Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ದೋಸೆ, ಇಡ್ಲಿ, ಸಾಂಬಾರ್, ಚಟ್ನಿ.. RCB ಆಟಗಾರನನ್ನು ಗೇಲಿ ಮಾಡಿದ CSK; ವಿಡಿಯೋ

RCB vs CSK IPL 2025: ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2025 ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಜಿತೇಶ್ ಶರ್ಮಾ ಅವರು ಔಟ್ ಆದ ನಂತರ ಚೆನ್ನೈ ಅಭಿಮಾನಿಗಳು ಅವರನ್ನು "ದೋಸೆ, ಇಡ್ಲಿ, ಸಾಂಬಾರ್, ಚಟ್ನಿ" ಹಾಡಿಂದ ಗೇಲಿ ಮಾಡಿದರು. ಇದು ಜಿತೇಶ್ ಶರ್ಮಾ ಅವರು ಚೆನ್ನೈ ಬಗ್ಗೆ ಮಾಡಿದ್ದ ಹಾಸ್ಯದ ಪ್ರತಿಕ್ರಿಯೆಯಾಗಿದೆ.

IPL 2025: ದೋಸೆ, ಇಡ್ಲಿ, ಸಾಂಬಾರ್, ಚಟ್ನಿ.. RCB ಆಟಗಾರನನ್ನು ಗೇಲಿ ಮಾಡಿದ CSK; ವಿಡಿಯೋ
Jitesh Sharma
Follow us
ಪೃಥ್ವಿಶಂಕರ
|

Updated on:Mar 28, 2025 | 10:55 PM

ಐಪಿಎಲ್‌ನಲ್ಲಿ (IPL 2025) ಆರ್​ಸಿಬಿ ಹಾಗೂ ಸಿಎಸ್​ಕೆ (RCB vs CSK) ನಡುವಿನ ಕಾಳಗವೆಂದರೆ ಅದು ಅಭಿಮಾನಿಗಳಿಗೆ ಹಬ್ಬದೂಟವಿದ್ದಂತೆ. ಉಭಯ ತಂಡಗಳಿಂದ ಸಿಡಿಯುವ ಪ್ರತಿಯೊಂದು ಸಿಕ್ಸರ್​, ಬೌಂಡರಿಗಳು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಇದೀಗ ನಡೆಯುತ್ತಿರುವ 2025 ರ ಐಪಿಎಲ್​ನ 8ನೇ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 197 ರನ್​ ಕಲೆಹಾಕಿತು. ತಂಡದ ಪರ ನಾಯಕ ರಜತ್ ಅರ್ಧಶತಕ ಸಿಡಿಸಿದರೆ, ಫಿಲ್ ಸಾಲ್ಟ್ ಹಾಗೂ ಟಿಮ್ ಡೇವಿಡ್ ಕೂಡ ಉತ್ತಮ ಕೊಡುಗೆ ನೀಡಿದರು. ಇದು ಒಂದೆಡೆಯಾದರೆ, ಮತ್ತೊಂದೆಡೆ ಆರ್​ಸಿಬಿ ಆಟಗಾರನನ್ನು ಚೆನ್ನೈ ಮೈದಾನದಲ್ಲಿ ಗೇಲಿ ಮಾಡಿದ ಪ್ರಸಂಗವೂ ನಡೆಯಿತು.

ಜಿತೇಶ್​ರನ್ನು ಗೇಲಿ ಮಾಡಿದ ಡಿಜೆ

ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 15.2 ಓವರ್‌ಗಳಲ್ಲಿ 145 ರನ್‌ಗಳಿಗೆ ತನ್ನ ಐದನೇ ವಿಕೆಟ್ ಕಳೆದುಕೊಂಡಿತು. ಹೀಗಾಗಿ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ 6 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದರು. ಆದರೆ ಅವರು ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಕೇವಲ 6 ಎಸೆತಗಳನ್ನು ಎದುರಿಸಿದ ಜಿತೇಶ್ 12 ರನ್ ಗಳಿಸಿ ಖಲೀಲ್ ಅಹ್ಮದ್‌ಗೆ ಬಲಿಯಾದರು. ಅವರು ಔಟ್ ಆದ ನಂತರ ಪೆವಿಲಿಯನ್‌ಗೆ ಹಿಂತಿರುಗುತ್ತಿದ್ದಾಗ ಕ್ರೀಡಾಂಗಣದಲ್ಲಿ ಡಿಜೆ, ದೋಸೆ, ಇಡ್ಲಿ, ಸಾಂಬಾರ್, ಚಟ್ನಿ ಹಾಡನ್ನು ನುಡಿಸುವ ಮೂಲಕ ಜಿತೇಶ್​ರನ್ನು ಗೇಲಿ ಮಾಡಲು ಪ್ರಯತ್ನಿಸಿದರು. ಹಾಡು ನುಡಿಸಲು ಪ್ರಾರಂಭಿಸುತ್ತಿದ್ದಂತೆ, ಕ್ರೀಡಾಂಗಣದಲ್ಲಿ ನೆರೆದಿದ್ದ ಸಿಎಸ್‌ಕೆ ಅಭಿಮಾನಿಗಳು ಕೂಗಲು ಪ್ರಾರಂಭಿಸಿದರು.

ಇದನ್ನೂ ಓದಿ
Image
ಸಿಎಸ್​ಕೆ ಕಳಪೆ ಫಿಲ್ಡಿಂಗ್; 4 ರನ್​ಗಳ ಅಂತರದಲ್ಲಿ 3 ಕ್ಯಾಚ್ ಡ್ರಾಪ್
Image
ಕೊಹ್ಲಿಯನ್ನು ಕೆರಳಿಸಿದ ಪತಿರಾನ ಬೌನ್ಸರ್; ಮುಂದೆ ನಡೆದಿದ್ದೇನು? ವಿಡಿಯೋ
Image
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
Image
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ

ಸಾಕಷ್ಟು ವೈರಲ್ ಆಗಿದ್ದ ಜಿತೇಶ್ ಹಾಡು

ವಾಸ್ತವವಾಗಿ ಡಿಜೆ, ದೋಸೆ, ಇಡ್ಲಿ, ಸಾಂಬಾರ್, ಚಟ್ನಿ ಹಾಡನ್ನು ನುಡಿಸಲು ಹಿಂದಿರುವ ಕಾರಣವೆಂದರೆ, ಪಂದ್ಯಕ್ಕಾಗಿ ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುವ ವೇಳೆ ಜಿತೇಶ್ ಶರ್ಮಾ ಬಳಿ, ಚೆನ್ನೈ ಎಂದರೆ ನಿಮಗೆ ಏನು ನೆನಪಿಗೆ ಬರುತ್ತದೆ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ್ದ ಜಿತೇಶ್, ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ’ ಹಾಡಿನ ಮೂಲಕ ಚೆನ್ನೈ ಅಭಿಮಾನಿಗಳನ್ನು ಗೇಲಿ ಮಾಡಿದ್ದರು. ಅದಕ್ಕಾಗಿಯೇ ಜಿತೇಶ್ ಈ ಪಂದ್ಯದಲ್ಲಿ ಔಟಾದಾಗ ಡಿಜೆ ಈ ಹಾಡನ್ನು ನುಡಿಸುವ ಮೂಲಕ ಗೇಲಿ ಮಾಡಿದರು.

ಪಂದ್ಯ ಹೀಗಿದೆ

ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಸುದ್ದಿಯನ್ನು ಬರೆಯುವ ವೇಳೆಗೆ 197 ರನ್​ಗಳ ಗುರಿ ಬೆನ್ನಟ್ಟಿರುವ ಸಿಎಸ್​ಕೆ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ತಂಡ ಈಗಾಗಲೇ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, 14 ಓವರ್​ಗಳ ಮುಕ್ತಾಯಕ್ಕೆ ಕೇವಲ 88 ರನ್ ಕಲೆಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Fri, 28 March 25

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!