AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲುಗಳೊಂದಿಗೆ WPL ನಿಂದ ಹೊರಬಿದ್ದ RCB

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ WPLನಿಂದ ಹೊರಬಿದ್ದಿದೆ. ಅದು ಸಹ ಸತತ ಐದು ಸೋಲುಗಳೊಂದಿಗೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯಕ್ಕೂ ಮುನ್ನವೇ ಆರ್​ಸಿಬಿ ತಂಡ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ.

ಸತತ ಸೋಲುಗಳೊಂದಿಗೆ WPL ನಿಂದ ಹೊರಬಿದ್ದ RCB
Rcbw
ಝಾಹಿರ್ ಯೂಸುಫ್
|

Updated on: Mar 09, 2025 | 7:53 AM

Share

ಮೊದಲೆರಡು ಪಂದ್ಯಗಳಲ್ಲಿ ಜಯ… ಆ ಬಳಿಕ ಸತತ 5 ಸೋಲು… ಇದು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ. ಅದರಲ್ಲೂ ನಿರ್ಣಾಯಕವಾಗಿದ್ದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ಮುಗ್ಗರಿಸಿದೆ. ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ WPL 2025 ರಿಂದ ಹೊರಬಿದ್ದಿದೆ.

ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ದಾಖಲೆಯ 225 ರನ್ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಅಗ್ರ ಕ್ರಮಾಂಕದ ಬ್ಯಾಟರ್​ಗಳು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್ 33 ಎಸೆತಗಳಲ್ಲಿ 69 ರನ್ ಚಚ್ಚಿದ್ದರು. ಇನ್ನು ಕೊನೆಯ ಹಂತದಲ್ಲಿ ಸ್ನೇಹ್ ರಾಣಾ 6 ಎಸೆತಗಳಲ್ಲಿ 26 ರನ್ ಬಾರಿಸಿದರು.

ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ 15 ರನ್​ಗಳು ಬೇಕಿತ್ತು. ಆದರೆ ಕಿಮ್ ಗಾರ್ತ್ ರನೌಟ್ ಆಗುವುದರೊಂದಿಗೆ ಆರ್​ಸಿಬಿ ತಂಡವು 19.3 ಓವರ್​ಗಳಲ್ಲಿ 213 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದೆ. ಈ ಮೂಲಕ ಯುಪಿ ವಾರಿಯರ್ಸ್ ತಂಡವು 12 ರನ್​ಗಳ ಜಯ ಸಾಧಿಸಿದೆ.

ಆರ್​ಸಿಬಿ ಸೋಲು-ಮುಂಬೈ ಪ್ಲೇಆಫ್​ಗೆ:

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುತ್ತಿದ್ದಂತೆ ಅತ್ತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವು ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ಒಟ್ಟು 8 ಅಂಕಗಳನ್ನು ಪಡೆದುಕೊಂಡಿದ್ದು, ಆರ್​ಸಿಬಿ ತಂಡ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೂ 6 ಅಂಕಗಳನ್ನು ಮಾತ್ರ ಹೊಂದಲಿದೆ.

ಹೀಗಾಗಿ ಅಂತಿಮ ಪಂದ್ಯಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇನ್ನು ಆರ್​ಸಿಬಿ ತಂಡವು ಮಾರ್ಚ್ 11 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಅಭಿಯಾನ ಅಂತ್ಯಗೊಳಿಸಲಿದೆ.

ಆರ್​ಸಿಬಿ ಪ್ರದರ್ಶನ:

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ತನ್ನ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 8 ವಿಕೆಟ್​ಗಳ ಸೋಲುಣಿಸಿತ್ತು.

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಆದರೆ ಈ ಎರಡು ಗೆಲುವುಗಳ ಬಳಿಕ ಆರ್​ಸಿಬಿ ಪಡೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ (2 ಪಂದ್ಯ) ವಿರುದ್ಧದ ಪಂದ್ಯಗಳಲ್ಲಿ ಸತತ ಸೋಲುಂಡಿದೆ. ಈ ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವ ಕನಸು ಕೂಡ ಕೊನೆಗೊಂಡಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ