AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS: ಕೊಹ್ಲಿಯ ಕಾಲು ಹಿಡಿದ ಹುಚ್ಚು ಅಭಿಮಾನಿ ವಿರುದ್ಧ ದಾಖಲಾಯ್ತು ಕೇಸ್, ರಾಯಚೂರಿನ ಅಪ್ರಾಪ್ತ ಬಂದಿದ್ಹೇಗೆ ಗೊತ್ತೇ?

ಹುಚ್ಚು ಅಭಿಮಾನದಿಂದ ಭದ್ರತಾ ಉಲ್ಲಂಘನೆ ಮಾಡಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ಆತ ಯಾರು? ಎಲ್ಲಿಂದ ಬಂದಿದ್ದ? ಕೊಹ್ಲಿ ಕ್ರೀಸ್​ಗೆ ಹೋಗುತ್ತಿದ್ದಂತೆ ಗ್ರಿಲ್ ಹಾರಿ ಮೈದಾನಕ್ಕೆ ನುಗ್ಗಿದ್ದರ ಬಗ್ಗೆ ಆತ ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ.

RCB vs PBKS: ಕೊಹ್ಲಿಯ ಕಾಲು ಹಿಡಿದ ಹುಚ್ಚು ಅಭಿಮಾನಿ ವಿರುದ್ಧ ದಾಖಲಾಯ್ತು ಕೇಸ್, ರಾಯಚೂರಿನ ಅಪ್ರಾಪ್ತ ಬಂದಿದ್ಹೇಗೆ ಗೊತ್ತೇ?
ಕೊಹ್ಲಿ ಕಾಲು ಹಿಡಿದ ಹುಚ್ಚು ಅಭಿಮಾನಿ ವಿರುದ್ಧ ದಾಖಲಾಯ್ತು ಕೇಸ್
ರಾಚಪ್ಪಾಜಿ ನಾಯ್ಕ್
| Edited By: |

Updated on:Mar 26, 2024 | 7:41 AM

Share

ಬೆಂಗಳೂರು, ಮಾರ್ಚ್​ 26: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಸೋಮವಾರ ರಾತ್ರಿ ನಡೆದ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ (RCB vs PBKS) ನಡುವಣ ಐಪಿಎಲ್ (IPL) ಪಂದ್ಯ ಭದ್ರತಾ ಉಲ್ಲಂಘನೆಗೂ ಸಾಕ್ಷಿಯಾಗಿತ್ತು. ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದಿದ್ದ! ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಆ ವ್ಯಕ್ತಿ ಯಾರು? ಆತ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬಂದಿದ್ದು ಹೇಗೆ, ಆತನ ಉದ್ದೇಶ ಏನಿತ್ತು ಎಂಬ ಎಲ್ಲ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಅಲ್ಲದೆ, ಆತನ ವಿರುದ್ಧ ಪ್ರಕರಣವನ್ನೂ ದಾಖಲಿಸಿದ್ದಾರೆ.

ಮೈದಾನಕ್ಕೆ ನುಗ್ಗಿ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿಯ ವಿಚಾರಣೆ ನಡೆಸಲಾಗಿದ್ದು, ಆತ ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬುದು ತಿಳಿದುಬಂದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ ಅಪ್ರಾಪ್ತ, 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದ. ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದಾನೆ.

ಕೊಹ್ಲಿ ಕ್ರೀಸ್​ಗೆ ಹೋಗುತ್ತಿದ್ದಂತೆ ನಡೆದಿದ್ದೇನು?

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್​​ ತಂಡ ನೀಡಿದ್ದ 177 ರನ್​ಗಳ ಗೆಲುವಿನ ಗುರಿಯನ್ನು ಬೆನ್ನತ್ತಲು ಕೊಹ್ಲಿ ಹಾಗೂ ಡುಪ್ಲೆಸಿಸ್ ಕ್ರೀಸ್​ಗೆ ತೆರಳುತ್ತಿದ್ದರು. ಅಷ್ಟರಲ್ಲಿ ಯುವಕ ಮೈದಾನಕ್ಕೆ ಜಿಗಿದಿದ್ದ. ಆ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಆತ, ಕೊಹ್ಲಿ ಕ್ರೀಸ್​ಗೆ ಹೋಗುತ್ತಿದ್ದಂತೆ ಹಿಂಬದಿ ಸೀಟ್​​ನಲ್ಲಿದ್ದವರು ‘ಕೊಹ್ಲಿಯನ್ನು ಹಿಡಿದುಕೋ’ ಎಂದು ಕೂಗುತ್ತಿದ್ದರು. ಅದನ್ನು ಕೇಳಿದ ತಕ್ಷಣ ಗ್ರಿಲ್​ ಹಾರಿ ಮೈದಾನದ ಒಳಗೆ ನುಗ್ಗಿದ್ದೆ ಎಂದಿದ್ದಾನೆ.

ಇದೀಗ ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್​ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹೈ ಸೆಕ್ಯೂರಿಟಿ ನಡುವೆಯೂ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ ಗಳಿಸಿ ಆರ್​​ಸಿಬಿ ಗೆಲುವಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಕೊಹ್ಲಿ ಇನ್ನಿಂಗ್ಸ್​ನಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್​​ಗಳು ಒಳಗೊಂಡಿದ್ದವು. ಅದಕ್ಕೂ ಮೊದಲು ಫೀಲ್ಡಿಂಗ್​​ನಲ್ಲಿ ಸಹ ಕೊಹ್ಲಿ ಮಿಂಚಿದ್ದರು. ಪಂದ್ಯವನ್ನು ಆರ್​ಸಿಬಿ ತಂಡ 4 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿರುವ ಆರ್​ಸಿಬಿ ಒಂದರಲ್ಲಿ ಸೋಲನುಭವಿಸಿದ್ದು, ಇನ್ನೊಂದರಲ್ಲಿ ಗೆಲುವು ಸಾಧಿಸಿದಂತಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 am, Tue, 26 March 24

Follow Us
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು