AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಹೊಸ ವೇಗಿಗಳ ಎಂಟ್ರಿ

IPL 2022: RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್

IPL 2022: RCB ತಂಡಕ್ಕೆ ಹೊಸ ವೇಗಿಗಳ ಎಂಟ್ರಿ
RCB
TV9 Web
| Edited By: |

Updated on: Apr 11, 2022 | 2:30 PM

Share

IPL 2022: ಮುಂಬೈ ವಿರುದ್ದ ಗೆದ್ದ ಬೆನ್ನಲ್ಲೇ ಆರ್​ಸಿಬಿ (RCB) ತಂಡಕ್ಕೆ ಆಘಾತ ಎದುರಾಗಿತ್ತು. ತಂಡದ ಪ್ರಮುಖ ವೇಗಿ ಹರ್ಷಲ್ ಪಟೇಲ್ (Harshal Patel)  ಬಯೋಬಬಲ್​ನಿಂದ ಹೊರನಡೆದಿದ್ದರು. ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿಯ ಗೆಲುವಿನ ಬಳಿಕ ಹರ್ಷಲ್ ಪಟೇಲ್ ವೈಯಕ್ತಿಕ ಕಾರಣಗಳಿಂದಾಗಿ ಪುಣೆಯಿಂದ ನೇರವಾಗಿ ತಮ್ಮ ಮನೆಗೆ ತೆರಳಿದ್ದರು. ಆ ಬಳಿಕ ಹರ್ಷಲ್ ಪಟೇಲ್ ಅವರ ಸಹೋದರಿ ನಿಧನ ಹೊಂದಿದ ಕಾರಣ ಪಂದ್ಯ ಮುಗಿದ ಬಳಿಕ ಆರ್​ಸಿಬಿ ತಂಡವನ್ನು ತೊರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂತು. ಇದರೊಂದಿಗೆ ಏಪ್ರಿಲ್ 12 ರಂದು ಸಿಎಸ್​ಕೆ ವಿರುದ್ಧ ಆಡಲಿರುವ ಪಂದ್ಯಕ್ಕೆ ಹರ್ಷಲ್ ಪಟೇಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಖಚಿತವಾಗಿತ್ತು. ಇನ್ನು ಹರ್ಷಲ್ ಆರ್​ಸಿಬಿ ತಂಡ ಸೇರಿಕೊಂಡರೂ ಐಪಿಎಲ್ ನಿಯಮದ ಪ್ರಕಾರ ಕಡ್ಡಾಯ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಕಾಣಿಸಿಕೊಳ್ಳುವುದಿಲ್ಲ. ಇತ್ತ ಪ್ರಮುಖ ವೇಗಿ ತಂಡದಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ತಂಡಕ್ಕೆ ಇಬ್ಬರು ವೇಗಿಗಳು ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಆಸೀಸ್ ವೇಗಿಗಳು ಎಂಬುದು ವಿಶೇಷ.

ಹೌದು, ಆರ್​ಸಿಬಿ ತಂಡದ ಮೊದಲ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದ ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ಇದೀಗ ತಂಡವನ್ನು ಸೇರಿಕೊಂಡಿದ್ದಾರೆ. ಪಾಕಿಸ್ತಾನ ವಿರುದ್ದದ ಸರಣಿಯ ವೇಳೆ ಆಸ್ಟ್ರೇಲಿಯಾ ತಂಡದಲ್ಲಿದ್ದ ಈ ಇಬ್ಬರು ವೇಗಿಗಳು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಇಬ್ಬರು ಜೊತೆಯಾಗಿ ಕ್ವಾರಂಟೈನ್ ಮುಗಿಸಿ ತಂಡದ ಅಭ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಹೀಗಾಗಿ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಇವರಿಬ್ಬರಲ್ಲಿ ಒಬ್ಬರು ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಅದರಲ್ಲೂ ಟಿ20 ಕ್ರಿಕೆಟ್​ನ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾಗಿರುವ ಜೋಶ್ ಹ್ಯಾಝಲ್​ವುಡ್​​ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

ಟಿ20 ಕ್ರಿಕೆಟ್​ನಲ್ಲಿ 27 ಪಂದ್ಯವಾಡಿರುವ ಹ್ಯಾಝಲ್​ವುಡ್ ಒಟ್ಟು ಒಟ್ಟು 40 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ 12 ಐಪಿಎಲ್ ಪಂದ್ಯಗಳನ್ನು ಆಡಿರುವ ಹ್ಯಾಝಲ್​ವುಡ್ 12 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಪರ 5 ಐಪಿಎಲ್ ಪಂದ್ಯವಾಡಿರುವ ಜೇಸನ್ ಬೆಹ್ರೆಡ್ರಾರ್ಫ್ 5 ವಿಕೆಟ್ ಪಡೆದಿದ್ದಾರೆ. ಇನ್ನು 9 ಟಿ20 ಪಂದ್ಯಗಳಿಂದ 7 ವಿಕೆಟ್ ಉರುಳಿಸಿದ್ದಾರೆ. ಇಲ್ಲಿ ಜೇಸನ್ ಬೆಹ್ರೆಡ್ರಾರ್ಫ್​ಗಿಂತ ಜೋಶ್ ಹ್ಯಾಝಲ್​ವುಡ್ ಅನುಭವಿ ವೇಗಿಯಾಗಿರುವ ಕಾರಣ ಆರ್​ಸಿಬಿ ಅವರಿಗೆ ಮಣೆಹಾಕುವ ಸಾಧ್ಯತೆ ಹೆಚ್ಚಿದೆ.

ಒಟ್ಟಿನಲ್ಲಿ ಹರ್ಷಲ್ ಪಟೇಲ್ ಅವರ ಅಲಭ್ಯತೆಯ ಬೆನ್ನಲ್ಲೇ ಇದೀಗ ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಸೇರಿಕೊಂಡಿರುವುದು ತಂಡದ ಚಿಂತೆಯನ್ನು ದೂರ ಮಾಡಿದೆ. ಹೀಗಾಗಿ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಡೇವಿಡ್ ವಿಲ್ಲಿ ಬದಲಿಗೆ ಜೋಶ್ ಹ್ಯಾಝಲ್​ವುಡ್ ಆರ್​ಸಿಬಿ ಪರ ಪಾದರ್ಪಣೆ ಮಾಡುವ ಸಾಧ್ಯತೆಯಿದೆ.

RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್