AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್

Rajat Patidar's RCB Dominance: ಹಾಲಿ ಚಾಂಪಿಯನ್ ಆರ್‌ಸಿಬಿ ಈ ಐಪಿಎಲ್ ಆವೃತ್ತಿಯಲ್ಲೂ ಅಮೋಘ ಪ್ರದರ್ಶನ ನೀಡುತ್ತಿದೆ. ನಾಯಕ ರಜತ್ ಪಾಟಿದಾರ್ ಸಾರಥ್ಯದಲ್ಲಿ ತಂಡ 5ರಲ್ಲಿ 4 ಪಂದ್ಯ ಗೆದ್ದಿದೆ. ಕಳೆದ ಸೀಸನ್‌ನಲ್ಲಿ ತಂಡವನ್ನು ಚಾಂಪಿಯನ್ ಮಾಡಿದ್ದ ಪಾಟಿದಾರ್ ಅವರ ನಾಯಕತ್ವ ಮತ್ತು ಬ್ಯಾಟಿಂಗ್ ಗುಣಗಳನ್ನು ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಜಿಯೋಹಾಟ್‌ಸ್ಟಾರ್ ಸಂದರ್ಶನದಲ್ಲಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪಾಟಿದಾರ್ ಅವರ ಯಶಸ್ಸು ಐಪಿಎಲ್‌ನಲ್ಲಿ ಸದ್ಯದ ದೊಡ್ಡ ಚರ್ಚೆ.

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್
Rajat Patidar, Shreyas Iyer
ಪೃಥ್ವಿಶಂಕರ
|

Updated on: Apr 17, 2026 | 7:44 PM

Share

ಐಪಿಎಲ್​ನ (IPL) ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಆವೃತ್ತಿಯಲ್ಲೂ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ. ತಂಡದ ಈ ಯಶೋಗಾಥೆಯಲ್ಲಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar ) ಅವರ ಪಾತ್ರ ಅಪಾರವಾಗಿದೆ. ಕಳೆದ ಸೀಸನ್​ನಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡು ತಂಡವನ್ನು ಚಾಂಪಿಯನ್ ಮಾಡಿದ್ದ ಪಾಟಿದಾರ್ ಈ ಆವೃತ್ತಿಯಲ್ಲೂ ತಂಡವನ್ನು ಚಾಂಪಿಯನ್‌ ಮಾಡುವತ್ತ ಪ್ರಯತ್ನ ನಡೆಸುತ್ತಿದ್ದಾರೆ.

ರಜತ್ ಅವರ ನಾಯಕತ್ವದ ಗುಣಗಳು ಉಳಿದ ಐಪಿಎಲ್ ಫ್ರಾಂಚೈಸಿಗಳನ್ನು ಬೆರಗಾಗಿಸಿವೆ. ಇದಕ್ಕೆ ಉದಾಹರಣೆ ಎಂಬಂತೆ ಕಳೆದ ಆವೃತ್ತಿಯ ಫೈನಲ್​ನಲ್ಲಿ ಇದೇ ಆರ್​ಸಿಬಿ ವಿರುದ್ಧ ಸೋತಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಅವರ ಈ ಎರಡು ಗುಣಗಳನ್ನು ಮೆಚ್ಚಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಅಯ್ಯರ್​ಗೆ ಪಾಟಿದರ್ ಅವರ ಈ 2 ಗುಣ ಇಷ್ಟ

ಐಪಿಎಲ್ ಪ್ರಸಾರಕ ಜಿಯೋಹಾಟ್‌ಸ್ಟಾರ್, ಯೂಟ್ಯೂಬ್‌ನಲ್ಲಿ ಶ್ರೇಯಸ್ ಅಯ್ಯರ್ ಅವರೊಂದಿಗಿನ ಸಂದರ್ಶನವನ್ನು ಪೋಸ್ಟ್ ಮಾಡಿದೆ. ಈ ಸಂದರ್ಶನದಲ್ಲಿ, ಅವರಿಗೆ 20 ಪ್ರಶ್ನೆಗಳನ್ನು ಕೇಳಲಾಗಿದೆ. ಈ 20 ಪ್ರಶ್ನೆಗಳಲ್ಲಿ ಎರಡು ಪ್ರಶ್ನೆಗಳಿಗೆ ಉತ್ತರವಾಗಿ ಶ್ರೇಯಸ್ ಅಯ್ಯರ್ ಪಾಟಿದಾರ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ. ಅದರಲ್ಲಿ ಮೊದಲನೇ ಪ್ರಶ್ನೆ, ಐಪಿಎಲ್‌ನಲ್ಲಿ ಯಾವ ನಾಯಕನಿಂದ ಸಲಹೆ ಪಡೆಯಲು ಬಯಸುತ್ತೀರಿ ಎಂದು ಅಯ್ಯರ್ ಅವರನ್ನು ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿ ರಜತ್ ಪಾಟಿದಾರ್ ಎಂದು ಹೆಸರಿಸಿದ್ದಾರೆ. ನಂತರ, ಪ್ರಸ್ತುತ ಪೀಳಿಗೆಯಲ್ಲಿ ಅತ್ಯಂತ ಸ್ಟೈಲಿಶ್ ಬ್ಯಾಟ್ಸ್‌ಮನ್ ಯಾರು ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಇದಕ್ಕೆ ಅಯ್ಯರ್ ಮತ್ತೊಮ್ಮೆ ಪಾಟಿದಾರ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

IPL 2026: ಮೊದಲ ಬಾರಿಗೆ ಬದಲಾದ ಸಮಯದಲ್ಲಿ ಪಂದ್ಯವನ್ನಾಡಲಿದೆ ಆರ್​ಸಿಬಿ

ನಾಯಕನಾಗಿ ಗೆದ್ದ ಪಾಟಿದಾರ್

ಪ್ರಸ್ತುತ ಪಾಟಿದಾರ್ ಅವರ ನಾಯಕತ್ವ ಮತ್ತು ಅವರ ಬ್ಯಾಟಿಂಗ್‌ನ ಯಶಸ್ಸನ್ನು ಪರಿಗಣಿಸಿದರೆ, ಅಯ್ಯರ್ ನೀಡಿದ ಉತ್ತರಗಳು ತಪ್ಪಾಗಿ ಕಾಣುತ್ತಿಲ್ಲ. ಕಳೆದ ವರ್ಷ, ರಜತ್ ಪಾಟಿದಾರ್ ಮೊದಲ ಬಾರಿಗೆ ಆರ್‌ಸಿಬಿಯ ಉಸ್ತುವಾರಿ ವಹಿಸಿಕೊಂಡು ಮೊದಲ ಸೀಸನ್‌ನಲ್ಲಿಯೇ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. 2022-23 ಸೀಸನ್‌ನಿಂದ, ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಪ್ರಸ್ತುತ ಈ ಆವೃತ್ತಿಯಲ್ಲಿ ಪಾಟಿದಾರ್ ಕೇವಲ ಐದು ಪಂದ್ಯಗಳನ್ನಾಡಿದ್ದು 21 ಸಿಕ್ಸರ್‌ಗಳು ಸೇರಿದಂತೆ 222 ರ ಸ್ಟ್ರೈಕ್ ರೇಟ್‌ನಲ್ಲಿ 213 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ