AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!

Royal Challengers Bengaluru vs Chennai Super Kings: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​​ಸಿಬಿ 43 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಸೋಲಿನ ಹೊರತಾಗಿಯೂ ಸಿಎಸ್​ಕೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದೆ.

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!
Ruturaj Gaikwad
ಝಾಹಿರ್ ಯೂಸುಫ್
|

Updated on: Apr 07, 2026 | 4:54 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್​ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು.

ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್​ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್  ಬೆಂಗಳೂರು ತಂಡದ ದಾಂಡಿಗರು ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದ್ದರು. ಅಲ್ಲದೆ  20 ಓವರ್​ಗಳಲ್ಲಿ ಬರೋಬ್ಬರಿ 250 ರನ್ ಬಾರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 43 ರನ್​ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್, “ಇಂದಿನ ಸೋಲಿಗೆ ಖಂಡಿತವಾಗಿಯೂ ನಾನೇ ಕಾರಣ. ನಾನು ಕ್ರೀಸ್‌ನಲ್ಲಿ ಹೆಚ್ಚು ಸಮಯ ನಿಂತು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು. ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು,” ಎಂದು ಒಪ್ಪಿಕೊಂಡಿದ್ದಾರೆ.

ಒಂದು ವೇಳೆ ನಾನು ಕ್ರೀಸ್​ನಲ್ಲಿ ಹೆಚ್ಚು ಸಮಯ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗಿರುತ್ತಿತ್ತು. ನಾನು ಬೇಗನೆ ಔಟಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸೋಲಿಗೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸಿಎಸ್​ಕೆ ಗೆಲುವಿನ ಖಾತೆ ತೆರೆಯಲಿದೆ ಎಂಬ ವಿಶ್ವಾಸವಿದೆ ರುತುರಾಜ್ ಗಾಯಕ್ವಾಡ್ ತಿಳಿಸಿದ್ದಾರೆ.

RCB vs CSK ಮುಖ್ಯಾಂಶಗಳು:

  • RCB ಅಬ್ಬರ: ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ, ಟಿಮ್ ಡೇವಿಡ್ (70*) ಮತ್ತು ರಜತ್ ಪಾಟಿದಾರ್ (48*) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್​ಗಳಲ್ಲಿ  250 ರನ್‌ಗಳ ಬೃಹತ್ ಮೊತ್ತ ಪೇರಿಸಿತು.
  • CSK ವಿಫಲ: 251 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು 19.4 ಓವರ್​ಗಳಲ್ಲಿ 207 ರನ್​​ಗಳಿಗೆ ಆಲೌಟ್ ಆಗಿದ್ದರು.
  • ಗಾಯಕ್ವಾಡ್ ವೈಫಲ್ಯ: 251 ರನ್‌ಗಳ ಗುರಿ ಬೆನ್ನಟ್ಟಿದ ಸಿಎಸ್‌ಕೆ ಪರ ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 7 ರನ್ ಗಳಿಸಿ ಔಟ್ ಆಗಿದ್ದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.

ಸತತ ಸೋಲು:

ಇದು 2026ರ ಸೀಸನ್‌ನಲ್ಲಿ ಸಿಎಸ್‌ಕೆ ತಂಡಕ್ಕೆ ಎದುರಾದ ಸತತ ಮೂರನೇ ಸೋಲಾಗಿದೆ. ರುತುರಾಜ್ ನಾಯಕತ್ವದಲ್ಲಿ ತಂಡವು ಕಳೆದ ಸೀಸನ್‌ನಿಂದ ಸೇರಿ ಒಟ್ಟು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ.

ಸೋಲಿಗೆ ಕಾರಣವಾದ ಅಂಶಗಳು:

ಸಿಎಸ್​ಕೆ ತಂಡದ ಬ್ಯಾಟಿಂಗ್ ವೈಫಲ್ಯದ ಜೊತೆಗೆ, ವಿರಾಟ್ ಕೊಹ್ಲಿ ಅವರಿಗೆ ನೀಡಿದ ಜೀವದಾನ ಮತ್ತು ನೋ-ಬಾಲ್‌ಗಳ ಮೂಲಕ ಎದುರಾಳಿ ತಂಡಕ್ಕೆ ಸಿಕ್ಕ ಅವಕಾಶಗಳು ಸೋಲಿಗೆ ಮುಖ್ಯ ಕಾರಣ ಎಂದು ರುತುರಾಜ್ ಗಾಯಕ್ವಾಡ್ ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ… ಬಿದ್ದು ಬಿದ್ದು ನಕ್ಕ RCB ಆಟಗಾರರು

ಇತ್ತ ಸರ್ಫರಾಝ್ ಖಾನ್, ಪ್ರಶಾಂತ್ ವೀರ್ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ ಪಂದ್ಯಗಳಲ್ಲಿ ಪುಟಿದೇಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ