AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Final: ಈ ಸಲನೂ ಕಪ್ ನಮ್ದು..! ಸತತ 2ನೇ ಬಾರಿಗೆ ಆರ್​ಸಿಬಿ ಮುಡಿಗೇರಿದ ಐಪಿಎಲ್ ಕಿರೀಟ

RCB Wins IPL 2026: ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಆರ್​ಸಿಬಿ 2026ರ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ. ಕಳೆದ ಆವೃತ್ತಿಯಲ್ಲಿ ಟ್ರೋಫಿ ಬರ ನೀಗಿಸಿದ್ದ ಆರ್​ಸಿಬಿ, ಈ ಬಾರಿ ಗುಜರಾತ್ ತಂಡವನ್ನು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಣಿಸಿ ಸತತ ಎರಡನೇ ಬಾರಿ ಕಪ್ ಗೆದ್ದು ಅಭಿಮಾನಿಗಳಿಗೆ ಡಬಲ್ ಸಂಭ್ರಮ ತಂದಿದೆ. 17 ವರ್ಷಗಳ ಕಾಯುವಿಕೆ ನಂತರ, ಈಗ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡು ಇತಿಹಾಸ ನಿರ್ಮಿಸಿದೆ.

IPL 2026 Final: ಈ ಸಲನೂ ಕಪ್ ನಮ್ದು..! ಸತತ 2ನೇ ಬಾರಿಗೆ ಆರ್​ಸಿಬಿ ಮುಡಿಗೇರಿದ ಐಪಿಎಲ್ ಕಿರೀಟ
Rcb
ಪೃಥ್ವಿಶಂಕರ
|

Updated on:May 31, 2026 | 11:55 PM

Share

ಆರ್​ಸಿಬಿ (RCB).. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ (IPL) ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ತಂಡ. ಈ ತಂಡದ ಪರವಾಗಿ ಹಲವು ದಿಗ್ಗಜ ಕ್ರಿಕೆಟಿಗರು ಸಾಕಷ್ಟು ವರ್ಷ ಕ್ರಿಕೆಟ್ ಆಡಿದ್ದಾರೆ. ಆದರೆ ಅಂತಹವರ ಉಪಸ್ಥಿತಿಯ ಹೊರತಾಗಿಯೂ ಸತತ 17 ವರ್ಷಗಳವರೆಗೆ ಆರ್​ಸಿಬಿಗೆ ಒಮ್ಮೆಯೂ ಚಾಂಪಿಯನ್‌ ಪಟ್ಟಕ್ಕೇರಲು ಸಾಧ್ಯವಾಗಲಿಲ್ಲ. ಆದರೆ ಕಳೆದ ಆವೃತ್ತಿಯಲ್ಲಿ ಆ ಟ್ರೋಫಿ ಬರವನ್ನು ನೀಗಿಸಿಕೊಂಡು ತನ್ನ ಅಭಿಮಾನಿಗಳು ನೀರಾಳರಾಗುವಂತೆ ಮಾಡಿದ್ದ ಆರ್​ಸಿಬಿ ಇದೀಗ 2026 ರ ಐಪಿಎಲ್‌ನಲ್ಲೂ (IPL 2026) ಟ್ರೋಫಿ ಎತ್ತಿಹಿಡಿಯುವ ಮೂಲಕ ತನ್ನ ಅಭಿಮಾನಿ ಬಳಗಕ್ಕೆ ಡಬಲ್ ಸಂತೋಷ ನೀಡಿದೆ. ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ತನ್ನ ಹಾಲಿ ಚಾಂಪಿಯನ್‌ ಪಟ್ಟವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

5 ವಿಕೆಟ್​ಗಳಿಂದ ಗೆದ್ದ ಆರ್​​ಸಿಬಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕದ ನೆರವಿನಿಂದ 156 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ 18 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ವಾಸ್ತವವಾಗಿ ಕಳೆದ ಆವೃತ್ತಿಯಲ್ಲಿ ಇದೇ ಮೈದಾನದಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡಿ ಗೆದ್ದಿದ್ದ ಆರ್​ಸಿಬಿ, ಈ ಬಾರಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿತು.

ಗುಜರಾತ್​ಗೆ ಬ್ಯಾಟಿಂಗ್ ವೈಫಲ್ಯ

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ದುಕೊಂಡರು. ನಾಯಕನ ಈ ಆಯ್ಕೆಯನ್ನು ಸಮರ್ಥಿಸಿಕೊಂಡ ಬೌಲರ್​ಗಳು ಆರಂಭದಿಂದಲೂ ಗುಜರಾತ್ ಬ್ಯಾಟಿಂಗ್‌ ವಿಭಾಗದ ಕತ್ತು ಹಿಸುಕಿದರು. ಇಡೀ ಆವೃತ್ತಿಯಲ್ಲಿ ಗುಜರಾತ್​ ಪರ ರನ್ ಮಳೆ ಹರಿಸಿದ್ದ ಗುಜರಾತ್ ಆರಂಭಿಕ ಜೋಡಿಯಾದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಈ ಪಂದ್ಯದಲ್ಲಿ ಆರ್​ಸಿಬಿ ಬೌಲರ್​ಗಳ ಮುಂದೆ ಮಂಡಿಯೂರಿದರು. ನಾಯಕ ಗಿಲ್ ಕೇವಲ 10 ರನ್​ಗಳಿಗೆ ಹೇಜಲ್​ವುಡ್​ಗೆ ಬಲಿಯಾದರೆ, ಸಾಯಿ ಸುದರ್ಶನ್ ಕೂಡ 12 ರನ್ ಗಳಿಸಿ ಔಟ್ ಆದರು. ಇವರಿಬ್ಬರ ವಿಕೆಟ್ ಬೇಗನೇ ಪತನಗೊಂಡಿದ್ದರಿಂದ ಅನುಭವಿ ಜೋಸ್ ಬಟ್ಲರ್ ಮೇಲೆ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಬಿದ್ದಿತು. ಆದರೆ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಎಸೆದ ವೈಡ್ ಯಾರ್ಕರ್, ಬಟ್ಲರ್ ಅವರ ಇನ್ನಿಂಗ್ಸ್​ಗೆ ಅಂತ್ಯ ಹಾಡಿತು.

ಸುಂದರ್ ಅರ್ಧಶತಕದ ಇನ್ನಿಂಗ್ಸ್

ಅನುಭವಿ ಆಟಗಾರರ ವಿಕೆಟ್ ಪತನದ ನಡುವೆಯೂ ತಂಡದ ಪರ ಹೋರಾಟದ ಇನ್ನಿಂಗ್ಸ್ ಆಡಿದ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್​ಗಳ ಇನ್ನಿಂಗ್ಸ್ ಆಡಿದರು. ಸುಂದರ್​ ಅವರ ಇನ್ನಿಂಗ್ಸ್​ನಲ್ಲಿ ಆರ್​ಸಿಬಿ ಆಟಗಾರ ಜೇಡನ್ ಕಾಕ್ಸ್ ಅವರ ಕೊಡುಗೆಯೂ ಇತ್ತು. ಸುಂದರ್ 4 ರನ್ ಬಾರಿಸಿದ್ದಾಗ ಸುಲಭ ಕ್ಯಾಚ್ ನೀಡಿದ್ದರು. ಆದರೆ ಕಾಕ್ಸ್ ಆ ಕ್ಯಾಚ್ ಕೈಚೆಲ್ಲಿದರು. ಇಲ್ಲದಿದ್ದರೆ, ಗುಜರಾತ್ ತಂಡವನ್ನು ಎರಡಂಕಿಗೆ ಕಟ್ಟಿಹಾಕಬಹುದಿತ್ತು. ಆರ್​ಸಿಬಿ ಪರ ಮಾರಕ ದಾಳಿ ನಡೆಸಿದ ರಸಿಕ್ ಸಲಾಂ 4 ಓವರ್‌ಗಳಲ್ಲಿ 27 ರನ್‌ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ 2 ವಿಕೆಟ್ ಪಡೆದರೆ, ಕೃನಾಲ್ ಪಾಂಡ್ಯ ಕೂಡ 1 ವಿಕೆಟ್ ಪಡೆದರು.

RCB vs GT Final: ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಕ್ರಿಕೆಟ್ ದೇವರೂ ಫಿದಾ..! ಏನಂದ್ರು ನೋಡಿ

ಆರ್​ಸಿಬಿಗೆ ಸ್ಫೋಟಕ ಆರಂಭ

156 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ವೆಂಕಟೇಶ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಸ್ಫೋಟಕ ಆರಂಭ ನೀಡಿದರು. ವೆಂಕಟೇಶ್ ಅಯ್ಯರ್ ಗಾಯದ ನಡುವೆಯೂ 16 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಿತ 32 ರನ್ ಗಳಿಸಿ ಔಟಾದರು. ಆದಾಗ್ಯೂ ಅವರು ತಂಡದ ಗೆಲುವನ್ನು ಭಾಗಶಃ ಖಚಿತಪಡಿಸಿದ್ದರು. ಆದರೆ ಆ ನಂತರ ಬಂದ ಕನ್ನಡಿಗ ದೇವದತ್ ಪಡಿಕ್ಕಲ್ ಕೇವಲ 1 ರನ್‌ಗೆ ಔಟಾದರು. ಆ ನಂತರ ರಶೀದ್ ಖಾನ್ ಒಂದೇ ಓವರ್‌ನಲ್ಲಿ ರಜತ್ ಪಾಟಿದಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಔಟ್ ಮಾಡುವ ಮೂಲಕ ಗುಜರಾತ್​ಗೆ ಗೆಲುವಿನ ಆಸೆ ಹುಟ್ಟುವಂತೆ ಮಾಡಿದರು. ಆದರೆ ಈ ಫೈನಲ್ ಪಂದ್ಯದಲ್ಲಿ ತನ್ನ ಅನುಭವವನ್ನೇಲ್ಲ ಧಾರೆ ಎರೆದ ವಿರಾಟ್ ಕೊಹ್ಲಿ, ಗುರಿ ಬೆನ್ನಟ್ಟುವಾಗ ಏಕೆ ನಾನು ಅಪಾಯಕಾರಿ ಬ್ಯಾಟ್ಸ್‌ಮನ್ ಎಂಬುದನ್ನು ಮತ್ತೊಮ್ಮೆ ಸಾಭಿತುಪಡಿಸಿದರು.

ಅತಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

ಈ ಹಂತದಲ್ಲಿ ಕೊಹ್ಲಿಗೆ ಸಾಥ್ ನೀಡಿದ ಟಿಮ್ ಡೇವಿಡ್ 17 ಎಸೆತಗಳಲ್ಲಿ 24 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಮಧ್ಯೆ ವಿರಾಟ್ ಕೊಹ್ಲಿ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಕಿಂಗ್ ಕೊಹ್ಲಿಯ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕವೂ ಆಗಿತ್ತು. ಅಂತಿಮವಾಗಿ ಕೊಹ್ಲಿ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 75 ರನ್ ಬಾರಿಸುವ ಮೂಲಕ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 pm, Sun, 31 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?