AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ನೀಲಿ ಬಣ್ಣಕ್ಕೆ ತಿರುಗಿದ ಕೆಂಪು: ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ಮುಂಬೈ, RCB

RCB Turns Blue: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವಣ ಪಂದ್ಯವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವಾಗಿ ಮಾರ್ಪಟ್ಟಿದೆ.

IPL 2022: ನೀಲಿ ಬಣ್ಣಕ್ಕೆ ತಿರುಗಿದ ಕೆಂಪು: ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ಮುಂಬೈ, RCB
RCB-MI
TV9 Web
| Edited By: |

Updated on: May 21, 2022 | 4:42 PM

Share

IPL 2022: ಐಪಿಎಲ್​ನ 69ನೇ ಪಂದ್ಯವು 2 ತಂಡಗಳ ಪಾಲಿಗೆ ನಿರ್ಣಾಯಕ. ಆದರೆ ಇಲ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್​ಗೆ ಇದು ಔಪಚಾರಿಕ ಪಂದ್ಯ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ (MI vs DC) ಗೆದ್ದರೆ​ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಅದೇ ವೇಳೆ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ, ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡ ಪ್ಲೇಆಫ್​ ಆಡಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಆರ್​ಸಿಬಿ ಪಾಲಿಗೂ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಇತ್ತ ಆರ್​ಸಿಬಿ ಕಡೆಯಿಂದ ಮುಂಬೈಗೆ ಫುಲ್ ಸಪೋರ್ಟ್ ವ್ಯಕ್ತವಾಗುತ್ತಿದೆ. ಅದರಲ್ಲೂ ರೆಡ್ ಆರ್ಮಿ ಎಂದೇ ಗುರುತಿಸಿಕೊಂಡಿದ್ದ ಆರ್​ಸಿಬಿ ತನ್ನ ಲೋಗೋವನ್ನು ಬ್ಲೂ ಬಣ್ಣಕ್ಕೆ ಬದಲಿಸಿದೆ.

ಇಲ್ಲಿ ಮುಂಬೈ ಇಂಡಿಯನ್ಸ್ ನೀಲಿ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಬೆಂಬಲ ಸೂಚಿಸುವ ಸಲುವಾಗಿ ಲೋಗೋವನ್ನು ಬ್ಲೂ ಬಣ್ಣದ ಹಿನ್ನೆಲೆಯಲ್ಲಿ ಚಿತ್ರಿಸಿದೆ. ಈ ಮೂಲಕ ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್​ ತಂಡದ ಬೆಂಬಲಕ್ಕೆ ನಿಂತಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ಅಭಿಮಾನಿಗಳು ಕೂಡ ಇಂದು ಮುಂಬೈ ಇಂಡಿಯನ್ಸ್ ತಂಡಕ್ಕೆ ಫುಲ್ ಸಪೋರ್ಟ್ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: RCB ಗೆದ್ದರೂ ಡೆಲ್ಲಿ ಕ್ಯಾಪಿಟಲ್ಸ್​ ಚಾನ್ಸ್, ಯಾಕೆ ಗೊತ್ತಾ?
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇನ್ನು ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಸೇರಿದಂತೆ ಬಹುತೇಕ ಆರ್​ಸಿಬಿ ಆಟಗಾರರು ಮುಂಬೈ ಇಂಡಿಯನ್ಸ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ವಿರಾಟ್ ಕೊಹ್ಲಿ, ಶನಿವಾರ ಮುಂಬೈ ಇಂಡಿಯನ್ಸ್​ಗೆ ಹೆಚ್ಚುವರಿ 25 ಮಂದಿ ಬೆಂಬಲಿಗರು (ಆರ್‌ಸಿಬಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ) ಇರಲಿದ್ದಾರೆ ಎಂದಿದ್ದರು.

ಹೊಸ ಬೆಂಬಲಿಗರು ಕ್ರೀಡಾಂಗಣದಿಂದ ಹುರಿದುಂಬಿಸುವುದನ್ನು ಸಹ ಕಾಣಬಹುದು ಎನ್ನುವ ಮೂಲಕ ವಿರಾಟ್ ಕೊಹ್ಲಿ ಪರೋಕ್ಷವಾಗಿ ಮುಂಬೈ ಇಂಡಿಯನ್ಸ್​ ನಮ್ಮ ಸಪೋರ್ಟ್ ಎಂದು ತಿಳಿಸಿದ್ದಾರೆ. ಇದೀಗ ವಿಶೇಷ ಪೋಸ್ಟ್​ಕಾರ್ಡ್​ ಲೆಟರ್​ನೊಂದಿಗೆ ಇಡೀ ಆರ್​ಸಿಬಿ ತಂಡವು ನಿಮ್ಮ ಬೆಂಬಲಕ್ಕೆ ಇರಲಿದೆ. ಅದು ಕೂಡ ಒಂದೇ ಕುಟುಂಬದಂತೆ..ನೀವು ಡೆಲ್ಲಿ ವಿರುದ್ದ ನಿರ್ಭೀತಿಯಿಂದ ಗೆಲ್ಲಿ ಎಂದು ಹಾರೈಸಿದ್ದಾರೆ.

ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವಣ ಪಂದ್ಯವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವಾಗಿ ಮಾರ್ಪಟ್ಟಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಮಾತ್ರ ಆರ್​ಸಿಬಿಗೆ ಚಾನ್ಸ್​. ಹೀಗಾಗಿಯೇ ಮುಂಬೈ ಇಂಡಿಯನ್ಸ್​ಗೆ ಆರ್​ಸಿಬಿ ಬೆಂಬಲ ವ್ಯಕ್ತಪಡಿಸುತ್ತಿದೆ. ಅದರಲ್ಲೂ #RedTurnsBlue ಹ್ಯಾಶ್​ಟ್ಯಾಗ್ ಮೂಲಕ ಇದೀಗ ಆರ್​ಸಿಬಿ ಮುಂಬೈ ಇಂಡಿಯನ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ವಿಶೇಷ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ