AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harshal Patel: ಆರ್​ಸಿಬಿಗೆ ದೊಡ್ಡ ಆಘಾತ: ಬಯೋ ಬಬಲ್ ತೊರೆದ ಹರ್ಷಲ್ ಪಟೇಲ್: ಕಾರಣವೇನು?

Harshal Patel leaves IPL bio-bubble: ಸ್ಟಾರ್ ಪ್ಲೇಯರ್, ಬೌಲಿಂಗ್​ನಲ್ಲಿ ಆರ್​​ಸಿಬಿಯ ಆಪತ್ಭಾಂದವ ಎಂದೇ ಹೇಳಲಾಗುವ ಹರ್ಷಲ್ ಪಟೇಲ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಮುಗಿದ ಬಳಿಕ ಐಪಿಎಲ್​ನ ಬಯೋ ಬಬಲ್ ತೊರೆದಿದ್ದಾರೆ.

Harshal Patel: ಆರ್​ಸಿಬಿಗೆ ದೊಡ್ಡ ಆಘಾತ: ಬಯೋ ಬಬಲ್ ತೊರೆದ ಹರ್ಷಲ್ ಪಟೇಲ್: ಕಾರಣವೇನು?
Harshal Patel
TV9 Web
| Edited By: |

Updated on: Apr 10, 2022 | 12:11 PM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal Challengers Bangalore) ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊದಲ ಪಂದ್ಯದಲ್ಲಿ ದೊಡ್ಡ ರನ್ ಕಲೆಹಾಕಿ ಸೋತರೂ ನಂತರ ಆಡಿದ ಮೂರೂ ಪಂದ್ಯಗಳಲ್ಲಿ ಅಮೋಘ ಆಟವಾಡಿ ಹ್ಯಾಟ್ರಿಕ್ ಜಯದೊಂದಿಗೆ ಐಪಿಎಲ್ 2022 ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆರ್​ಸಿಬಿ ತಂಡ ಉತ್ತಮ ಲಯಕ್ಕೆ ಬಂದಿದೆ ಎಂಬೊತ್ತಿಗೆ ಇದೀಗ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಪ್ಲೇಯರ್, ಬೌಲಿಂಗ್​ನಲ್ಲಿ ಆರ್​​ಸಿಬಿಯ ಆಪತ್ಭಾಂದವ ಎಂದೇ ಹೇಳಲಾಗುವ ಹರ್ಷಲ್ ಪಟೇಲ್ (Harshal Patel) ಐಪಿಎಲ್​ನ ಬಯೋ ಬಬಲ್ ತೊರೆದಿದ್ದಾರೆ. ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ಗೆಲುವು ಸಾಧಿಸಿದ ಬಳಿಕ ಹರ್ಷಲ್ ಬಯೋ ಬಬಲ್​ನಿಂದ (IPL bio-bubble) ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಇವರು ಪುಣೆಯಿಂದ ನೇರವಾಗಿ ತಮ್ಮ ಮನೆಗೆ ತೆರಳಿದಿದ್ದಾರೆ ಎಂದು ತಿಳಿದುಬಂದಿದೆ. ಇದು ಫಾಫ್ ಪಡೆಗೆ ದೊಡ್ಡ ಹಿನ್ನಡೆಯಾಗಿದೆ.

ಮೂಲಗಳ ಪ್ರಕಾರ, ಹರ್ಷಲ್ ಪಟೇಲ್ ಅವರ ಸಹೋದರಿ ನಿಧನ ಹೊಂದಿದ ಕಾರಣ ಅವರು ಮುಂಬೈ ವಿರುದ್ಧದ ಪಂದ್ಯ ಮುಗಿದ ಬಳಿಕ ಪಣೆಯಿಂದ ತಮ್ಮ ಊರಿಗೆ ತೆರಳಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 12 ರಂದು ನಾಲ್ಕು ಸೋಲುಗಳನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಹೊತ್ತಿಗೆ ಹರ್ಷಲ್ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಹಾಗೊಂದುವೇಳೆ ಇವರು ಆರ್​ಸಿಬಿ ತಂಡ ಸೇರಿಕೊಂಡರೂ ಐಪಿಎಲ್ ನಿಯಮದ ಪ್ರಕಾರ ಕಡ್ಡಾಯ ಕ್ವಾರಂಟೈನ್ ಆದ ನಂತರವಷ್ಟೆ ಕಣಕ್ಕಿಳಿಯಬೇಕಾಗಿದೆ.

ಹರ್ಷಲ್ ಪಟೇಲ್ ಆರ್​ಸಿಬಿ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಕಳೆದ ಕೆಲವು ಸೀಸನ್​ಗಳಿಂದ ತಂಡಕ್ಕೆ ಅಪಾರ ಕೊಡುಗೆ ನೀಡುತ್ತಾ ಬರುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಇವರು ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಕೂಡ ತೊಟ್ಟಿದ್ದರು. ಇದೇ ಕಾರಣಕ್ಕೆ ಇವರನ್ನು ಐಪಿಎಲ್ 2022 ಮೆಗಾ ಹರಾಜಿನಲ್ಲಿ ಆರ್​ಸಿಬಿ ದೊಡ್ಡ ಮೊತ್ತ ನೀಡಿ ಖರೀದಿ ಮಾಡಿತ್ತು. ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲೂ ಪಟೇಲ್ ಕೇವಲ 23 ರನ್ ನೀಡಿ 2 ಪ್ರಮುಖ ವಿಕೆಟ್ ಕಿತ್ತು ಮಿಂಚಿದ್ದರು. ತಮ್ಮ ಸ್ಲೋವಲ್ ಬಾಲ್ ಮೂಲಕವೇ ಇವರು ಫೇಮಸ್ ಆಗಿದ್ದಾರೆ.

ಆರ್​ಸಿಬಿ vs ಮುಂಬೈ ಪಂದ್ಯದಲ್ಲಿ ಏನಾಯಿತು?:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್​​ಗೆ ಅರ್ಧಶತಕದ ಜೊತೆಯಾಟ ಆಡಿದರು. ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಲಾ 26 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟಾರ್ ಬ್ಯಾಟರ್​ಗಳೆಲ್ಲ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಆದರೆ, ಏಳನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ (68*) ಜತೆ ಕೈಜೋಡಿಸಿದ ಜಯದೇವ್ ಉನಾದ್ಕಟ್ ಸಮಯೋಚಿತ ಆಟವಾಡಿ ಬೆಂಬಲವನ್ನು ನೀಡಿದರು. ಪರಿಣಾಮ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿತು. ಗೆಲ್ಲಲು ಸಾಧಾರಣ ಸವಾಲು ಪಡೆದ ಆರ್‌ಸಿಬಿ ತಂಡವು ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ನಾಯಕ ಫಾ ಡುಪ್ಲೆಸಿಸ್‌ (16) ಮತ್ತು ಅನುಜ್‌ ರಾವತ್‌ ಮೊದಲ ವಿಕೆಟಿಗೆ 8.1 ಓವರ್‌ಗಳಲ್ಲಿ 50 ರನ್‌ ಪೇರಿಸಿದರು. ನಂತರ ವಿರಾಟ್ ಕೊಹ್ಲಿ (48)-ರಾವತ್ (66) ಭರ್ಜರಿ ಆಟವಾಡಿದರು. ಇದರಿಂದ ಬೆಂಗಳೂರು 18.3 ಓವರ್​ನಲ್ಲೇ 152 ರನ್ ಚಚ್ಚಿ ಜಯ ಸಾಧಿಸಿತು.

Virat Kohli: ಪಂದ್ಯದ ಮಧ್ಯೆ ಕೊಹ್ಲಿ ಬಳಿ ಓಡಿ ಬಂದ ರೋಹಿತ್ ಅಭಿಮಾನಿ: ನಂತರ ಆಗಿದ್ದೇನು ನೋಡಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು