AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದೇ ಪಂದ್ಯಕ್ಕೆ ರುಚಿ ಕಳೆದುಕೊಂಡ ಸಾಲ್ಟ್; ಆರ್​ಸಿಬಿಗೆ ಹೊಸ ತಲೆನೋವು

Phil Salt Struggles: RCB's ಆರ್​ಸಿಬಿ ತಂಡವು ಐಪಿಎಲ್ 2025ರಲ್ಲಿ ಅದ್ಭುತ ಆರಂಭ ಪಡೆದರೂ, ಫಿಲ್ ಸಾಲ್ಟ್ ಅವರ ಅಸ್ಥಿರ ಆಟ ತಂಡಕ್ಕೆ ತೊಂದರೆಯನ್ನುಂಟು ಮಾಡುತ್ತಿದೆ. ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಸಾಲ್ಟ್, ನಂತರದ ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದರು.

IPL 2025: ಒಂದೇ ಪಂದ್ಯಕ್ಕೆ ರುಚಿ ಕಳೆದುಕೊಂಡ ಸಾಲ್ಟ್; ಆರ್​ಸಿಬಿಗೆ ಹೊಸ ತಲೆನೋವು
Phil Salt
ಪೃಥ್ವಿಶಂಕರ
|

Updated on:Apr 07, 2025 | 8:33 PM

Share

2025 ರ ಐಪಿಎಲ್‌ನಲ್ಲಿ (IPL 2025) ಅದ್ಭುತ ಆರಂಭ ಪಡೆದುಕೊಂಡಿದ್ದ ಆರ್​ಸಿಬಿ (RCB), ತಾನು ಆಡಿದ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಮಣಿಸಿದ್ದ ರಜತ್ ಪಡೆ, ಎರಡನೇ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಮಣಿಸಿತ್ತು. ಇದೇ ಹುರುಪಿನೊಂದಿಗೆ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ ಆರ್​ಸಿಬಿ ತನ್ನ ಮೊದಲ ಪಂದ್ಯದಲ್ಲೇ ಸೋಲಿನ ಆಘಾತ ಎದುರಿಸಬೇಕಾಯಿತು. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವೈಫಲ್ಯವೇ ಕಾರಣವಾಗಿತ್ತು. ಗುಜರಾತ್ ವಿರುದ್ಧದ 3ನೇ ಪಂದ್ಯದಲ್ಲಿ ತಂಡದ ಟಾಪ್ ಆರ್ಡರ್ ಮಕಾಡೆ ಮಲಗಿತ್ತು ಅದರಲ್ಲೂ ತಂಡಕ್ಕೆ ಪ್ರತಿ ಪಂದ್ಯದಲ್ಲೂ ಸ್ಫೋಟಕ ಆರಂಭ ಒದಗಿಸುವ ಯತ್ನದಲ್ಲಿ ಮೊದಲ ಓವರ್​ನಲ್ಲೇ ವಿಕೆಟ್ ಕೈಚೆಲ್ಲುವ ಫಿಲ್ ಸಾಲ್ಟ್ (Phil Salt) ಅದ್ಯಾಕೋ ಮೊದಲ ಪಂದ್ಯದ ನಂತರ ಆರ್​ಸಿಬಿ ಪಾಲಿಗೆ ಸಪ್ಪೆಯಾಗಿಬಿಟ್ಟಿದ್ದಾರೆ.

ಮೊದಲ ಪಂದ್ಯದಲ್ಲಿ ಅರ್ಧಶತಕ

ಟೂರ್ನಿಯ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿದ್ದ ಸಾಲ್ಟ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪಂದ್ಯದಲ್ಲಿ ಕೇವಲ 31 ಎಸೆತಗಳನ್ನು ಎದುರಿಸಿದ್ದ ಸಾಲ್ಟ್ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 56 ರನ್ ಸಿಡಿಸಿದ್ದರು. ಆ ಬಳಿಕ ಸಿಎಸ್​ಕೆ ವಿರುದ್ಧದ 2ನೇ ಪಂದ್ಯದಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದ ಸಾಲ್ಟ್ ಬಿಗ್ ಇನ್ನಿಂಗ್ಸ್ ಅಲ್ಲದಿದ್ದರೂ 16 ಎಸೆತಗಳಲ್ಲಿ 32 ರನ್​ಗಳ ಕಾಣಿಕೆ ನೀಡಿದ್ದರು.

ಉಳಿದೆರಡು ಪಂದ್ಯಗಳಲ್ಲಿ ವಿಫಲ

ಆದರೆ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದ ಸಾಲ್ಟ್ 13 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 14 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ಸಾಲ್ಟ್ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್, ಬೋಲ್ಟ್ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಸುಂದರ ಕವರ್ ಡ್ರೈವ್ ಮಾಡಿ ಬೌಂಡರಿ ಕಲೆಹಾಕಿದರು. ಆದರೆ ನಂತರದ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು.

ಆರ್​ಸಿಬಿಗೆ ತಲೆನೋವಾದ ಸಾಲ್ಟ್

ವಾಸ್ತವವಾಗಿ ಸಾಲ್ಟ್ ಪ್ರತಿ ಎಸೆತವನ್ನು ಬೌಂಡರಿಗಟ್ಟುವ ಇರಾದೆಯಲ್ಲೇ ಬ್ಯಾಟ್ ಬೀಸುತ್ತಿದ್ದಾರೆ. ಈ ಯತ್ನದಲ್ಲಿ ಸಾಲ್ಟ್ ಯಶಸ್ವಿಯಾಗಿದ್ದಕ್ಕಿಂತ ವಿಫಲವಾಗಿದ್ದೆ ಹೆಚ್ಚು. ಗುಜರಾತ್ ವಿರುದ್ಧದ ಪಂದ್ಯದಲ್ಲೂ ಸಿರಾಜ್ ವಿರುದ್ಧ ಬೌಂಡರಿ ಬಾರಿಸುವ ಯತ್ನದಲ್ಲಿ ಸಾಲ್ಟ್ ಕ್ಲೀನ್ ಬೌಲ್ಡ್ ಆಗಿದ್ದರು. ಇದೀಗ ಮುಂಬೈ ವಿರುದ್ಧದ ಪಂದ್ಯದಲ್ಲೂ ಅದೇ ಯತ್ನದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದಾರೆ. ಸಾಲ್ಟ್ ಅವರ ವೈಫಲ್ಯ ಇದೀಗ ಆರ್​ಸಿಬಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಯಾವುದೇ ತಂಡಕ್ಕೆ ಆರಂಭ ಉತ್ತಮವಾಗಿರಬೇಕು ಆಗ ಮಾತ್ರ ತಂಡ ಅಂದುಕೊಂಡಂತಹ ಫಲಿತಾಂಶ ನೀಡಲು ಸಾಧ್ಯವಾಗುತ್ತದೆ. ಆದರೆ ಆರ್​​ಸಿಬಿ ಪಾಲಿಗೆ ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಲ್ಟ್ ಬೇಗನೇ ಫಾರ್ಮ್​ ಕಂಡುಕೊಳ್ಳುವುದು ಆರ್​ಸಿಬಿಗೆ ಅತ್ಯವಶ್ಯಕವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Mon, 7 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ