AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು

RCB's Virat Kohli Dependence: ಗುಜರಾತ್ ಟೈಟಾನ್ಸ್ ವಿರುದ್ಧದ ಆರ್‌ಸಿಬಿ ಸೋಲು, ವಿರಾಟ್ ಕೊಹ್ಲಿ ಮೇಲೆ ತಂಡದ ಅತಿಯಾದ ಅವಲಂಬನೆಯನ್ನು ಎತ್ತಿ ತೋರಿಸಿದೆ. ಕೊಹ್ಲಿ ಬೇಗ ಔಟಾದಾಗಲೆಲ್ಲಾ ಆರ್‌ಸಿಬಿ ಸೋಲುವ ಸಾಧ್ಯತೆ ಹೆಚ್ಚು ಎಂದು ಅಂಕಿಅಂಶಗಳು ಸ್ಪಷ್ಟಪಡಿಸುತ್ತವೆ. ಕೊಹ್ಲಿ ಕ್ರೀಸ್‌ನಲ್ಲಿ ದೀರ್ಘಕಾಲ ಉಳಿದಾಗ ತಂಡದ ಗೆಲುವಿನ ಶೇಕಡಾವಾರು 90% ಕ್ಕಿಂತ ಹೆಚ್ಚಿರುತ್ತದೆ. ಇತರ ಆಟಗಾರರು ಜವಾಬ್ದಾರಿ ತೆಗೆದುಕೊಳ್ಳುವುದು ಈಗ ಅನಿವಾರ್ಯವಾಗಿದೆ.

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು
Virat Kohli
ಪೃಥ್ವಿಶಂಕರ
|

Updated on:May 01, 2026 | 3:33 PM

Share

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು. ಇದರ ಪರಿಣಾಮವಾಗಿ ತಂಡವು 19.2 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಸುಲಭವಾಗಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ ಬೇಗನೇ ಔಟಾದಗಲೇ ಆರ್​ಸಿಬಿ ಸೋಲು ಖಚಿತವಾಗಿತ್ತು. ಏಕೆಂದರೆ ಅಂಕಿ ಅಂಶಗಳು ಕೂಡ ಇದನ್ನೇ ಹೇಳಿದ್ದವು.

ಕೊಹ್ಲಿ ಪ್ರದರ್ಶನವೇ ಮುಖ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭದಿಂದಲೂ ವಿರಾಟ್ ಕೊಹ್ಲಿಯ ಮೇಲೆ ಅವಲಂಬಿತವಾಗಿದೆ. ಆದರೆ ಕಳೆದ ಎರಡು ಆವೃತ್ತಿಗಳಿಂದ ತಂಡದ ಸೋಲು, ಗೆಲುವು ನಿಶ್ಚಯವಾಗುವುದು ಕೊಹ್ಲಿಯ ಪ್ರದರ್ಶನದ ಮೇಲೆ ಎಂಬಂತ್ತಾಗಿದೆ. ಅಂಕಿ ಅಂಶಗಳು ಕೂಡ ಇದನ್ನೇ ಹೇಳುತ್ತಿದ್ದು, ಕೊಹ್ಲಿ ಕ್ರೀಸ್‌ನಲ್ಲಿ ಉಳಿದು ದೀರ್ಘ ಇನ್ನಿಂಗ್ಸ್ ಆಡಿದಾಗ, ತಂಡವು ಹೆಚ್ಚಿನ ಪಂದ್ಯಗಳನ್ನು ಗೆದ್ದಿದೆ. ಆದರೆ ಕೊಹ್ಲಿ ಬೇಗನೆ ಔಟಾದಾಗ, ಆರ್‌ಸಿಬಿ ಹೆಚ್ಚು ಪಂದ್ಯಗಳನ್ನು ಸೋತಿದೆ.

30 ಎಸೆತ ಅಥವಾ 40 ಕ್ಕೂ ಹೆಚ್ಚು ರನ್

ಕಳೆದ ಆವೃತ್ತಿಯಿಂದ ವಿರಾಟ್ ಕೊಹ್ಲಿ 40 ರನ್‌ಗಳಿಗಿಂತ ಕಡಿಮೆ ರನ್‌ಗಳಿಗೆ ಔಟಾದಾಗಲೆಲ್ಲಾ, ಆರ್‌ಸಿಬಿಯ ಗೆಲುವಿನ ಶೇಕಡಾವಾರು ಕೇವಲ 33.33% ರಷ್ಟಿದೆ. ಆದಾಗ್ಯೂ, ಕೊಹ್ಲಿ 40 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಿದಾಗ, ತಂಡದ ಗೆಲುವಿನ ಶೇಕಡಾವಾರು 92.85% ಕ್ಕೆ ಏರುತ್ತದೆ. ಅದೇ ರೀತಿ, ಕೊಹ್ಲಿ 30 ಅಥವಾ ಅದಕ್ಕಿಂತ ಹೆಚ್ಚು ಎಸೆತಗಳನ್ನು ಎದುರಿಸಿದಾಗ, ಆರ್‌ಸಿಬಿಯ ಗೆಲುವಿನ ಶೇಕಡಾವಾರು 100% ರಷ್ಟಿದೆ. ಆದಾಗ್ಯೂ, ಕೊಹ್ಲಿ 30 ಕ್ಕಿಂತ ಕಡಿಮೆ ಎಸೆತಗಳಿಗೆ ಔಟಾದಾಗ, ತಂಡದ ಗೆಲುವಿನ ಶೇಕಡಾವಾರು ಕೇವಲ 30% ಕ್ಕೆ ಇಳಿಯುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಗುಜರಾತ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 30 ಎಸೆತಗಳನ್ನು ಅಥವಾ 40 ಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ, ಇದರ ಪರಿಣಾಮವಾಗಿ ಆರ್‌ಸಿಬಿ ಹೀನಾಯ ಸೋಲಿಗೆ ಕೊರಳೊಡ್ಡಬೇಕಾಯಿತು.

ಆರ್‌ಸಿಬಿಗೆ ಈಗ ಆತಂಕಕಾರಿ ಅಂಶವೆಂದರೆ ತಂಡದ ಯಶಸ್ಸು ವಿರಾಟ್ ಕೊಹ್ಲಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದು. ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡಿದಾಗ ಅಥವಾ ದೀರ್ಘಕಾಲದವರೆಗೆ ಕ್ರೀಸ್‌ನಲ್ಲಿದ್ದಾಗ, ಇತರ ಬ್ಯಾಟ್ಸ್‌ಮನ್‌ಗಳು ಆತ್ಮವಿಶ್ವಾಸವನ್ನು ಗಳಿಸುತ್ತಾರೆ, ಇದು ಸ್ಕೋರಿಂಗ್ ಸುಲಭಗೊಳಿಸುತ್ತದೆ. ಆದರೆ ಅವರು ಬೇಗನೆ ಔಟಾದರೆ, ಇಡೀ ಬ್ಯಾಟಿಂಗ್ ಘಟಕವು ಒತ್ತಡಕ್ಕೆ ಒಳಗಾಗುತ್ತದೆ. ಹೀಗಾಗಿ ತಂಡವು ಶೀಘ್ರದಲ್ಲೇ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗುತ್ತದೆ, ಮತ್ತು ಇತರ ಆಟಗಾರರು ಜವಾಬ್ದಾರಿಯನ್ನು ಹೊರಬೇಕಾಗುತ್ತದೆ, ಇಲ್ಲದಿದ್ದರೆ ಮುಂಬರುವ ಪಂದ್ಯಗಳಲ್ಲಿ ತಂಡವು ಮತ್ತಷ್ಟು ನಷ್ಟಗಳನ್ನು ಎದುರಿಸಬೇಕಾಗುತ್ತದೆ.

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

9 ಪಂದ್ಯಗಳಲ್ಲಿ 379 ರನ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸ್ತುತ ಒಂಬತ್ತು ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ವಿರಾಟ್ ಕೊಹ್ಲಿ ಅವರ ಫಾರ್ಮ್ ಪ್ರಮುಖ ಕಾರಣ. ಅವರು ಒಂಬತ್ತು ಪಂದ್ಯಗಳಲ್ಲಿ 54.14 ರ ಸರಾಸರಿಯಲ್ಲಿ 379 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ಈ ಆವೃತ್ತಿಯಲ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್. ಕೊಹ್ಲಿ ಹೊರತುಪಡಿಸಿ ಆರ್‌ಸಿಬಿಯ ಬೇರೆ ಯಾವುದೇ ಆಟಗಾರ 300 ರನ್‌ಗಳ ಗಡಿಯನ್ನು ತಲುಪಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Fri, 1 May 26

Follow Us
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!