Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೋಬ್ಬರಿ 6155 ದಿನಗಳ ನಂತರ ಚೆನ್ನೈನಲ್ಲಿ ವಿಜಯ ಪತಾಕೆ ಹಾರಿಸಿದ ಆರ್​ಸಿಬಿ

RCB's Historic IPL 2025 Win: ಐಪಿಎಲ್ 2025ರ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. 17 ವರ್ಷಗಳ ಬಳಿಕ ಆರ್ಸಿಬಿ, ತವರಿನಲ್ಲಿ ಸಿಎಸ್ಕೆಯನ್ನು ಮಣಿಸಿದೆ. ಆರ್ಸಿಬಿ ನೀಡಿದ 197 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ, ಆರ್ಸಿಬಿಯ ಉತ್ತಮ ಬೌಲಿಂಗ್ ದಾಳಿಯ ಮುಂದೆ ಹೀನಾಯವಾಗಿ ಸೋಲುಂಡಿತು.ಈ ಗೆಲುವಿನೊಂದಿಗೆ ಆರ್ಸಿಬಿ ಪಾಯಿಂಟ್ ಪಟ್ಟಿಯಲ್ಲೂ ಪಾರುಪತ್ಯ ಮುಂದುವರೆಸಿದೆ.

IPL 2025: ಬರೋಬ್ಬರಿ 6155 ದಿನಗಳ ನಂತರ ಚೆನ್ನೈನಲ್ಲಿ ವಿಜಯ ಪತಾಕೆ ಹಾರಿಸಿದ ಆರ್​ಸಿಬಿ
Rcb Vs Csk
Follow us
ಪೃಥ್ವಿಶಂಕರ
|

Updated on:Mar 29, 2025 | 12:11 AM

ಐಪಿಎಲ್ 2025 ರ (IPL 2025) 8ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವೆ ಚೆನ್ನೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಗಳು ಯಾವ ಫಲಿತಾಂಶವನ್ನು ನಿರೀಕ್ಷಿಸಿದ್ದರೋ ಅದೇ ಫಲಿತಾಂಶ ಹೊರಬಿದ್ದಿದೆ. ಬರೋಬ್ಬರಿ 17 ವರ್ಷಗಳಿಂದ ಅಂದರೆ 6155 ದಿನಗಳಿಂದ ಸಿಎಸ್​ಕೆ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸಲು ಹೆಣಗಾಡುತ್ತಿದ್ದ ಆರ್​ಸಿಬಿ, ಇಂದಿನ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸುವ ಮೂಲಕ ತನ್ನ ಬಹು ವರ್ಷಗಳ ಬರವನ್ನು ನೀಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 197 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಸಿಎಸ್​ಕೆ, ಆರ್​ಸಿಬಿಯ ಕರಾರುವಕ್ಕಾದ ದಾಳಿಯ ಮುಂದೆ ಹೀನಾಯವಾಗಿ ಶರಣಾಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲೂ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.

ಸಿಎಸ್​ಕೆ ಕಳಪೆ ಫಿಲ್ಡಿಂಗ್

ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್‌ನ ತವರು ಮೈದಾನದಲ್ಲಿ ಗೆಲ್ಲಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿತ್ತು. ಆದರೆ ಉತ್ತಮ ಸಿದ್ಧತೆಯೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ಅಂತಿಮವಾಗಿ ಚೆನ್ನೈನ ಅಭೇದ್ಯ ಕೋಟೆಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಆರ್​ಸಿಬಿಯ ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖ ಪಾತ್ರವಹಿಸಿದರೆ, ಇನ್ನೊಂದೆಡೆ ಸಿಎಸ್​ಕೆ ಫಿಲ್ಡರ್​ಗಳ ಕಳಪೆ ಫಿಲ್ಡಿಂಗ್ ಮತ್ತು ಬ್ಯಾಟಿಂಗ್ ಆರ್​ಸಿಬಿ ಗೆಲುವಿಗೆ ಕಾರಣವಾಯಿತು.

ಇದನ್ನೂ ಓದಿ
Image
ಆರ್​ಸಿಬಿ ಆಟಗಾರನನ್ನು ಗೇಲಿ ಮಾಡಿದ ಸಿಎಸ್​ಕೆ; ವೈರಲ್ ವಿಡಿಯೋ
Image
ಸಿಎಸ್​ಕೆ ಕಳಪೆ ಫಿಲ್ಡಿಂಗ್; 4 ರನ್​ಗಳ ಅಂತರದಲ್ಲಿ 3 ಕ್ಯಾಚ್ ಡ್ರಾಪ್
Image
ಕೊಹ್ಲಿಯನ್ನು ಕೆರಳಿಸಿದ ಪತಿರಾನ ಬೌನ್ಸರ್; ಮುಂದೆ ನಡೆದಿದ್ದೇನು? ವಿಡಿಯೋ
Image
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಆರ್​ಸಿಬಿಗೆ ಸ್ಫೋಟಕ ಆರಂಭ

ಚೆನ್ನೈ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದಾಗ, ಅವರು ಈಗಾಗಲೇ ಅರ್ಧದಷ್ಟು ಪಂದ್ಯವನ್ನು ಗೆದ್ದಿರುವಂತೆ ತೋರುತ್ತಿತ್ತು. ಆದರೆ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಮೊದಲ ಮತ್ತು ಎರಡನೇ ಓವರ್‌ಗಳಲ್ಲಿ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ತ್ವರಿತ ಆರಂಭ ನೀಡಿದ ರೀತಿ ಚೆನ್ನೈ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತು. ಮತ್ತೊಂದೆಡೆ ವಿರಾಟ್ ಕೊಹ್ಲಿ ದೊಡ್ಡ ಹೊಡೆತಗಳನ್ನು ಆಡಲು ಕಷ್ಟಪಟ್ಟರೂ ಉಳಿದ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ರನ್ ವೇಗವನ್ನು ಕಡಿಮೆ ಮಾಡಲು ಬಿಡಲಿಲ್ಲ. ದೇವದತ್ ಪಡಿಕಲ್ ಕೂಡ ಚಿಕ್ಕದಾದ ಆದರೆ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಟಿಮ್ ಡೇವಿಡ್ ಹ್ಯಾಟ್ರಿಕ್ ಸಿಕ್ಸ್

ಆನಂತರ ಬಂದ ಬೆಂಗಳೂರು ನಾಯಕ ಪಾಟಿದಾರ್ ಅವರಿಗೆ 3 ಜೀವದಾನ ನೀಡಿ ಸಿಎಸ್​ಕೆ ದೊಡ್ಡ ತಪ್ಪು ಮಾಡಿತು. ಎಲ್ಲೋ ಆರ್ಮಿ 17 ರಿಂದ 20 ರನ್‌ಗಳ ನಡುವೆ ಮೂರು ಬಾರಿ ಪಾಟಿದಾರ್ ಅವರ ಕ್ಯಾಚ್ ಅನ್ನು ಕೈಬಿಟ್ಟಿತು ಮತ್ತು ಅದಕ್ಕೆ ಬೆಲೆ ಕೂಡ ತೆರಬೇಕಾಯಿತು. 3 ಜೀವದಾನಗಳ ಲಾಭ ಪಡೆದ ಪಾಟಿದಾರ್ ಕೇವಲ 32 ಎಸೆತಗಳಲ್ಲಿ 51 ರನ್ ಗಳಿಸಿದರು. ಕೊನೆಯಲ್ಲಿ ಟಿಮ್ ಡೇವಿಡ್ ಕೇವಲ 8 ಎಸೆತಗಳಲ್ಲಿ 22 ರನ್ ತಂಡವನ್ನು 196 ರನ್‌ಗಳ ಬಲವಾದ ಸ್ಕೋರ್‌ಗೆ ಕೊಂಡೊಯ್ದರು.

ಚೆನ್ನೈಗೆ ಆರಂಭಿಕ ಆಘಾತ

197 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಚೆನ್ನೈ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಸತತ ಎರಡನೇ ಪಂದ್ಯದಲ್ಲೂ ಆರಂಭಿಕ ರಾಹುಲ್ ತ್ರಿಪಾಠಿ (5) ಬೇಗನೆ ಪೆವಿಲಿಯನ್ ಸೇರಿಕೊಂಡರು. ನಾಯಕ ರುತುರಾಜ್ ಗಾಯಕ್ವಾಡ್ ಕೂಡ ಸೊನ್ನೆಗೆ ವಿಕೆಟ್ ಒಪ್ಪಿಸಿದರು. ದೀಪಕ್ ಹೂಡಾ ಅವರ ಆಟ ಕೂಡ 4 ರನ್​​ಗಳಿಗೆ ಅಂತ್ಯವಾಯಿತು. ಹೀಗಾಗಿ ಚೆನ್ನೈ ತಂಡವು ಪವರ್‌ಪ್ಲೇನಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 30 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು.

IPL 2025: ಆರ್​ಸಿಬಿಯನ್ನು ಗೇಲಿ ಮಾಡಿದ ಅಂಬಟಿ ರಾಯುಡುನನ್ನು ಹಿಗ್ಗಾಮುಗ್ಗಾ ಜಾಡಿಸಿದ ಆರ್​ಸಿಬಿ ಫ್ಯಾನ್ಸ್

ಅಭಿಮಾನಿಗಳನ್ನು ರಂಜಿಸಿದ ಧೋನಿ

ಪವರ್‌ಪ್ಲೇ ನಂತರವೂ ಕರಾರುವಕ್ಕಾದ ದಾಳಿ ಮುಂದುವರೆಸಿದ ಬೆಂಗಳೂರು ಬೌಲರ್‌ಗಳು ಸಿಎಸ್​ಕೆಯನ್ನು ಪಂದ್ಯದಿಂದಲ್ಲೇ ಹೊರಹಾಕಿದರು. ಪವರ್‌ಪ್ಲೇ ನಂತರ ದಾಳಿಗಿಳಿದ ಲಿಯಾಮ್ ಲಿವಿಂಗ್‌ಸ್ಟೋನ್ (2/28), ಸ್ಯಾಮ್ ಕರನ್ (8) ಅವರನ್ನು ಪೆವಿಲಿಯ್​ಗಟ್ಟಿದರೆ, 13 ನೇ ಓವರ್‌ನಲ್ಲಿ ಯಶ್ ದಯಾಳ್ (2/18) ರಚಿನ್ ರವೀಂದ್ರ (41) ಮತ್ತು ಶಿವಂ ದುಬೆ (19) ಅವರನ್ನು ಔಟ್ ಮಾಡಿ ಚೆನ್ನೈ ತಂಡದ ಸೋಲನ್ನು ದೃಢಪಡಿಸಿದರು. 6 ವಿಕೆಟ್ ಪತನದ ನಂತರ ಕ್ರೀಸ್​ಗೆ ಬಂದ ಎಂಎಸ್ ಧೋನಿ ಸಿಎಸ್‌ಕೆ ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾದರು. ಕೊನೆಯಲ್ಲಿ, ರವೀಂದ್ರ ಜಡೇಜಾ (19) ಮತ್ತು ಎಂಎಸ್ ಧೋನಿ (30 ನಾಟ್ ಔಟ್, 16 ಎಸೆತಗಳು) ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಅಂತಿಮವಾಗಿ ಸಿಎಸ್​ಕೆ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಕೇವಲ 146 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 pm, Fri, 28 March 25

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ