AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅನ್​ಬಾಕ್ಸ್​ಗೆ ಡೇಟ್ ಫಿಕ್ಸ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಐದು ದಿನ ಮುಂಚಿತವಾಗಿ ಆರ್​ಸಿಬಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ. ಅದರಂತೆ ಮಾರ್ಚ್ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡದ ಬಹು ನಿರೀಕ್ಷಿತ ಕಾರ್ಯಕ್ರಮ ಅನ್​ಬಾಕ್ಸ್ ಇವೆಂಟ್ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಆಟಗಾರರೊಬ್ಬರಿಗೆ ಆಲ್​ ಆಫ್ ಫೇಮ್ ಪ್ರಶಸ್ತಿ ನೀಡಲಿದ್ದಾರೆ.

IPL 2025: RCB ಅನ್​ಬಾಕ್ಸ್​ಗೆ ಡೇಟ್ ಫಿಕ್ಸ್
Rcb
ಝಾಹಿರ್ ಯೂಸುಫ್
|

Updated on: Mar 04, 2025 | 7:24 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡದ ಅನ್​ಬಾಕ್ಸ್​ ಇವೆಂಟ್ ನಡೆಯಲಿದೆ. ಸಂಗೀತ ರಸಮಂಜರಿಯೊಂದಿಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಗುತ್ತದೆ.

ಇನ್ನು ಈ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಆಟಗಾರರು ಕಾಣಿಸಿಕೊಳ್ಳಲಿದ್ದು, ಇವರೊಂದಿಗೆ ಕೆಲ ಮಾಜಿ ಆಟಗಾರರು ಸಹ ಉಪಸ್ಥಿತರಿರಲಿದ್ದಾರೆ. ಅದರಲ್ಲೂ ಈ ಬಾರಿ ಆರ್​ಸಿಬಿ ಆಲ್​ ಫೇಮ್ ಪ್ರಶಸ್ತಿ ಯಾರಿಗೆ ನೀಡಲಿದ್ದಾರೆ ಎಂಬುದೇ ಕುತೂಹಲ.

ಏನಿದು ಆಲ್​ ಆಫ್ ಫೇಮ್ ಪ್ರಶಸ್ತಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ತಂಡದ ಪರ ಆಡಿದ ಮಾಜಿ ಆಟಗಾರರನ್ನು ಕಳೆದ ಎರಡು ವರ್ಷಗಳಿಂದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಪ್ರಶಸ್ತಿಗೆ ಆರ್​ಸಿಬಿ ಹಾಲ್ ಆಫ್​ ಫೇಮ್ ಎಂಬ ಹೆಸರಿಡಲಾಗಿದೆ.

ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. ಇದಕ್ಕಾಗಿ ಒಂದಷ್ಟು ಷರತ್ತುಗಳನ್ನು ಕೂಡ ಆರ್​ಸಿಬಿ ರೂಪಿಸಿದೆ.

ಈ ಷರತ್ತುಗಳೆಂದರೆ, ಕನಿಷ್ಠ 3 ವರ್ಷಗಳ ಕಾಲ RCB ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಯಾವುದೇ ತಂಡದ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ RCB ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್​ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಾಗುತ್ತದೆ.

ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿಯ ಆಲ್​ ಆಫ್ ಫೇಮ್ ಗೌರವಕ್ಕೆ ಪಾತ್ರರಾದವರೆಂದರೆ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಹಾಗೂ ವಿನಯ್ ಕುಮಾರ್. ಹೀಗಾಗಿ ಈ ಬಾರಿ ಈ ಪ್ರಶಸ್ತಿಯನ್ನು ಯಾರು ಪಡೆಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದಕ್ಕೆ ಉತ್ತರ ಮಾರ್ಚ್ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಗಲಿದೆ.

ಇದನ್ನೂ ಓದಿ: IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ