AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಫೈನಲ್ ಪ್ಲೇಯಿಂಗ್ ಇಲೆವೆನ್: RCB ಮುಂದಿದೆ 2 ಆಯ್ಕೆ

IPL 2026 RCB vs GT Final: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಮುಂದೆ ಎರಡು ಪ್ಲೇಯಿಂಗ್ ಇಲೆವೆನ್ ಆಯ್ಕೆಗಳಿವೆ.

IPL 2026: ಫೈನಲ್ ಪ್ಲೇಯಿಂಗ್ ಇಲೆವೆನ್: RCB ಮುಂದಿದೆ 2 ಆಯ್ಕೆ
RCB
ಝಾಹಿರ್ ಯೂಸುಫ್
|

Updated on: May 30, 2026 | 2:18 PM

Share

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮೇ.31) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಹೇಗೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂಬುದೇ ಈಗ ಕುತೂಹಲ.

ಏಕೆಂದರೆ ಈ ಬಾರಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್​ಗಳಲ್ಲೂ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿತ್ತು. ಈ ಸಂಯೋಜನೆಯೊಂದಿಗೆ ಆರ್​ಸಿಬಿ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

  • ಬೆಂಗಳೂರಿನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.
  • ಧರ್ಮಶಾಲಾದಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್​ಗಳಿಂದ ಬಗ್ಗು ಬಡಿಯುವಲ್ಲಿ ಆರ್​ಸಿಬಿ ಯಶಸ್ವಿಯಾಗಿತ್ತು.

ಆದರೆ ಈ ಎರಡು ಜಯಗಳ ನಡುವೆ ಆರ್​ಸಿಬಿ ಒಂದು ಪಂದ್ಯದಲ್ಲಿ ಸೋಲನುಭವಿಸಿದೆ. ಅದು ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.  ಅಂದರೆ ಇದೀಗ ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಫೈನಲ್ ಮ್ಯಾಚ್ ನಡೆಯುತ್ತಿದೆ.

  • ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 42ನೇ ಪಂದ್ಯದಲ್ಲಿ​ ಆರ್​ಸಿಬಿ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 4 ವಿಕೆಟ್​ಗಳ ಜಯ ಸಾಧಿಸಿತ್ತು.

ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳು ಪರಾಕ್ರಮ ಮೆರೆದಿದ್ದರು. ಅಂದರೆ ಆರ್​ಸಿಬಿ ತಂಡವನ್ನು ಕೇವಲ 155 ರನ್​ಗಳಿಗೆ ಆಲೌಟ್ ಮಾಡಿದ್ದರು.

ಇದೀಗ ಅದೇ ಮೈದಾನದಲ್ಲಿ ಮತ್ತೆ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲು ಆರ್​ಸಿಬಿ ಸಜ್ಜಾಗಿದೆ. ಆದರೆ ಈ ಪಂದ್ಯಕ್ಕಾಗಿ ಆರ್​ಸಿಬಿ ಕೊನೆಯ ಬಾರಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್ ಅನ್ನೇ ಮುಂದುವರೆಸಲಿದೆಯಾ? ಅಥವಾ ಈ ಹಿಂದೆ ಅಹಮದಾಬಾದ್​ನಲ್ಲಿ ಆಡಿದ 11 ಆಟಗಾರರನ್ನು ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ.

ಆರ್​ಸಿಬಿ ಮುಂದಿದೆ 2 ಆಯ್ಕೆ:

ಮೊದಲ ಕ್ವಾಲಿಫೈಯರ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದಾಖಲೆಯ ವಿಜಯ ಸಾಧಿಸಿದ ಆಡುವ ಬಳಗವನ್ನೇ ಮುಂದುವರೆಸಲು ಬಯಸಿದರೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ವಿರಾಟ್ ಕೊಹ್ಲಿ
  • ವೆಂಕಟೇಶ್ ಅಯ್ಯರ್
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಕೃನಾಲ್ ಪಾಂಡ್ಯ
  • ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  • ಭುವನೇಶ್ವರ್ ಕುಮಾರ್
  • ಜೋಶ್ ಹೇಝಲ್​ವುಡ್
  • ರಾಸಿಖ್ ದಾರ್
  • ಜೇಕಬ್ ಢಪಿ
  • ರೊಮಾರಿಯೊ ಶೆಫರ್ಡ್ (ಇಂಪ್ಯಾಕ್ಟ್ ಪ್ಲೇಯರ್).

ಈ ಹಿಂದೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಕಣಕ್ಕಿಳಿದ ಬಳಗವನ್ನು ಆಡಿಸಲು ನಿರ್ಧರಿಸಿದರೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ವಿರಾಟ್ ಕೊಹ್ಲಿ
  • ಫಿಲ್ ಸಾಲ್ಟ್​
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಕೃನಾಲ್ ಪಾಂಡ್ಯ
  • ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  • ರೊಮಾರಿಯೊ ಶೆಫರ್ಡ್
  • ಭುವನೇಶ್ವರ್ ಕುಮಾರ್
  • ಜೋಶ್ ಹೇಝಲ್​ವುಡ್
  • ಸುಯಶ್ ಶರ್ಮಾ
  • ರಾಸಿಖ್ ದಾರ್/ ವೆಂಕಟೇಶ್ ಅಯ್ಯರ್ (ಇಂಪ್ಯಾಕ್ಟ್ ಪ್ಲೇಯರ್).

ಇಲ್ಲಿ ಎರಡು ಪ್ಲೇಯಿಂಗ್ ಇಲೆವೆನ್​ನಲ್ಲಿ ಅಂತಹ ದೊಡ್ಡ ಬದಲಾವಣೆ ಕಂಡು ಬರದಿದ್ದರೂ, ಫಿಲ್ ಸಾಲ್ಟ್​ಗೆ ಅವಕಾಶ ನೀಡುವ ಸಲುವಾಗಿ ವೆಂಕಟೇಶ್ ಅಯ್ಯರ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್​ನಲ್ಲಿರಿಸಬಹುದು.

ಇದನ್ನೂ ಓದಿ: IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!

ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಲೈನಪ್​ನೊಂದಿಗೆ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇದೇ ಮೈದಾನದಲ್ಲಿ ಕಳೆದ ಬಾರಿ ಆರ್​ಸಿಬಿ ಕೇವಲ 155 ರನ್​ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಈ ಬಾರಿ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠಗೊಳಿಸುವ ಸಾಧ್ಯತೆ ಹೆಚ್ಚು.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ