AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS, IPL Final Highlights: ನೆಲಮಂಗಲದಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ

ಆರ್​ಸಿಬಿ ಪಿಬಿಕೆಎಸ್​ ಐಪಿಎಲ್​ ಲೈವ್: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುವ ಐಪಿಎಲ್ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆರ್​ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಕಪ್ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ. ವಿವಿಧೆಡೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಕ್ಷಣಕ್ಷಣದ ಅಪ್​​ಡೇಟ್ ಇಲ್ಲಿದೆ.

RCB vs PBKS, IPL Final Highlights: ನೆಲಮಂಗಲದಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ
ಆರ್​ಸಿಬಿ ಪಿಬಿಕೆಎಸ್​ ಐಪಿಎಲ್​ ಲೈವ್
ಗಣಪತಿ ಶರ್ಮಾ
| Edited By: |

Updated on:Jun 03, 2025 | 5:06 PM

Share

ಐಪಿಎಲ್ ಫೈನಲ್​​ನಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್: ಲೈವ್ ಅಪ್​ಡೇಟ್

ಪ್ರಸಕ್ತ ಋತುವಿನ ಐಪಿಎಲ್ (IPL 2025) ಟೂರ್ನಿ ಕೊನೆಯ ಹಂತಕ್ಕೆ ಬಂದಿದ್ದು ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ಮಧ್ಯೆ ಫೈನಲ್ ಹಣಾಹಣಿ ನಡೆಯಲಿದೆ. ಕಪ್ ಗೆಲ್ಲುವ ನಿಚ್ಚಿನ ತಂಡವಾಗಿರುವ ಆರ್​​ಸಿಬಿಗೆ ಹಾರೈಕೆಗಳ ಮಹಾಪೂರವೇ ಹರಿದುಬರುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕದ ವಿವಿಧೆಡೆ ಆರ್​​ಸಿಬಿ ಗೆಲುವಿಗಾಗಿ ಪ್ರಾರ್ಥನೆ, ಪೂಜೆ ನೆರವೇರುತ್ತಿವೆ. ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಆರ್​ಸಿಬಿಗೆ ಶುಭ ಹಾರೈಸಿದ್ದಾರೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಆರ್​​ಸಿಬಿ‌ಅಭಿಮಾನಿಗಳಿಂದ ವಿಶೇಷ ಪೂಜೆ ನೆರವೇರಿದೆ. ಆರ್​ಸಿಬಿ ಈ ಬಾರಿ ಕಪ್ ಗೆಲ್ಲುವ ಮೂಲಕ 18 ವರ್ಷಗಳ ಕಪ್ ಬರ ನೀಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಆರ್​​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಫೈನಲ್​ ಪಂದ್ಯ ಸಂಬಂಧಿತ ಎಲ್ಲ ಅಪ್​ಡೇಟ್​​ಗಳು ಇಲ್ಲಿ ಲಭ್ಯ.

LIVE NEWS & UPDATES

The liveblog has ended.
  • 03 Jun 2025 04:43 PM (IST)

    ನೆಲಮಂಗಲದಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ

    ಕ್ರಿಕೆಟ್ ನೋಡುವ ವೇಳೆ ಬರುವ ಆರ್​ಸಿಬಿ ಅಭಿಮಾನಿಗಳಿಗೆ ನೆಲಮಂಗಲದಲ್ಲಿ ಬಿರಿಯಾನಿ ವಿತರಿಸಲು ತಯಾರಿ ನಡೆದಿದೆ. ನೆಲಮಂಗಲ ಕ್ರಿಕೆಟ್ ಅಭಿಮಾನಿಗಳು ಸುಮಾರು 500 ಜನರಿಗೆ ಬಿರಿಯಾನಿ ವಿತರಿಸಲು ತಯಾರಿ ನಡೆಸುತ್ತಿದ್ದಾರೆ. ನೆಲಮಂಗಲ ನಗರದ ರಾಯನ್ ನಗರದಲ್ಲಿ ಸಿದ್ಧತೆ ನಡೆಯುತ್ತಿದೆ.

  • 03 Jun 2025 03:42 PM (IST)

    ಈ ಸಲ ಕಪ್​…..ಹೇಳಲ್ಲ, ಮಾಡಿ ತೋರಿಸ್ತೀವಿ: ಶಿವಣ್ಣ

    ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ಮಧ್ಯೆ ಫೈನಲ್ ಹಣಾಹಣಿ ನಡೆಯಲಿದೆ. ಈ ಪಂದ್ಯಕ್ಕೆ ನಟ ಶಿವರಾಜ್ ಕುಮಾರ್​ ಅವರು ಶುಭ ಹಾರೈಸಿದ್ದಾರೆ. ಈ ಸಲ ಕಪ್​.. ಹೇಳಲ್ಲ, ಮಾಡಿ ತೋರಿಸ್ತೀವಿ ಎಂದ ನಟ ಶಿವರಾಜ್ ಕುಮಾರ್​ ಅವರು ವಿಡಿಯೋ ಮಾಡಿ ಎಕ್ಸ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

  • 03 Jun 2025 03:22 PM (IST)

    ಶುಭಕೋರಿದ ಕಲಬುರಗಿ ವಿದ್ಯಾರ್ಥಿಗಳು‌

    ಆರ್​ಸಿಬಿ ಗೆಲ್ಲಲಿ ಅಂತ ಕಲಬುರಗಿಯ ಆರ್​ಜೆ ಕಾಲೇಜಿನ ವಿದ್ಯಾರ್ಥಿಗಳು ಶುಭಕೋರಿದರು. ವಿದ್ಯಾರ್ಥಿಗಳು ಡಿಜೆ ಸೌಂಡ್​ಗೆ ಡ್ಯಾನ್ಸ್​ ಮಾಡುತ್ತಾ ಚೀಯರ್ ಅಫ್ ಮಾಡಿದರು.  ಈ ಸಲ ಕಪ್ ನಮ್ದೆ ಅಂತ ವಿದ್ಯಾರ್ಥಿನಿಯರು‌  ಡೈಲಾಗ್ ಹೊಡೆದರು. ಕೈಯಲ್ಲಿ ಆರ್​ಸಿಬಿ ಆಟಗಾರರ ಭಾವಚಿತ್ರ ಹಿಡಿದು ಚೀಯರ್ ಅಪ್ ಮಾಡಿದರು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಪಂಜಾಬ್​ ಅನ್ನು ಸೋಲಿಸುತ್ತಾರೆ ಎಂದು ವಿದ್ಯಾರ್ಥಿನಿಯರು‌ ಶುಭ ಕೋರಿದರು.

    ಇದನ್ನೂ ಓದಿ: ಪಂಜಾಬ್ ಕಿಂಗ್ಸ್​ ಕಪ್ ಗೆಲ್ಬೇಕು, ಅದಕ್ಕೆ RCB ಗೆಲ್ಲುತ್ತೆ: ವೀರೇಂದ್ರ ಸೆಹ್ವಾಗ್

  • 03 Jun 2025 02:51 PM (IST)

    IPL Final Live: ಬೆಳಗಾವಿಯಲ್ಲಿ ಆರ್​​ಸಿಬಿ ಅಭಿಮಾನಿಗಳಿಂದ ಪೂಜೆ

    ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬರಲಿ ಎಂದು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿರುವ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು. ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪೂಜೆ ನೆರವೇರಿಸಿದರು. ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ, ಅಭಿಮಾನಿಗಳು ಆರ್​ಸಿಬಿ ಪರ ಘೋಷಣೆ ಕೂಗಿದರು.

  • 03 Jun 2025 02:16 PM (IST)

    IPL Final Live: ಆರ್​ಸಿಬಿಗೆ ಮೋಹಕ ತಾರೆ ರಮ್ಯಾ ಶುಭಹಾರೈಕೆ

    ಈ ಸಲ ಕಪ್ ನಮ್ದು ಎಂದು ಸ್ಯಾಂಡಲ್​ವುಡ್ ಮೋಹಕತಾರೆ ನಟಿ ರಮ್ಯಾ ಹೇಳಿದ್ದಾರೆ. ವಿರಾಟ್ ಕೊಹ್ಲಿ ಟ್ರೋಫಿ ಎತ್ತಿದ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಶುಭ ಹಾರೈಸಿದ್ದಾರೆ.

  • 03 Jun 2025 12:33 PM (IST)

    IPL Final Live: ಆರ್​ಸಿಬಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

    ಐಪಿಎಲ್ ಫೈನಲ್​​ನಲ್ಲಿ ಪಂಜಾಬ್ ತಂಡವನ್ನು ಎದುರಿಸುತ್ತಿರುವ ಆರ್​ಸಿಬಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ ಅವರು, ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು ಎಂದು ಉಲ್ಲೇಖಿಸಿದ್ದಾರೆ.

  • 03 Jun 2025 12:24 PM (IST)

    IPL Final Live: ಅಹಮದಾಬಾದ್ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ

    ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಕೆಲ ಹೊತ್ತು ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಸಾವುನೋವುಗಳು ತಪ್ಪಿವೆ. ಆದರೆ, ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಫೈನಲ್ ಪಂದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

  • 03 Jun 2025 11:33 AM (IST)

    IPL Final Live: ಕಪ್ ತೆಗೆದುಕೊಂಡು ಬನ್ನಿ, ಡಿಕೆ ಶಿವಕುಮಾರ್ ಹಾರೈಕೆ

    ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಆರ್​​ಸಿಬಿಗೆ ಶುಭ ಹಾರೈಸಿದ್ದಾರೆ. ಅರ್​ಸಿಬಿ ಜೆರ್ಸಿ ತೊಟ್ಟು ವಿಡಿಯೋ ಸಂದೇಶ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

    ವಿಡಿಯೋ ಇಲ್ಲಿದೆ ನೋಡಿ: ಅರ್​ಸಿಬಿ ಜೆರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿ ಕಪ್ ತೆಗೆದುಕೊಂಡು ಬನ್ನಿ ಎಂದ ಡಿಕೆ ಶಿವಕುಮಾರ್

  • 03 Jun 2025 11:29 AM (IST)

    IPL Final Live: RCB ಗೆಲುವಿಗಾಗಿ ಎಲ್ಲೆಲ್ಲೂ ಹೋಮ, ಹವನ!

    RCB ಗೆಲುವಿಗಾಗಿ ಎಲ್ಲೆಲ್ಲೂ ಹೋಮ, ಹವನ ನಡೆಯುತ್ತಿದೆ. ದೇಶಾದ್ಯಂತ ಅಭಿಮಾನಿಗಳ ಪೂಜೆ, ಪುನಸ್ಕಾರದ ಮಧ್ಯೆ ಮೈಸೂರಿನಲ್ಲಿ ಆರ್​​ಸಿಬಿ ಅಭಿಮಾನಿಗಳು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.

  • 03 Jun 2025 11:26 AM (IST)

    IPL Final Live: ಟಾಸ್ ಗೆದ್ದ ತಂಡ ಆಯ್ಕೆ ಮಾಡುವುದೇನು?

    ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರು ಐಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಬಹುದು ಎನ್ನಲಾಗಿದೆ. ಹೀಗಾಗಿ ಟಾಸ್ ಗೆದ್ದ ತಂಡ ಆಯ್ಕೆ ಮಾಡುವುದೇನು ಎಂಬ ಕುತೂಹಲ ಉಂಟಾಗಿದೆ. ಈ ಮೈದಾನದಲ್ಲಿ ಈವರೆಗೆ 44 ಟಿ20 ಪಂದ್ಯಗಳನ್ನು ಆಡಲಾಗಿದೆ. 44 ಪಂದ್ಯಗಳಲ್ಲಿ 12 ತಂಡಗಳು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿವೆ.

    ವಿವರಗಳಿಗೆ ಓದಿ: ಟಾಸ್ ಗೆದ್ದ ತಂಡ ಆಯ್ಕೆ ಮಾಡುವುದೇನು?

  • 03 Jun 2025 11:24 AM (IST)

    IPL Final Live: ಮಂಡ್ಯ ನಗರದಲ್ಲಿ ಆರ್​ಸಿಬಿ ಅಭಿಮಾನಿಗಳ ಗುಂಪಿನಿಂದ ವಿಶೇಷ ಪೂಜೆ

    ಅರ್​ಸಿಬಿ ತಂಡದ ಗೆಲುವಿಗಾಗಿ ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಅಭಿಮಾನಿಯೊಬ್ಬರು ಉರುಳುಸೇವೆ ಮಾಡಿದ್ದಾರೆ.

    ವಿಡಿಯೋ ನೋಡಿ: ಐಪಿಎಲ್ ಫೈನಲ್: ಆರ್​ಸಿಬಿ ಗೆಲುವಿಗೆ ಮಂಡ್ಯದ ಅಭಿಮಾನಿಯಿಂದ ಉರುಳು ಸೇವೆ!

  • 03 Jun 2025 11:20 AM (IST)

    IPL Final Live: ಉದಗಟ್ಟಿ ಉದ್ದಮ್ಮ ದೇವಿಗೆ ವಿಶೇಷ ಪೂಜೆ

    ಆರ್​​ಸಿಬಿ ಅಭಿಮಾನಿಗಳು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಉದಗಟ್ಟಿ ಉದ್ದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆರ್​ಸಿಬಿಗೆ ಶುಭ ಹಾರೈಸಿದರು. ವಿರಾಟ್ ಕೊಹ್ಲಿ ಜರ್ಸಿ ಹಿಡಿದು ವಿಶೇಷ ಪೂಜೆ ಸಲ್ಲಿಸಿದರು.

  • 03 Jun 2025 11:17 AM (IST)

    IPL Final Live: ಕರವೇ ಕಾರ್ಯಕರ್ತರಿಂದ ವಿಶೇಷ ಪೂಜೆ

    ಕರವೇ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆರ್​ಸಿಬಿಗೆ ಶುಭ ಹಾರೈಸಿದರು. ವಿರಾಟ್ ಕೊಹ್ಲಿ ಭಾವಚಿತ್ರ ಹಿಡಿದು ಬಂದ ಪುಟ್ಟ ಮಕ್ಕಳು ಜಯಘೋಷ ಮೊಳಗಿಸಿದರು.

  • 03 Jun 2025 10:54 AM (IST)

    IPL Final Live: ಆರ್​ಸಿಬಿ ಗೆಲುವಿಗಾಗಿ ಈಡುಗಾಯಿ ಒಡೆದು ಪ್ರಾರ್ಥನೆ

    RCB ಗೆಲುವಿಗಾಗಿ ಅಭಿಮಾನಿಗಳು ಶಕ್ತಿ ದೇವತೆ ಮೊರೆ ಹೋಗಿದ್ದಾರೆ. ಮಂಡ್ಯದಲ್ಲಿ ಶಕ್ತಿ ದೇವಿ ಕಾಳಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಉರುಳು ಸೇವೆ ಮಾಡಿ ಈಡುಗಾಯಿ ಹೊಡೆದು ಪ್ರಾರ್ಥನೆ ಸಲ್ಲಿಸಿ ಶುಭ ಹಾರೈಸಲಾಗಿದೆ.

  • 03 Jun 2025 10:52 AM (IST)

    IPL Final Live: ಬೆಂಗಳೂರಿನಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

    ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲುವ ಫೇವರಿಟ್ ತಂಡವಾದ ಕಾರಣ, ಸಂಭ್ರಮಾಚರಣೆ ಹೆಸರಿನಲ್ಲಿ ಅಭಿಮಾನಿಗಳು ಅತಿರೇಕದ ವರ್ತನೆ ತೋರದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಕಮಿಷನರ್ ಬಿ ದಯಾನಂದ ಸೂಚನೆ ನೀಡಿದ್ದಾರೆ.

  • 03 Jun 2025 10:50 AM (IST)

    IPL Final Live: ಬಲ ಭಾಗದಿಂದ ಹೂ ನೀಡಿ ಅಭಯ ನೀಡಿದ ಜನಾರ್ಧನ ಸ್ವಾಮಿ

    ಗಡಿ ನಾಡು ಚಾಮರಾಜನಗರದಲ್ಲಿ ಆರ್​ಸಿಬಿ ಅಭಿಮಾನಿಗಳು ವಿಶೇಷ ಪೂಜೆ ನೆರೆವೇರಿಸಿದ್ದಾರೆ. ಇದೇ ವೇಳೆ, ಬಲ ಭಾಗದಿಂದ ಹೂವಿನ ಪ್ರಸಾದ ನೀಡಿ ಶ್ರೀ ಲಕ್ಷ್ಮೀ ಜನಾರ್ಧನ ಸ್ವಾಮಿ ದೇವರು ಅಭಯ ನೀಡಿದ್ದು, ಆರ್​​ಸಿಬಿ ಗೆದ್ದೇ ಗೆಲ್ಲುತ್ತದೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

  • 03 Jun 2025 10:48 AM (IST)

    IPL Final Live: ಬಾದಾಮಿಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಐಪಿಎಲ್ ಫೈನಲ್​​ನಲ್ಲಿ ಇಂದು ಆರ್​​ಸಿಬಿ ಹಾಗೂ ಪಂಜಾಬ್ ಮುಖಾಮುಖಿಯಾಗುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬರಲಿ ಎಂದು ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

  • 03 Jun 2025 10:47 AM (IST)

    IPL Final Live: ಬಾಗಲಕೋಟೆಯಲ್ಲಿ ಸಾಯಿ ಬಾಬಾ ಬಳಿ ಪ್ರಾರ್ಥನೆ

    ಬಾಗಲಕೋಟೆಯಲ್ಲಿ ಆರ್​ಸಿಬಿ ಅಭಿಮಾನಿಗಳ ಜೋಷ್ ಮುಗಿಲುಮುಟ್ಟಿದ್ದು, ತಂಡವನ್ನು ಫೈನಲ್​ನಲ್ಲಿ ಗೆಲ್ಲಿಸುವಂತೆ ಅಭಿಮಾನಿಗಳು ಸಾಯಿಬಾಬಾಗೆ ಪ್ರಾರ್ಥನೆ ಸಲ್ಲಿಸಿದರು.

Published On - Jun 03,2025 10:44 AM

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ