AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಪಂದ್ಯ ಆರಂಭಕ್ಕೂ ಮುನ್ನವೇ ಸಖತ್ ಟ್ರೆಂಡ್ ಆದ ಆರ್​ಸಿಬಿ: ಕಪ್ ನಮ್ದೆ ಎನ್ನುತ್ತಿರುವ ಫ್ಯಾನ್ಸ್

RR vs RCB Qualifier 2, IPL 2022: ಐಪಿಎಲ್ 2022 ರಲ್ಲಿಂದು ಸಂಜೆ 7:30ಕ್ಕೆ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಇದಕ್ಕೂ ಮುನ್ನವೇ ಆರ್​ಸಿಬಿ ಸಖತ್ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ.

RCB: ಪಂದ್ಯ ಆರಂಭಕ್ಕೂ ಮುನ್ನವೇ ಸಖತ್ ಟ್ರೆಂಡ್ ಆದ ಆರ್​ಸಿಬಿ: ಕಪ್ ನಮ್ದೆ ಎನ್ನುತ್ತಿರುವ ಫ್ಯಾನ್ಸ್
RR vs RCB Qualifier 2, IPL 2022Image Credit source: RCB Twitter
TV9 Web
| Edited By: |

Updated on:May 27, 2022 | 3:17 PM

Share

ಅಹಮ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 15ನೇ ಆವೃತ್ತಿಯ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ (RCB vs RR) ತಂಡಗಳು ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಈ ರೋಚಕ ಕದನ ಶುರುವಾಗಲಿದೆ. ಆದರೆ, ಇದಕ್ಕೂ ಮುನ್ನವೇ ಆರ್​ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ. ಟ್ವಿಟರ್​​ನಲ್ಲಿ (Twitter) ಆರ್​ಸಿಬಿ ಅಭಿಮಾನಿಗಳು ಟ್ರೆಂಡ್ ಸೃಷ್ಟಿಸಿದ್ದು ಇಂದಿನ ಪಂದ್ಯದಲ್ಲಿ ಬೆಂಗಳೂರಿಗೆ ಜಯ, ಐಪಿಎಲ್ 2022 (IPL 2022) ಫೈನಲ್​ನಲ್ಲಿ ಗುಜರಾತ್​ ಹಾಗೂ ಆರ್​​​ಸಿಬಿ ಮುಖಾಮುಖಿ ಆಗಲಿದೆ ಎಂದು ಹೇಳುತ್ತಿದ್ದಾರೆ. ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ತಮ್ಮ ಪ್ರಿಡಿಕ್ಷನ್ ಪ್ರಕಟಿಸಿದ್ದು, ಇದರಲ್ಲಿ ಆರ್​ಸಿಬಿಗೆ ಜಯ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ.

ಈ ರೋಚಕ ಕದನಕ್ಕೆ ಯಾವುದೇ ಮಳೆಯ ಅಡ್ಡಿ ಕೂಡ ಇಲ್ಲ. ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್‌ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.

ಇದನ್ನೂ ಓದಿ
Image
Harshal Patel: ಪಟಿದಾರ್ ಅಲ್ಲ: ಆರ್​ಸಿಬಿಯ ಈ ಆಟಗಾರನಿಗೆ 15 ಕೋಟಿ ಕೊಡಬೇಕು ಎಂದ ಸೆಹ್ವಾಗ್
Image
Women’s T20 Challenge: ಮಹಿಳೆಯರ ಟಿ20 ಚಾಲೆಂಜ್: ಪಂದ್ಯ ಸೋತರೂ ಫೈನಲ್​ಗೆ ಲಗ್ಗೆಯಿಟ್ಟ ವೆಲಾಸಿಟಿ
Image
Jos Buttler: ಶಾಕಿಂಗ್: ಜೋಸ್ ಬಟ್ಲರ್ ನನ್ನ ಎರಡನೇ ಗಂಡ ಎಂದ ಸ್ಟಾರ್ ಆಟಗಾರನ ಪತ್ನಿ
Image
RR vs RCB: ಕ್ವಾಲಿಫೈಯರ್-2 ಮುನ್ನ ಆರ್​ಸಿಬಿ ತಂಡದಲ್ಲಾಗುತ್ತಾ ಮೂರು ಮೇಜರ್ ಸರ್ಜರಿ

RR vs RCB Qualifier 2: ಕ್ವಾಲಿಫೈಯರ್-2ಗೆ ಆರ್​ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

ಇತ್ತ ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್‌ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಹಿಂದಿನ ಪಂದ್ಯಗಳನ್ನು ಗಮನಿಸಿದರೆ ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ವಿಕೆಟ್ ಕಬಳಿಸಲಿದ್ದು, ಬ್ಯಾಟ್ಸ್‌ಮನ್‌ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು. ಈ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯಗಳು ಕಡಿಮೆ ರನ್ ಮೊತ್ತದ ಪಂದ್ಯಗಳಾಗಿದ್ದು, ದೊಡ್ಡ ಬೌಂಡರಿಗಳಾಗಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಅಬ್ಬರಿಸುವುದೂ ಕಷ್ಟ.

ಆರ್​​ಸಿಬಿ ಇಂದಿನ ಪಂದ್ಯವನ್ನು ಜಯಿಸಿದರೆ ಫೈನಲ್ ಪ್ರವೇಶಿಸಲಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. 2009, 2011 ಮತ್ತು 2016ರಲ್ಲಿ ಬೆಂಗಳೂರು ರನ್ನರ್-ಅಪ್ ಆಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ 2008ರ ಉದ್ಘಾಟನೆ ಆವೃತ್ತಿಯ ಚಾಂಪಿಯನ್ ತಂಡ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದಂತಾಗುತ್ತದೆ.

ಸಂಭಾವ್ಯ ಪ್ಲೇಯಿಂಗ್ XI:

ಆರ್​​ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್​ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Fri, 27 May 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?