AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ vs ಸಿಎಸ್​ಕೆ ಪಂದ್ಯದಲ್ಲಿ ಈ ಪ್ಲೇಯರ್​ಗಳ ಮಧ್ಯೆ ನಡೆಯಲಿದೆ ಕಾಳಗ; ಇಲ್ಲಿದೆ ವಿವರ

ಇಂದಿನ ಪಂದ್ಯ ಎರಡೂ ತಂಡಕ್ಕೆ ಪ್ರಮುಖ ಎನಿಸಿಕೊಂಡಿದೆ. ಫಾಪ್​ ಡುಪ್ಲೆಸಿಸ್ ಅವರು ಆರ್​ಸಿಬಿ ತಂಡವನ್ನು ಮುನ್ನಡೆಸಿದರೆ, ಚೆನ್ನೈಗೆ ಧೋನಿ ಸಾರಥ್ಯ ಇದೆ.  

ಆರ್​ಸಿಬಿ vs ಸಿಎಸ್​ಕೆ ಪಂದ್ಯದಲ್ಲಿ ಈ ಪ್ಲೇಯರ್​ಗಳ ಮಧ್ಯೆ ನಡೆಯಲಿದೆ ಕಾಳಗ; ಇಲ್ಲಿದೆ ವಿವರ
ಆರ್​ಸಿಬಿ VS ಸಿಎಸ್​​ಕೆ
ರಾಜೇಶ್ ದುಗ್ಗುಮನೆ
|

Updated on:Apr 17, 2023 | 1:03 PM

Share

ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಸತತ ಮೂರನೇ ಪಂದ್ಯವನ್ನು ಹೋಮ್​ ಪಿಚ್​ನಲ್ಲಿ ಆಡುತ್ತಿದೆ. ಈ ಬಾರಿ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯವನ್ನು ಆರ್​ಸಿಬಿ ಗೆದ್ದಿದೆ. ಇಂದು (ಏಪ್ರಿಲ್ 17) ಆರ್​​ಸಿಬಿ ತಂಡವು ಚೆನ್ನೈ ತಂಡವನ್ನು ಎದುರಿಸಲಿದೆ. ಎರಡೂ ತಂಡಗಳು ಈ ಸೀಸನ್​ನಲ್ಲಿ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡು ಮ್ಯಾಚ್​ನ ಗೆದ್ದಿವೆ. ಹೀಗಾಗಿ, ಇಂದಿನ ಪಂದ್ಯ ಎರಡೂ ತಂಡಕ್ಕೆ ಪ್ರಮುಖ ಎನಿಸಿಕೊಂಡಿದೆ. ಫಾಪ್​ ಡುಪ್ಲೆಸಿಸ್ ಅವರು ಆರ್​ಸಿಬಿ ತಂಡವನ್ನು ಮುನ್ನಡೆಸಿದರೆ, ಚೆನ್ನೈಗೆ ಧೋನಿ (Dhoni) ಸಾರಥ್ಯ ಇದೆ.

ರುತುರಾಜ್ ಗಾಯಕ್ವಾಡ್​ vs ಮೊಹಮದ್ ಸಿರಾಜ್

ರುತುರಾಜ್ ಗಾಯಕ್ವಾಡ್ ಅವರು ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಅವರು ಕೆಲ ಪಂದ್ಯಗಳಲ್ಲಿ ಎಡವಿದ್ದಾರೆ. ಅವರು ಇಂದಿನ ಪಂದ್ಯದಲ್ಲಿ ಪ್ರಮುಖ ಎನಿಸಿಕೊಂಡಿದ್ದಾರೆ. ಸಿಎಸ್​ಕೆ ಪರ ಅವರು ಓಪನಿಂಗ್ ಮಾಡಲಿದ್ದಾರೆ. ಅವರನ್ನು ಕಟ್ಟಿ ಹಾಕಲು ಆರ್​ಸಿಬಿ ತಂಡದ ಬೌಲರ್ ಮೊಹಮದ್ ಸಿರಾಜ್ ಇದ್ದಾರೆ. ತಮ್ಮ ಸ್ವಿಂಗ್ ಮೂಲಕ ಅವರು ರುತುರಾಜ್ ಗಾಯಕ್ವಾಡ್ ಅವರನ್ನು ಕಟ್ಟಿ ಹಾಕಲು ಪ್ರಯತ್ನಿಸಲಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆದರೆ, ಪಂದ್ಯ ಆರ್​ಸಿಬಿ ಕೈ ಸೇರಲಿದೆ.

ಮ್ಯಾಕ್ಸ್​ವೆಲ್​ vs ಜಡೇಜಾ

ಆರ್​ಸಿಬಿ ಮಧ್ಯಮ ಕ್ರಮಾಂಕಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್​ ಅವರು ಆಸರೆ ಆಗಿದ್ದಾರೆ. ವಿರಾಟ್ ಹಾಗೂ ಫಾಪ್ ಡುಪ್ಲೆಸಿಸ್ ಅವರು ಒಳ್ಳೆಯ ಓಪನಿಂಗ್ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬರುವ ಗ್ಲೆನ್ ತಂಡಕ್ಕೆ ಆಸರೆ ಆಗುತ್ತಿದ್ದಾರೆ. ಇವರು ಆಲ್​ರೌಂಡರ್ ಕೂಡ ಹೌದು. ಧೋನಿ ತಂಡದಲ್ಲಿ ರವೀಂದ್ರ ಜಡೇಜಾ ಆಲ್​ರೌಂಡರ್ ಆಗಿದ್ದಾರೆ. ಈ ಸೀಸನ್​ನಲ್ಲಿ ಮ್ಯಾಕ್ಸ್​ವೆಲ್ ಎರಡು ಬಾರಿ ಸ್ಪಿನ್​ಗೆ ಔಟ್ ಆಗಿದ್ದಾರೆ. ಹೀಗಾಗಿ, ಮ್ಯಾಕ್ಸ್​ವೆಲ್ ಬ್ಯಾಟಿಂಗ್​ಗೆ ಬಂದರೆ ರವೀಂದ್ರ ಜಡೇಜಾ ಅವರನ್ನು ಧೋನಿ ಬೌಲಿಂಗ್​ಗೆ ಇಳಿಸಬಹುದು.

ಇದನ್ನೂ ಓದಿ: MS Dhoni Six: ಎಂಎಸ್ ಧೋನಿ ಸಿಡಿಸಿದ ಆ ಒಂದು ಸಿಕ್ಸ್​ಗೆ ದಂಗಾದ ನರೇಂದ್ರ ಮೋದಿ ಸ್ಟೇಡಿಯಂ: ವೈರಲ್ ವಿಡಿಯೋ

ಧೋನಿ vs ಹರ್ಷಲ್ ಪಟೇಲ್​

ಸಿಎಸ್​ಕೆ ತಂಡಕ್ಕೆ ಮಧ್ಯಮ ಕ್ರಮಾಂಕದ ಚಿಂತೆ ಕಾಡಿದೆ. ಉತ್ತಮ ಆರಂಭ ಸಿಕ್ಕರೂ ಮಧ್ಯಮ ಕ್ರಮಾಂಕದಲ್ಲಿ ತಂಡ ತೊಂದರೆ ಎದುರಿಸುತ್ತಿದೆ. ಧೋನಿ ಅವರು ಈ ಜವಾಬ್ದಾರಿಯನ್ನು ಹೊರಬೇಕಿದೆ. ಧೋನಿಯನ್ನು ಆರ್​ಸಿಬಿ ಬೌಲರ್ ಹರ್ಷಲ್ ಕಟ್ಟಿ ಹಾಕಲು ಪ್ರಯತ್ನಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Mon, 17 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್