
2025 ರ ಐಪಿಎಲ್ನಲ್ಲಿ (IPL) ಆರ್ಸಿಬಿ (RCB) ಚಾಂಪಿಯನ್ ಆದ ಬಳಿಕ ರಾಜ್ಯಾದ್ಯಂತ ಕೋಟ್ಯಾಂತರ ಅಭಿಮಾನಿಗಳು ರಸ್ತೆಗಳಿದು ಸಂಭ್ರಮಾಚರಣೆ ನಡೆಸಿದ್ದರು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಹೀಗಾಗಿ ಈ ಬಾರಿ ಆ ರೀತಿಯ ಘಟನೆಗಳು ನಡೆಯುವುದನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ಬಿಗ್ ಬಂದೋಬಸ್ತ್ ಮಾಡಲಾಗಿತ್ತು. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಆ ರೀತಿಯ ಅಹಿತಕರ ಘಟನೆಗಳು ಯಾವು ನಡೆಯಲಿಲ್ಲ. ಆದರೆ ಪಕ್ಕದ ರಾಜ್ಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಆರ್ಸಿಬಿ ಫ್ಯಾನ್ಸ್ಗಳ ಅತಿರೇಕದಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಮಾತ್ರವಲ್ಲದೆ ಅಭಿಮಾನಿಗಳ ಸಂಭ್ರಮಾಚರಣೆ ಹಿಂಸಾತ್ಮಕವಾಗಿ ತಿರುಗಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಿಟಕಿ ಗ್ಲಾಸ್ಗಳನ್ನು ಧ್ವಂಸಗೊಳಿಸಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಬೆಂಗಳೂರು ತಂಡ ಸತತ ಎರಡನೇ ವರ್ಷ ಐಪಿಎಲ್ ಟ್ರೋಫಿ ಗೆದ್ದ ನಂತರ ದೇಶಾದ್ಯಂತ ಆರ್ಸಿಬಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕರ್ನೂಲ್ ನಗರದಲ್ಲಿಯೂ ಸಹ, ನೂರಾರು ಯುವಕರು ಮತ್ತು ಅಭಿಮಾನಿಗಳು ಭಾನುವಾರ ಮಧ್ಯರಾತ್ರಿ ಬ್ಯಾನರ್ಗಳನ್ನು ಹಿಡಿದು ರಸ್ತೆಗಳಿಗೆ ಇಳಿದಿದ್ದರು. ಆದರೆ, ಈ ಸಂತೋಷ ಹೆಚ್ಚು ಕಾಲ ಉಳಿಯಲಿಲ್ಲ.
ನಗರದ ರಾಜು ವಿಹಾರ್ ಸೆಂಟರ್ಗೆ ಆಗಮಿಸಿದ ಅಭಿಮಾನಿಗಳ ದೊಡ್ಡ ಗುಂಪು ಇದ್ದಕ್ಕಿದ್ದಂತೆ ರಸ್ತೆ ತಡೆದು ಸಂಭ್ರಮಾಚರಣೆಯಲ್ಲಿ ಮೊಳಗಿತು. ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಾ ಘೋಷಣೆಗಳನ್ನು ಕೂಗಿದರು. ಇದು ಸಾಮಾನ್ಯ ಪ್ರಯಾಣಿಕರು ಮತ್ತು ವಾಹನ ಚಾಲಕರಿಗೆ ತೀವ್ರ ತೊಂದರೆಯನ್ನುಂಟುಮಾಡಿತು. ಈ ಸಂಭ್ರಮಾಚರಣೆ ಗದ್ದಲಕ್ಕೆ ತಿರುಗುತ್ತಿದ್ದಂತೆ, ಇದ್ದಕ್ಕಿದ್ದಂತೆ ಕಾನೂನು ಸುವ್ಯವಸ್ಥೆ ಹದಗೆಡಲಾರಂಭಿಸಿತು. ಇದೇ ವೇಳೆ ಕೆಲವು ಅಪರಿಚಿತ ದುಷ್ಕರ್ಮಿಗಳು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಖಾಸಗಿ ಸಾರಿಗೆ ಬಸ್ ಮೇಲೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಿ ವಿಧ್ವಂಸಕ ಕೃತ್ಯ ಎಸಗಿದರು.
Karnool youth of Andhra Pradesh … when RCB won IPL cup. This kind of uncivilised behaviour is unacceptable … behave yourself … the police need to act tough in this regard @APPOLICE100 pic.twitter.com/VsqC7zn0Dc
— Dr Srinubabu Gedela (@DrSrinubabu) June 1, 2026
IPL 2026 Final: ಆರ್ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್; ವಿಡಿಯೋ
ದಾಳಿಯಲ್ಲಿ ಬಸ್ಸಿನ ಕಿಟಕಿ ಗ್ಲಾಸ್ಗಳು ಸಂಪೂರ್ಣವಾಗಿ ಪುಡಿಪುಡಿಯಾದವು. ಇದರಿಂದ ಮಧ್ಯರಾತ್ರಿ ತಮ್ಮ ಆಸನಗಳಲ್ಲಿ ಮಲಗಿದ್ದ ಪ್ರಯಾಣಿಕರು ಹಠಾತ್ ದಾಳಿಯಿಂದ ಆಘಾತಕ್ಕೊಳಗಾಗಿ ಜೋರಾಗಿ ಕಿರುಚಾಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಕರ್ನೂಲ್ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಭಿಮಾನಿಗಳ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ನಂತರ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:54 pm, Mon, 1 June 26