AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ?

RCB vs GT Qualifier 1 IPL 2026: ಐಪಿಎಲ್ 2026 ರಲ್ಲಿ ಕೊನೆಯ ಲೀಗ್ ಪಂದ್ಯ ಸೋತರೂ, ಆರ್​ಸಿಬಿ ಅಗ್ರಸ್ಥಾನಿಯಾಗಿ ಕ್ವಾಲಿಫೈಯರ್ 1 ಕ್ಕೆ ಅರ್ಹತೆ ಗಳಿಸಿದೆ. ಸತತ ಎರಡನೇ ಬಾರಿಗೆ ಈ ಸಾಧನೆ ಮಾಡಿದ್ದು, ಈಗ ಗುಜರಾತ್ ಟೈಟಾನ್ಸ್ ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ಸಂಜೆ 7 ಗಂಟೆಗೆ ನಡೆಯುವ ಈ ಪಂದ್ಯ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಫೈನಲ್ ತಲುಪಲು ಇನ್ನೊಂದು ಅವಕಾಶ ಸಿಗಲಿದೆ.

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ?
Rcb
ಪೃಥ್ವಿಶಂಕರ
|

Updated on:May 22, 2026 | 11:52 PM

Share

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್​ಸಿಬಿ ಫೈನಲ್​ಗೇರಿತ್ತು. ಈ ಬಾರಿ ಆರ್​ಸಿಬಿಗೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಎದುರಾಗಲಿದೆ.

ಅಂಕಪಟ್ಟಿಯಲ್ಲಿ ಸ್ಥಾನ

ಲೀಗ್ ಹಂತದಲ್ಲಿ ಆರ್​ಸಿಬಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. +0.783 ನೆಟ್ ರನ್​ರೇಟ್ ಹೊಂದಿರುವ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿತು.

ಮೂರನೇ ಪಂದ್ಯದಲ್ಲಿ ಯಾರಿಗೆ ಗೆಲುವು?

ಇನ್ನು ಲೀಗ್ ಹಂತದಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದರೆ, ಎರಡನೇ ಮುಖಾಮುಖಿಯಲ್ಲಿ ಗುಜರಾತ್ ಗೆಲುವು ಸಾಧಿಸಿತ್ತು. ಹೀಗಾಗಿ ಮೂರನೇ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಉಭಯ ತಂಡಗಳು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದಿರುವ ಕಾರಣ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಿದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಲಿದೆ. ಅಂದರೆ ಸೋತ ತಂಡಕ್ಕೆ ಫೈನಲ್​ಗೇರಲು ಮತ್ತೊಂದು ಅವಕಾಶ ಸಿಗಲಿದೆ.

SRH vs RCB IPL 2026 Highlights: ಸನ್​ರೈಸರ್ಸ್​ ವಿರುದ್ಧ 55 ರನ್​ಗಳಿಂದ ಸೋತ ಆರ್​ಸಿಬಿ

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಮೇ 26 ರ ಮಂಗಳವಾರದಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣ, ಧರ್ಮಶಾಲಾದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 6:30ಕ್ಕೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 pm, Fri, 22 May 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ