AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಗೆದ್ದರೆ 3 ತಂಡಗಳು ಔಟ್..!

RCB playoff chances IPL 2022: ನಾಲ್ಕನೇ ಸ್ಥಾನಕ್ಕಾಗಿ ಈಗಲೂ 4 ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲಿ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಚೂಣಿಯಲ್ಲಿದೆ.

IPL 2022: RCB ಗೆದ್ದರೆ 3 ತಂಡಗಳು ಔಟ್..!
RCB
TV9 Web
| Updated By: ಝಾಹಿರ್ ಯೂಸುಫ್|

Updated on: May 18, 2022 | 3:04 PM

Share

IPL 2022: ಐಪಿಎಲ್ ಸೀಸನ್​ 15 ರ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳು 13 ಪಂದ್ಯಗಳನ್ನಾಡಿದ್ದು, ಇನ್ನು ಕೇವಲ ಒಂದೊಂದು ಪಂದ್ಯ ಮಾತ್ರ ಉಳಿದಿವೆ. ಇದಾಗ್ಯೂ ಗುಜರಾತ್ ಟೈಟನ್ಸ್ (GT) ಹೊರತುಪಡಿಸಿ ಯಾವುದೇ ತಂಡ ಪ್ಲೇಆಫ್ ಖಚಿತ ಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಉಳಿದ ಒಂದು ಪಂದ್ಯಗಳ ಮೂಲಕ 3 ತಂಡಗಳ ಪ್ಲೇಆಫ್​ ಅರ್ಹತೆ ನಿರ್ಧಾರವಾಗಲಿದೆ. ಆದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) 16 ಪಾಯಿಂಟ್ಸ್​ನೊಂದಿಗೆ ಕ್ರಮವಾಗಿ 2ನೇ ಮತ್ತು 3ನೇ ಸ್ಥಾನದಲ್ಲಿದೆ. ಈ ತಂಡಗಳು ಮುಂದಿನ ಪಂದ್ಯ ಗೆದ್ದರೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಇದಾಗ್ಯೂ ನಾಲ್ಕನೇ ಸ್ಥಾನವನ್ನು ಯಾವ ತಂಡ ಅಲಂಕರಿಸಲಿದೆ ಎಂಬುದೇ ಕುತೂಹಲ.

ಏಕೆಂದರೆ ನಾಲ್ಕನೇ ಸ್ಥಾನಕ್ಕಾಗಿ ಈಗಲೂ 4 ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲಿ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಚೂಣಿಯಲ್ಲಿದೆ. ಇದಲ್ಲದೆ ಆರ್​ಸಿಬಿ ತಂಡಕ್ಕೂ ಪ್ಲೇಆಫ್​ ಪ್ರವೇಶಿಸುವ ಅವಕಾಶವಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳ ಪಾಯಿಂಟ್ಸ್ 14 ಇದ್ದು, ಕೊನೆಯ ಪಂದ್ಯದಲ್ಲಿ ಅತ್ಯುತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲುವ ತಂಡಕ್ಕೆ ಪ್ಲೇಆಫ್ ಅವಕಾಶ ದೊರೆಯಲಿದೆ.

ಒಂದು ವೇಳೆ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ದ ಹಾಗೂ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಸೋತರೆ, ಮತ್ತೆರಡು ತಂಡಗಳು ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ನಾಲ್ಕನೇ ಸ್ಥಾನ ಪಡೆಯುವ ತಂಡವು 14 ಪಾಯಿಂಟ್ಸ್​ನಲ್ಲೇ ಉಳಿದರೆ ಕೆಕೆಆರ್, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳು ಪ್ಲೇಆಫ್​ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಈ ತಂಡಗಳ ಪಾಯಿಂಟ್ಸ್​ 12 ಇದ್ದು, ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಈ ತಂಡಗಳು ಕೂಡ 14 ಪಾಯಿಂಟ್ಸ್​ಗಳಿಸಬಹುದು.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

ಹೀಗಾಗಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತರೆ ಕೆಕೆಆರ್, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳ ಪ್ಲೇಆಫ್ ಆಸೆ ಜೀವಂತವಿರಲಿದೆ. ಆದರೆ ಗುರುವಾರ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್​ ವಿರುದ್ದ ಗೆದ್ದರೆ ಈ ಮೂರು ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

ಏಕೆಂದರೆ ಮುಂದಿನ ಗೆಲುವಿನೊಂದಿಗೆ ಆರ್​ಸಿಬಿ ತಂಡದ ಪಾಯಿಂಟ್ಸ್ 16 ಆಗಲಿದೆ. ಇತ್ತ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ತಂಡವು 14 ಪಾಯಿಂಟ್ಸ್ ಹೊಂದಿದ್ದರೆ ಮಾತ್ರ ಪಂಜಾಬ್ ಕಿಂಗ್ಸ್, ಕೆಕೆಆರ್ ಹಾಗೂ ಎಸ್​ಆರ್​ಹೆಚ್ ತಂಡಗಳಿಗೆ ಚಾನ್ಸ್ ಇರಲಿದೆ. ಹೀಗಾಗಿ ಗುಜರಾತ್ ಟೈಟನ್ಸ್ ವಿರುದ್ದದ ಆರ್​ಸಿಬಿಯ ಫಲಿತಾಂಶ 3 ತಂಡಗಳ ಪ್ಲೇಆಫ್​ ಅವಕಾಶವನ್ನು ನಿರ್ಧರಿಸಲಿದೆ. ಒಂದು ವೇಳೆ ಆರ್​ಸಿಬಿ ಸೋತರೂ, ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಕೆಕೆಆರ್, ಆರ್​ಸಿಬಿ, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳು ಪ್ಲೇಆಫ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ತಂಡಗಳ ಫಲಿತಾಂಶಗಳ ಮೇಲೆ ಇದೀಗ ಎಲ್ಲರ ಕಣ್ಣುನೆಟ್ಟಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್