: Oct 05, 2021 | 6:12 PM

Share

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ (IPL 2021) ಸೀಸನ್​ನಲ್ಲೂ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ಆದರೆ ಆರ್​ಸಿಬಿಗೆ ಇನ್ನು 2 ಪಂದ್ಯಗಳು ಬಾಕಿಯಿದೆ. ಅಕ್ಟೋಬರ್ 6 ರಂದು ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಸನ್​​ರೈಸರ್ಸ್​ ಹೈದರಾಬಾದ್ (RCB vs SRH) ವಿರುದ್ದ ಆಡಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಸೆಣಸಲಿದೆ. ಈ ಎರಡು ಪಂದ್ಯಗಳು ಆರ್​ಸಿಬಿ ಪಾಲಿಗೆ ಮಹತ್ವದ್ದು ಎಂಬುದು ವಿಶೇಷ. ಏಕೆಂದರೆ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ 20 ಅಂಕಗಳನ್ನು ಪಡೆಯಲಿದೆ. ಇದರಿಂದ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ಆರ್​ಸಿಬಿಗೆ ದೊರೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದರಿಂದ ಸಿಗುವ ಪ್ರಯೋಜನವೆಂದರೆ ಫೈನಲ್​ಗೇರಲು ಎರಡು ಅವಕಾಶ ದೊರೆಯುತ್ತದೆ.

ಅಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದರೆ ಆ ತಂಡವು ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ 2ನೇ ಕ್ವಾಲಿಫೈಯರ್​​ನಲ್ಲಿ ಗೆದ್ದ ತಂಡದೊಡನೆ ಎಲಿಮಿನೇಟರ್ ಪಂದ್ಯವನ್ನಾಡುವ ಅವಕಾಶ ದೊರೆಯಲಿದೆ. ಇದರಿಂದ ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ ಎಲಿಮಿನೇಟರ್​ ಪಂದ್ಯದ ಮೂಲಕ ಫೈನಲ್​ಗೆ ಪ್ರವೇಶಿಸುವ ಚಾನ್ಸ್ ಇರಲಿದೆ. ಆರ್​ಸಿಬಿಗೆ ಇಂತಹ ಅವಕಾಶ ದೊರೆಯಬೇಕಿದ್ದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆಯಲೇಬೇಕು. ಇನ್ನು ಆರ್​ಸಿಬಿಗೆ 2ನೇ ಸ್ಥಾನ ಪಡೆಯಲು ಉತ್ತಮ ಅವಕಾಶವಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಈ ಮೂಲಕ ಅಂಕಪಟ್ಟಿಯಲ್ಲಿರುವ ಅಗ್ರ ತಂಡದೊಂದಿಗೆ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಬಹುದು.

ಇನ್ನು ಅಂಕಪಟ್ಟಿಯಲ್ಲಿ ಕೊಹ್ಲಿ ಪಡೆ 2ನೇ ಸ್ಥಾನ ಪಡೆಯುವುದರಿಂದ ಸಿಗುವ ಮತ್ತೊಂದು ಪ್ರಯೋಜನವೆಂದರೆ ದುಬೈ ಸ್ಟೇಡಿಯಂನಲ್ಲಿ ಆಡೋದು. ಹೌದು, ಮೊದಲ ಕ್ವಾಲಿಫೈಯರ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಿಸಿ ಫೈನಲ್ ಪ್ರವೇಶಿಸಿದರೆ ಇದೇ ಮೈದಾನದಲ್ಲಿ ಮತ್ತೆ ಆಡುವ ಅವಕಾಶ ದೊರೆಯಲಿದೆ. ಅಂದರೆ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ನಡೆಯಲಿದ್ದು, ಹೀಗಾಗಿ ದುಬೈನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡುವ ಮೂಲಕ ಸಕಲ ರೀತಿಯಲ್ಲೂ ಸಜ್ಜಾಗಬಹುದು. ಹೀಗಾಗಿ 2ನೇ ಸ್ಥಾನಕ್ಕೇರಲು ಕೊಹ್ಲಿ ಪಡೆಗೆ ಮುಂದಿನ 2 ಪಂದ್ಯಗಳು ಕೂಡ ಮಹತ್ವದ್ದಾಗಿದೆ.

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

(RCB eye SRH scalp to remain in the fray for top two)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ