AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಈ ಬೌಲರ್​ನಿಂದ RCB ಕಪ್ ಗೆಲ್ಲಬಹುದು ಎಂದ ಕೈಫ್

RCB Team: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್.

IPL 2022: ಈ ಬೌಲರ್​ನಿಂದ RCB ಕಪ್ ಗೆಲ್ಲಬಹುದು ಎಂದ ಕೈಫ್
RCB
TV9 Web
| Edited By: |

Updated on: Apr 21, 2022 | 6:30 PM

Share

IPL 2022: ಐಪಿಎಲ್ ಸೀಸನ್​ 15 ಆರ್​ಸಿಬಿ (RCB) ತಂಡವು ಉತ್ತಮ ಆರಂಭ ಪಡೆದಿದೆ. ಆಡಿರುವ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡವು 5 ರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಈ ಬಾರಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಆರ್​ಸಿಬಿ ಇದೀಗ ಬೌಲಿಂಗ್ ಲೈನಪ್​ನಲ್ಲೂ ಲಯ ಸಾಧಿಸಿದೆ. ಇದಕ್ಕೆ ಸಾಕ್ಷಿಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳಿಂದ ಜಯ ಸಾಧಿಸಿದ್ದು. ಇತ್ತ ಆರ್​ಸಿಬಿ ತಂಡದ ಉತ್ತಮ ಬೌಲಿಂಗ್ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ನೀಡಿರುವ ಹೇಳಿಕೆಯೊಂದು ಎಲ್ಲರ ಗಮನ ಸೆಳೆದಿದೆ. ಆರ್​ಸಿಬಿ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿರುವ ಕೈಫ್, ಆರ್​ಸಿಬಿಗೆ ಉತ್ತಮ ಬೌಲರ್ ಒಬ್ಬರ ಅಗತ್ಯವಿತ್ತು. ಇದೀಗ ಜೋಶ್ ಹ್ಯಾಝಲ್​ವುಡ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ಕೂಡ ಬಲಿಷ್ಠವಾಗಿದೆ.

ಜೋಶ್ ಹ್ಯಾಝಲ್​ವುಡ್ ಅತ್ಯುತ್ತಮ ಬೌಲರ್ ಎಂಬುದಕ್ಕೆ ಲಕ್ನೋ ವಿರುದ್ದದ ಪಂದ್ಯವೇ ಸಾಕ್ಷಿ. ಆತ ಆರ್​ಸಿಬಿ ತಂಡಕ್ಕೆ ಕಪ್ ಗೆಲ್ಲಿಸಿಕೊಡಬಲ್ಲ ಬೌಲರ್. ಅಂತಹ ಸಾಮರ್ಥ್ಯ ಹೊಂದಿರುವ ವೇಗಿ ಇರುವಾಗ ಒಂದು ತಂಡ ಟ್ರೋಫಿ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

ನನ್ನ ಪ್ರಕಾರ, ಆರ್​ಸಿಬಿ ಹ್ಯಾಝಲ್​ವುಡ್​ನಂತಹ ಬೌಲರ್​ನ ಅಗತ್ಯವಿತ್ತು. ಏಕೆಂದರೆ ಆರ್​ಸಿಬಿ ಉತ್ತಮ ಬ್ಯಾಟಿಂಗ್ ಲೈನಪ್ ಹೊಂದಿದೆ. ಈ ಹಿಂದೆ ಕೂಡ ಆರ್​ಸಿಬಿ ತಂಡದ ಬ್ಯಾಟಿಂಗ್​ ಲೈನ್ ಉತ್ತಮವಾಗಿತ್ತು. ಕ್ರಿಸ್ ಗೇಲ್, ಎಬಿಡಿ ಅವರಂತಹ ಬ್ಯಾಟ್ಸ್​ಮನ್​ಗಳು ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದರು. ಇದಾಗ್ಯೂ ಬೌಲಿಂಗ್​ ಬಲಪಡಿಸಬೇಕಿತ್ತು. ಉತ್ತಮ ಬೌಲರ್​ಗಳನ್ನು ಹೊಂದಿದ್ದರೆ ಮಾತ್ರ ಕಪ್ ಗೆಲ್ಲಲು ಸಾಧ್ಯ. ಇದೀಗ ಜೋಶ್ ಹ್ಯಾಝಲ್​ವುಡ್​ನಂತಹ ಬೌಲರ್​ಗಳು ಆರ್​ಸಿಬಿ ತಂಡದಲ್ಲಿರುವುದು ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಹೀಗಾಗಿ ಈ ಸಲ ಆರ್​ಸಿಬಿಗೆ ಕಪ್ ಗೆಲ್ಲಲು ಸಾಧ್ಯವಿದೆ ಎಂದು ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಪರ 3 ಪಂದ್ಯವಾಡಿರುವ ಜೋಶ್ ಹ್ಯಾಝಲ್​ವುಡ್ ಒಟ್ಟು 8 ವಿಕೆಟ್ ಪಡೆದಿದ್ದಾರೆ. ಇನ್ನು ಮೂರು ಪಂದ್ಯಗಳಲ್ಲಿ 12 ಓವರ್ ಬೌಲಿಂಗ್ ಮಾಡಿರುವ ಹ್ಯಾಝಲ್​ವುಡ್ ನೀಡಿರುವುದು ಕೇವಲ 86 ರನ್​ಗಳು ಮಾತ್ರ. ಹೀಗಾಗಿಯೇ ಜೋಶ್ ಹ್ಯಾಝಲ್​ವುಡ್-ಹರ್ಷಲ್ ಪಟೇಲ್ ಜುಗಲ್​ಬಂಧಿಯೊಂದಿಗೆ ಆರ್​ಸಿಬಿ ಬೌಲಿಂಗ್ ಲೈನಪ್ ಕೂಡ ಬಲಿಷ್ಠವಾಗಿದೆ. ಅದರಂತೆ ಮೊಹಮ್ಮದ್ ಕೈಫ್ ಹೇಳಿದಂತೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

RCB Team: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ