AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ

WPL 2026, RCB vs DC Match 15: 2026ರ WPLನ 15ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಮುಖಾಮುಖಿಯಾಗಿವೆ. ಅಜೇಯ ಆರ್​ಸಿಬಿ ನೇರ ಫೈನಲ್‌ಗೆ ಅರ್ಹತೆ ಪಡೆಯಲು ನೋಡುತ್ತಿದೆ, ಡೆಲ್ಲಿ ಪ್ಲೇಆಫ್‌ ಆಸೆಗೆ ಗೆಲ್ಲಲೇಬೇಕು. ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿದ್ದು, ಇಬ್ಬನಿ ಪ್ರಭಾವದ ನಿರೀಕ್ಷೆಯಲ್ಲಿದೆ. ಎರಡೂ ತಂಡಗಳು ಪ್ರಮುಖ ಬದಲಾವಣೆಗಳೊಂದಿಗೆ ತಮ್ಮ ಆಡುವ 11ರ ಬಳಗ ಪ್ರಕಟಿಸಿವೆ.

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ
Rcb Vs Dc
ಪೃಥ್ವಿಶಂಕರ
|

Updated on:Jan 24, 2026 | 7:17 PM

Share

2026 ರ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್​ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್‌ ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಡೋದರಾದಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಹೇಳಿದರು. ಇತ್ತ ಟಾಸ್ ಸೋತ ಸ್ಮೃತಿ ಕೂಡ ಟಾಸ್ ಗೆದ್ದಿದ್ದರೆ, ಬೌಲಿಂಗ್ ಮಾಡುವುದಾಗಿ ಹೇಳಿದರು. ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯ್ಕ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಅರುಂಧತಿ ರೆಡ್ಡಿ (ಪ್ರೇಮಾ ರಾವತ್ ಬದಲಿಗೆ), ಶ್ರೇಯಾಂಕಾ ಪಾಟೀಲ್, ಸಯಾಲಿ ಸತ್ಘರೆ, ಮತ್ತು ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ನಿಕಿ ಪ್ರಸಾದ್, ಚಿನೆಲ್ಲೆ ಹೆನ್ರಿ (ಲೂಸಿ ಹ್ಯಾಮಿಲ್ಟನ್ ಬದಲಿಗೆ), ಸ್ನೇಹ ರಾಣಾ, ಮಿನ್ನು ಮಣಿ (ದೀಯಾ ಯಾದವ್ ಬದಲಿಗೆ), ಶ್ರೀ ಚರಣಿ ಮತ್ತು ನಂದಿನಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Sat, 24 January 26

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?