Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Mega Auction: RCB ಹಿಟ್​ಲೀಸ್ಟ್​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ..!

IPL 2022 Mega Auction: 2019 ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ತಂಡವು ಪ್ಲೇಆಫ್ ತಲುಪಿತು. ಹಾಗೆಯೇ 2020 ರಲ್ಲಿ ಅವರು ತಂಡವನ್ನು ಫೈನಲ್‌ಗೆ ಕರೆದೊಯ್ದರು.

IPL 2022 Mega Auction: RCB ಹಿಟ್​ಲೀಸ್ಟ್​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ..!
IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 17, 2022 | 2:27 PM

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ (IPL 2022 Mega Auction) ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಹಳೆಯ ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ಜನವರಿ 22ರೊಳಗೆ ಹೊಸ ಎರಡು ಫ್ರಾಂಚೈಸಿಗಳಾದ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆರಿಸಿಕೊಂಡ ತಲಾ ಮೂವರು ಆಟಗಾರರನ್ನು ಘೋಷಿಸಲಿದೆ. ಆದರೆ ಈ ಎರಡು ಹೊಸ ಫ್ರಾಂಚೈಸಿಗಳ ಲೀಸ್ಟ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹೆಸರಿಲ್ಲ ಎಂದು ವರದಿಯಾಗಿದೆ. ಅಂದರೆ ಅಯ್ಯರ್ ಸ್ಪೆಷಲ್ ಪಿಕ್ ಆಯ್ಕೆಯ ಬದಲಾಗಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ.

ಇತ್ತ ನಾಯಕನ ಹುಡುಕಾಟದಲ್ಲಿರುವ ತಂಡಗಳು ಇದೀಗ ಶ್ರೇಯಸ್ ಅಯ್ಯರ್ ಮೇಲೆ ಕಣ್ಣಿಟ್ಟಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಯ್ಯರ್ ಅವರನ್ನು ಖರೀದಿಸಲು ಪ್ಲ್ಯಾನ್ ರೂಪಿಸಿದೆ ಎಂದು ಹೇಳಲಾಗಿದೆ. ಏಕೆಂದರೆ ಅಯ್ಯರ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ್ದರು. ಇದೀಗ ಆರ್​ಸಿಬಿ ಕೂಡ ನಾಯಕನ ಹುಡುಕಾಟದಲ್ಲಿದೆ. ಹೀಗಾಗಿ ಅಯ್ಯರ್ ಅವರ ಖರೀದಿಯಿಂದ ಆರ್​ಸಿಬಿ ಮಧ್ಯಮ ಕ್ರಮಾಂಕವನ್ನು ಬಲಪಡಿಸಬಹುದು. ಜೊತೆಗೆ ನಾಯಕನ ಸ್ಥಾನವನ್ನು ನೀಡಬಹುದು. ಹೀಗಾಗಿ ಆರ್​ಸಿಬಿ ಶ್ರೇಯಸ್ ಅಯ್ಯರ್ ಅವರ ಖರೀದಿಗೆ ಆಸಕ್ತಿ ಹೊಂದಿದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಶ್ರೇಯಸ್ ಅಯ್ಯರ್ ಹೊಸ ಫ್ರಾಂಚೈಸಿಗಳ ಜೊತೆ ಒಪ್ಪಂದಕ್ಕೆ ಮುಂದಾಗಿಲ್ಲ ಎಂಬ ಸುದ್ದಿ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ಶ್ರೇಯಸ್ ಅಯ್ಯರ್ ಖರೀದಿಗೆ ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡದ ನಾಯಕ ಇಯಾನ್ ಮೊರ್ಗನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ನಾಯಕನಾಗಿ ಕೆಕೆಆರ್ ಭಾರತೀಯ ಮೂಲದ ಆಟಗಾರನ ಖರೀದಿಗೆ ಹೆಚ್ಚಿನ ಒಲವು ಹೊಂದಿದೆ.

ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡದ ರಾಡಾರ್​ನಲ್ಲೂ ಶ್ರೇಯಸ್ ಅಯ್ಯರ್ ಹೆಸರು ಕೇಳಿ ಬರುತ್ತಿದೆ. ಕೆಎಲ್ ರಾಹುಲ್ ಅವರಿಂದ ತೆರವಾಗಿರುವ ಸ್ಥಾನವನ್ನು ಮತ್ತೋರ್ವ ಭಾರತೀಯ ಆಟಗಾರನಿಂದ ತುಂಬಲು ಪಂಜಾಬ್ ಕಿಂಗ್ಸ್ ಬಯಸಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ತಂಡದ ಮೊದಲ ಆಯ್ಕೆ ಶ್ರೇಯಸ್ ಅಯ್ಯರ್. ಈ ಮೂಲಕ ಮತ್ತೊಮ್ಮೆ ಭಾರತೀಯ ಆಟಗಾರನಿಗೆ ನಾಯಕತ್ವ ನೀಡಲು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ ಎನ್ನಲಾಗಿದೆ.

ಇತ್ತ ಶ್ರೇಯಸ್ ಅಯ್ಯರ್ ಅವರ ಖರೀದಿಗೆ ಈ ಮೂರು ಫ್ರಾಂಚೈಸಿಗಳು ಪೈಪೋಟಿ ನಡೆಸುವುದಂತು ದಿಟ. ಏಕೆಂದರೆ 2019 ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ತಂಡವು ಪ್ಲೇಆಫ್ ತಲುಪಿತು. ಹಾಗೆಯೇ 2020 ರಲ್ಲಿ ಅವರು ತಂಡವನ್ನು ಫೈನಲ್‌ಗೆ ಕರೆದೊಯ್ದರು. ಅಂದರೆ ಅಯ್ಯರ್ ನಾಯಕನಾಗಿ ಐಪಿಎಲ್​ನಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಕಾರಣದಿಂದ ಮೆಗಾ ಹರಾಜಿಗೂ ಮುನ್ನವೇ 3 ತಂಡಗಳ ಹಿಟ್​ಲೀಸ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(RCB, KKR, PBKS to Bid For Shreyas Iyer at IPL 2022 Mega Auction: Report)

ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್