AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್

IPL 2026: ಹಾಲಿ ಚಾಂಪಿಯನ್ ಆರ್‌ಸಿಬಿ 2026ರ ಐಪಿಎಲ್‌ನಲ್ಲಿ ಮೊದಲ ತಂಡವಾಗಿ ಪ್ಲೇಆಫ್‌ಗೆ ಪ್ರವೇಶಿಸಿದೆ. ಅಮೋಘ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ಬಾರಿಯೂ ಚಾಂಪಿಯನ್ ಆಗಲಿದೆ ಎಂದು ವೀರೇಂದ್ರ ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ. ಆದರೆ, ಗುಜರಾತ್ ಟೈಟಾನ್ಸ್ ಆರ್‌ಸಿಬಿಗೆ ದೊಡ್ಡ ಸವಾಲಾಗಬಲ್ಲದು, ವಿಶೇಷವಾಗಿ ಅದರ ಬಲಿಷ್ಠ ಬೌಲಿಂಗ್ ಘಟಕದಿಂದ. ಉಭಯ ತಂಡಗಳ ಪ್ಲೇಆಫ್ ಕದನ ಕುತೂಹಲ ಮೂಡಿಸಿದೆ.

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್
Virender Sehwag
ಪೃಥ್ವಿಶಂಕರ
|

Updated on:May 18, 2026 | 11:21 PM

Share

ಹಾಲಿ ಚಾಂಪಿಯನ್ ಆರ್​ಸಿಬಿ (RCB) 2026 ರ ಐಪಿಎಲ್‌ನಲ್ಲಿ (IPL 2026) ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್‌ಗೇರಿದೆ. ಆರ್​ಸಿಬಿ ಕಳೆದ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್​ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು.

ಆರ್‌ಸಿಬಿಯದ್ದೇ ಟ್ರೋಫಿ

ಕ್ರಿಕ್‌ಬಜ್‌ನಲ್ಲಿ ಆರ್​ಸಿಬಿ ತಂಡದ ಪ್ರದರ್ಶನದ ಕುರಿತು ಮಾತನಾಡಿದ ವೀರೇಂದ್ರ ಸೆಹ್ವಾಗ್, ‘ಚಾಂಪಿಯನ್ ತಂಡವು ಅಗ್ರ ಎರಡು ಸ್ಥಾನಗಳಲ್ಲಿ ಅರ್ಹತೆ ಪಡೆಯಬೇಕು. ಅದರಂತೆ ಆರ್​ಸಿಬಿ ಆಡುತ್ತಿರುವ ರೀತಿಯನ್ನು ನೋಡಿದರೆ, ಈ ವರ್ಷವೂ ಅವರೇ ಟ್ರೋಫಿಯನ್ನು ಎತ್ತಿಹಿಡಿಯುತ್ತಾರೆ ಎಂದು ತೋರುತ್ತದೆ’ ಎಂದಿದ್ದಾರೆ. ಆದಾಗ್ಯೂ, ಆರ್​ಸಿಬಿ ಎದುರಿಸುತ್ತಿರುವ ದೊಡ್ಡ ಸವಾಲನ್ನು ಸಹ ಉಲ್ಲೇಖಿಸಿರುವ ಸೆಹ್ವಾಗ್. ಟ್ರೋಫಿ ಗೆಲುವಿನಲ್ಲಿ ಆರ್‌ಸಿಬಿಗೆ ಕಠಿಣ ಹೋರಾಟ ನೀಡಬಲ್ಲ ತಂಡವೆಂದರೆ ಅದು ಗುಜರಾತ್ ಟೈಟಾನ್ಸ್.

ಒಂದು ವೇಳೆ ಗುಜರಾತ್ ತಂಡ ಕೂಡ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದರೆ, ಆರ್‌ಸಿಬಿಗೆ ಅದು ಕಷ್ಟಕರವಾಗಿರುತ್ತದೆ. ಏಕೆಂದರೆ ಗುಜರಾತ್ ಟೈಟಾನ್ಸ್ ಕೂಡ ಉತ್ತಮ ಬೌಲಿಂಗ್ ಘಟಕವನ್ನು ಹೊಂದಿದೆ. ಈ ಎರಡೂ ತಂಡಗಳ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ಬಲಿಷ್ಠವಾಗಿರುವುದರಿಂದ ಪ್ಲೇಆಫ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದನ್ನು ನೋಡಲು ಖುಷಿಯಾಗುತ್ತದೆ. ಉಭಯ ತಂಡಗಳ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳು ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ ಎಂದು ಸೆಹ್ವಾಗ್ ಎಚ್ಚರಿಸಿದ್ದಾರೆ.

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ

ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡ

ಸೆಹ್ವಾಗ್ ನೀಡಿರುವ ಹೇಳಿಕೆಗೆ ಪೂರಕವಾಗಿ ಆರ್​ಸಿಬಿ ಕೂಡ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳಿಂದ ಜಯಗಳಿಸಿದ ಆರ್​ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಈ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ಐಪಿಎಲ್ ತಂಡ ಎನಿಸಿಕೊಂಡಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು, ಒಂಬತ್ತು ಪಂದ್ಯಗಳನ್ನು ಗೆದ್ದು ನಾಲ್ಕರಲ್ಲಿ ಸೋತಿದ್ದು, ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 pm, Mon, 18 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!