AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
TV9 Web
| Edited By: |

Updated on: Nov 23, 2021 | 9:38 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು