AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರೇ ಬೇಡ, ಚಿನ್ನಸ್ವಾಮಿಯಲ್ಲಿ ಪಂದ್ಯವಾಡಲ್ಲ ಅಂತಿದೆ RCB! ಅಭಿಮಾನಿಗಳಿಗೆ ನಿರಾಸೆ, KSCAಗೆ ಶಾಕ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ವರ್ಷ RCB ಪಂದ್ಯ ನಡೆಯುವುದು ಅನುಮಾನ. ಅಂದು ನಡೆದ ಆ ಒಂದು ಘಟನೆಯಿಂದ ಮತ್ತೆ ಚೇತರಿಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂಗೆ ಸಾಧ್ಯವಾಗುತ್ತಿಲ್ಲ. ಕೆಎಸ್​ಸಿಎಗೆ ಹೊಸ ಆಡಳಿತ ಬಂದಮೇಲೆ ಮತ್ತೆ RCB ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಸಲು ಹರಸಾಹಸ ಪಡುತ್ತಿದೆ. ಆದರೂ ಇಲ್ಲಿ ಆಡಲ್ಲ ಎನ್ನುತ್ತಿದೆ ಆರ್​ಸಿಬಿ ಮ್ಯಾನೇಜ್​ಮೆಂಟ್!

ಬೆಂಗಳೂರೇ ಬೇಡ, ಚಿನ್ನಸ್ವಾಮಿಯಲ್ಲಿ ಪಂದ್ಯವಾಡಲ್ಲ ಅಂತಿದೆ RCB! ಅಭಿಮಾನಿಗಳಿಗೆ ನಿರಾಸೆ, KSCAಗೆ ಶಾಕ್
ಆರ್​ಸಿಬಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jan 16, 2026 | 8:56 AM

Share

ಬೆಂಗಳೂರು, ಜನವರಿ 16: ಕಳೆದ ವರ್ಷ ಜೂನ್ ನಾಲ್ಕರಂದು ಆರ್​ಸಿಬಿ (RCB) ಅಭಿಮಾನಿಗಳಿಗೆ ಅತ್ಯಂತ ಕೆಟ್ಟ ಘಳಿಗೆ. ಟ್ರೋಫಿ ಗೆದ್ದ ಖುಷಿ ಅರೆ ಕ್ಷಣದಲ್ಲಿ ಮಾಯವಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನ ಅವ್ಯವಸ್ಥೆ, ಪೊಲೀಸರ ನಿರ್ಲಕ್ಷ್ಯ, ಸರ್ಕಾರದ ಬೇಜವಬ್ದಾರಿಗೆ 11 ಜನ ಮೃತಪಟ್ಟಿದ್ದರು. ಆ ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಮತ್ತೆ ಹಳೆ ವೈಭವವನ್ನು ಕಾಣಲು ಸಾಧ್ಯವಾಗದೆ ಪರದಾಡುತ್ತಾ ಇದೆ. ಕೆಎಸ್​ಸಿಎ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕೂಡ ಭರವಸೆ ಕೊಟ್ಟಿದ್ದರು. ಆದರೆ KSCAಗೆ ಆರ್​ಸಿಬಿ ಮ್ಯಾನೇಜ್​ಮೆಂಟ್ ಸಡನ್ ಶಾಕ್ ನೀಡಿದೆ.

ಕಾಲ್ತುಳಿತ ಪ್ರಕರಣದಲ್ಲಿ ಆರ್​ಸಿಬಿ ಮ್ಯಾನೇಜ್ಮೆಂಟ್ ಪ್ರಮುಖ ಆರೋಪಿ ಸ್ಥಾನದಲ್ಲಿದೆ‌. ಅಲ್ಲದೆ ಉಪಾಧ್ಯಕ್ಷ ರಾಜೇಶ್ ಮೆನನ್​​ರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಅಲ್ಲದೆ ಆರ್​ಸಿಬಿ ಮ್ಯಾನೇಜ್ಮೆಂಟ್ ಮೇಲೆ ಈ ಘಟನೆ ಕಪ್ಪು ಚುಕ್ಕೆ ತಂದಿಟ್ಟಿತ್ತು. ಈ ಹಿನ್ನಲೆ ರಾಜೇಶ್ ಮೆನನ್ ಚಿನ್ನಸ್ವಾಮಿ ಸಹವಾಸ ಬೇಡ ಅಂದಿದ್ದಾರೆ. ನಾವು ರಾಯಪುರ್ ಅಥವಾ ನವೀ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಹೋಮ್ ಗ್ರೌಂಡ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಆರ್​ಸಿಬಿ ಪಂದ್ಯ ಚಿನ್ನಸ್ವಾಮಿಯಿಂದ ದೂರವಾದ್ರೆ ಕೆಎಸ್​ಸಿಎಗೆ ಇದು ದೊಡ್ಡ ನಷ್ಟ.

ಚಿನ್ನಸ್ವಾಮಿ ಸ್ಟೇಡಿಯಂ ಕಾಮಗಾರಿಗಳ ಪರಿಶೀಲಿಸಿದ ಪೊಲೀಸ್ ಆಯುಕ್ತ

ಪೊಲೀಸ್ ಕಮಿಷನರ್ ಒಳಗೊಂಡು ಗುರುವಾರ ಸಭೆ ಕೂಡ ಮಾಡಲಾಗಿದೆ‌. ಪೊಲೀಸ್ ಇಲಾಖೆ ಈಗಾಗಲೆ 17 ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು KSCAಗೆ ಸೂಚನೆ ಕೊಟ್ಟಿತ್ತು. ಅದರ ಕಾಮಗಾರಿಯನ್ನು ಈಗಾಗಲೆ KSCA ಶುರುಮಾಡಿಕೊಂಡಿದೆ‌. ಗುರುವಾರದ ಸಭೆಯ ನಂತರ, ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಕಮಿಷನರ್ ಪರಿಶೀಲನೆ ನಡೆಸಿದ್ದಾರೆ. ಸಭೆಯಲ್ಲಿ ಜಿಬಿಎ, ಅಗ್ನಿಶಾಮಕ, BWSSB, ಬೆಸ್ಕಾಂ ಅಧಿಕಾರಿಗಳು ಬಾಗಿಯಾಗಿದ್ದರು. ಹೇಗಾದ್ರೂ ಮಾಡಿ ಸಮಸ್ಯೆ ಬಗೆಹರಿಸಿಕೊಂಡು ಆರ್​ಸಿಬಿ ಪಂದ್ಯವನ್ನು ಚಿನ್ನಸ್ವಾಮಿಯಲ್ಲಿ ಆಡಿಸಲು KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮುಳುವಾದ ಆರ್​ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು

ಒಟ್ಟಾರೆ ಈ ವರ್ಷ ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಪಂದ್ಯವಾಡುವುದು ಬಹುತೇಕ ಅನುಮಾನ. ವ್ಯವಸ್ಥೆ ಸರಿ ಇಲ್ಲ, ಏನಾದರೂ ಆದರೆ ನಾವೇ ಹೊಣೆಯಾಗುತ್ತೇವೆ ಎಂಬ ಭಯ ಆರ್​ಸಿಬಿ ಮ್ಯಾನೇಜ್ಮೆಂಟ್ ಹಿಂದಿದೆ. ಈ ನಡುವೆ KSCA ಮಾತ್ರ ಎಲ್ಲಾ ಸಮಸ್ಯೆ ಕ್ಲಿಯರ್ ಮಾಡಿ ಆರ್​ಸಿಬಿ ಮ್ಯಾನೇಜ್ಮೆಂಟ್ ಮನವೊಲಿಸುವ ಕೆಲಸ ಮಾಡುತ್ತಾ ಇದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ