AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
TV9 Web
| Edited By: |

Updated on: Nov 23, 2021 | 9:38 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ