AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​​ಸಿಬಿಗೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪಡಿಕ್ಕಲ್..! ಬದಲಿಯಾಗಿ ಬಂದ ಮತ್ತೊಬ್ಬ ಕನ್ನಡಿಗ

RCB IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಆಡಿರುವ 11 ಪಂದ್ಯಗಳಲ್ಲಿ 8 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು ಪ್ರಮುಖ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರನ್ನು ಆರ್‌ಸಿಬಿ ತಂಡಕ್ಕೆ ಸೇರಿಸಿಕೊಂಡಿದೆ.

IPL 2025: ಆರ್​​ಸಿಬಿಗೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪಡಿಕ್ಕಲ್..! ಬದಲಿಯಾಗಿ ಬಂದ ಮತ್ತೊಬ್ಬ ಕನ್ನಡಿಗ
Devdutt Padikkal
Follow us
ಪೃಥ್ವಿಶಂಕರ
|

Updated on:May 07, 2025 | 10:09 PM

2025 ರ ಐಪಿಎಲ್​ನಲ್ಲಿ (IPL 2025) ಉತ್ತಮ ತಂಡ ಕಟ್ಟಿಕೊಂಡು ಅಮೋಘ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಪ್ಲೇಆಫ್‌ಗೇರಲು ತುದಿಗಾಲಿನಲ್ಲಿ ನಿಂತಿದೆ. ಇದುವರೆಗೆ ಆಡಿರುವ 11 ಪಂದ್ಯಗಳ ಪೈಕಿ 8 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ 16 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಇದೀಗ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕೆಂದರೆ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ. ಆದರೆ ಈ ನಡುವೆ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ (Devdutt Padikkal) ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ (Mayank Agarwal) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆರ್​ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದೆ.

ತಂಡದಲ್ಲಿ ಸಾಕಷ್ಟು ಗಾಯದ ಸಮಸ್ಯೆ

ಪ್ಲೇ ಆಫ್ ಸನಿಹವಾಗುತ್ತಿರುವಾಗ ಆರ್​​ಸಿಬಿಗೆ ಆಟಗಾರರ ಇಂಜುರಿ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಈ ಮೊದಲು ಆರಂಭಿಕ ಆಟಗಾರ ಫಿಲ್ ಸಾಲ್ಟ್ ಜ್ವರದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಮುಖ ವೇಗಿ ಜೋಶ್ ಹೇಜಲ್​ವುಡ್ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಇದರ ಜೊತೆಗೆ ನಾಯಕ ರಜತ್ ಪಾಟಿದರ್ ಕೂಡ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಇದರ ಜೊತೆಗೆ ಇದೀಗ ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಪಡಿಕ್ಕಲ್​ಗೆ ಮಂಡಿರಜ್ಜು ಗಾಯ

ವಾಸ್ತವವಾಗಿ ಈ ಸೀಸನ್​ನಲ್ಲಿ ಪಡಿಕ್ಕಲ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಆಡಿರುವ 10 ಪಂದ್ಯಗಳಲ್ಲಿ ಪಡಿಕ್ಕಲ್ 247 ರನ್‌ಗಳನ್ನು ಗಳಿಸಿದ್ದರು.  ಇದರಲ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2025 ರಲ್ಲಿ ಮೂರನೇ ಸ್ಥಾನದಲ್ಲಿ ಆರ್‌ಸಿಬಿ ಪರ ಪ್ರಮುಖ ಪಾತ್ರ ವಹಿಸುತ್ತಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರನ್ನು ಪಂದ್ಯಾವಳಿಯಿಂದ ಹೊರಗಿಡುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. ಪಡಿಕ್ಕಲ್ ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಮಯಾಂಕ್ ಅಗರ್ವಾಲ್ ಇನ್

ದೇವದತ್ ಪಡಿಕ್ಕಲ್ ಬದಲಿಗೆ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಆರ್​ಸಿಬಿ ಪಾಳಯವನ್ನು ಸೇರಿಕೊಂಡಿದ್ದಾರೆ. ಮಯಾಂಕ್ ಈ ಹಿಂದೆಯೂ ಆರ್‌ಸಿಬಿ ಪರ ಆಡಿದ್ದಾರೆ. ಮಯಾಂಕ್‌ಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾಕಷ್ಟು ಆಡಿದ ಅನುಭವವಿದ್ದು, ಅವರು ಈ ಲೀಗ್‌ನಲ್ಲಿ ಇದುವರೆಗೆ 127 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 2661 ರನ್ ಗಳಿಸಿದ್ದು, ಇದರಲ್ಲಿ ಒಂದು ಶತಕ ಮತ್ತು 13 ಅರ್ಧಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Wed, 7 May 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ