AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT, IPL 2025: ಸತತ ಎರಡು ಪಂದ್ಯ ಗೆದ್ದ ಆರ್​ಸಿಬಿಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?

Bengaluru vs Gujarat, IPL 2025: ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಹ್ಯಾಟ್ರಿಕ್ ಗೆಲುವಿಗಾಗಿ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಬೆಂಗಳೂರಿನ ಮುಂದಿನ ಪಂದ್ಯದ ದಿನಾಂಕ ಮತ್ತು ಸ್ಥಳದ ಜೊತೆಗೆ ಯಾವ ತಂಡವನ್ನು ಎದುರಿಸಲಿದೆ ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

RCB vs GT, IPL 2025: ಸತತ ಎರಡು ಪಂದ್ಯ ಗೆದ್ದ ಆರ್​ಸಿಬಿಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?
Rcb Next Match Ipl 2025
Vinay Bhat
|

Updated on:Apr 01, 2025 | 9:52 AM

Share

(ಬೆಂಗಳೂರು, ಏ 01): ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಶುಕ್ರವಾರ (ಮಾರ್ಚ್ 28) ತನ್ನ ಬದ್ದವೈರಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತವರಿನಲ್ಲೇ ಅತಿ ದೊಡ್ಡ ಅಂತರದ ಸೋಲಿ ರುಚಿ ತೋರಿಸಿತು. ಇದಕ್ಕೂ ಮುನ್ನ ಮಾರ್ಚ್ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ ಜಯ ಸಾಧಿಸುವ ಮೂಲಕ ಋತುವಿನ ಆರಂಭಿತ್ತು. ಈ ಮೂಲಕ ರಜತ್ ಪಾಟಿದಾರ್ ಸತತ ಗೆಲುವುಗಳೊಂದಿಗೆ ಆರ್‌ಸಿಬಿಯಲ್ಲಿ ತಮ್ಮ ನಾಯಕತ್ವದ ಅವಧಿಯನ್ನು ಪ್ರಾರಂಭಿಸಿದ್ದಾರೆ.

ಕೃನಾಲ್ ಪಾಂಡ್ಯ ಅವರ ಬೌಲಿಂಗ್ ಪ್ರದರ್ಶನ ಮತ್ತು ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ತಂಡವು ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಮೊದಲ ಐಪಿಎಲ್ ಟ್ರೋಫಿಯ ಹುಡುಕಾಟ ಆರಂಭಿಸಿತು. 175 ರನ್‌ಗಳ ಗುರಿಯನ್ನು 22 ಎಸೆತಗಳು ಬಾಕಿ ಇರುವಾಗಲೇ ಪೂರ್ಣಗೊಳಿಸಿತು.

ಇದನ್ನೂ ಓದಿ
Image
ಪೋಸ್ಟ್ ಮ್ಯಾಚ್​ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ
Image
ಪಂದ್ಯ ಮುಗಿದ ಬಳಿಕ ಮುಂಬೈ ಬಸ್ ಏರಿದ ಹಾರ್ದಿಕ್ ಪಾಂಡ್ಯ ಹೊಸ ಗರ್ಲ್ ಫ್ರೆಂಡ್
Image
ಹಾಲಿ ಚಾಂಪಿಯನ್ ಕೆಕೆಆರ್​ಗೆ ಟೂರ್ನಿಯಲ್ಲಿ 2ನೇ ಸೋಲು
Image
ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್; ಅಶ್ವನಿ ವೇಗಕ್ಕೆ ತತ್ತರಿಸಿದ ಕೆಕೆಆರ್

ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಆರ್​ಸಿಬಿ ನಾಯಕ ಪಾಟಿದಾರ್ ಅವರ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್‌ಗಳ ಸವಾಲಿನ ಗುರಿಯನ್ನು ನೀಡಿತು, ಆದರೆ ಜೋಶ್ ಹ್ಯಾಜಲ್‌ವುಡ್ (29ಕ್ಕೆ 3) ನೇತೃತ್ವದ ಸಾಮೂಹಿಕ ಬೌಲಿಂಗ್ ಪ್ರಯತ್ನದಿಂದ ಸಿಎಸ್‌ಕೆಯನ್ನು 146 ರನ್‌ಗಳಿಗೆ ಸೀಮಿತಗೊಳಿಸಿತು.

ಸದ್ಯ ಆರ್​ಸಿಬಿ ತಂಡವು 2025 ರ ಐಪಿಎಲ್‌ನಲ್ಲಿ ತಮ್ಮ ಮುಂದಿನ ಪಂದ್ಯವನ್ನೂ ಗೆದ್ದು ಹ್ಯಾಟ್ರಿಕ್ ಜಯದ ಸಾಧನೆ ಮಾಡುವ ಗುರಿಯನ್ನು ಹೊಂದಿದೆ. ಬೆಂಗಳೂರಿನ ಮುಂದಿನ ಪಂದ್ಯದ ದಿನಾಂಕ ಮತ್ತು ಸ್ಥಳದ ಜೊತೆಗೆ ಯಾವ ತಂಡವನ್ನು ಎದುರಿಸಲಿದೆ ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

MI vs KKR, IPL 2025: ಪೋಸ್ಟ್ ಮ್ಯಾಚ್​ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ: ಏನಂದ್ರು ನೋಡಿ

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವಾಗ, ಎಲ್ಲಿ ಮತ್ತು ಯಾರೊಂದಿಗೆ ಆಡಲಿದೆ?

ಸಿಎಸ್‌ಕೆ ವಿರುದ್ಧ ಜಯಗಳಿಸಿದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಕ್ಕಾಗಿ ತವರು ಬೆಂಗಳೂರಿಗೆ ಬಂದಿದೆ. ಆರ್‌ಸಿಬಿಯ ಮುಂದಿನ ಪಂದ್ಯ ಬುಧವಾರ (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿದೆ.

ಐಪಿಎಲ್ 2025 ರಲ್ಲಿ RCB ಯ ಮುಂದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಶುರುವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.

ಗುಜರಾತ್ ಟೈಟಾನ್ಸ್ ಸಂಭಾವ್ತ ಪ್ಲೇಯಿಂಗ್ 11: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋರ್ಡ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Tue, 1 April 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ