AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಸಂಭ್ರಮಿಸಿದ್ದು ಹೇಗೆ ನೋಡಿ

RR vs RCB: ಟಾಸ್ ಗೆದ್ದ ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ (Virat Kohli) ಇನ್ನಿಂಗ್ಸ್ ಆರಂಭಿಸಿದರು. ಈ ಸಂದರ್ಭ ವಿಶೇಷ ಘಟನೆಯೊಂದು ನಡೆಯಿತು.

Virat Kohli: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಸಂಭ್ರಮಿಸಿದ್ದು ಹೇಗೆ ನೋಡಿ
Virat Kohli RR vs RCB
Follow us
TV9 Web
| Updated By: Vinay Bhat

Updated on: May 28, 2022 | 12:15 PM

ಐಪಿಎಲ್​ 2022 (IPL 2022) ರಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ – 2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡ ಸೋಲು ಕಾಣುವ ಮೂಲಕ ಕಪ್ ಗೆಲ್ಲುವ ಆಸೆಯೂ ನುಚ್ಚು ನೂರಾಯಿತು. ಹೊಸ ನಾಯಕ, ಹೊಸ ತಂಡದೊಂದಿಗೆ ಕಣಕ್ಕಿಳಿದ ಆರ್​ಸಿಬಿ ಕ್ವಾಲಿಫೈಯರ್ ಹಂತಕ್ಕೆ ಬಂತಲ್ಲ ಎಂಬ ಸಮಾಧಾನ ಒಂದುಕಡೆ ಇದ್ದರೆ ಮತ್ತೊಂದೆಡೆ ಇಷ್ಟು ಹತ್ತಿರ ಬಂದು ಫೈನಲ್ ತಲುಪಿಲ್ಲವಲ್ಲ ಎಂಬ ನೋವು ಕೂಡ ಅಭಿಮಾನಿಗಳಲ್ಲಿ ಮೂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ (Virat Kohli) ಇನ್ನಿಂಗ್ಸ್ ಆರಂಭಿಸಿದರು. ಈ ಸಂದರ್ಭ ವಿಶೇಷ ಘಟನೆಯೊಂದು ನಡೆಯಿತು.

ಪಂದ್ಯ ಆರಂಭವಾದ ಕೆಲಹೊತ್ತಲ್ಲಿ ಇದಕ್ಕಿದಂತೆ ಒಬ್ಬ ವ್ಯಕ್ತಿ ಮೈದಾನವನ್ನು ಪ್ರವೇಶಿಸಿದರು. ಈತ ವಿರಾಟ್ ಕೊಹ್ಲಿ ಅಭಿಮಾನಿ ಆಗಿದ್ದು ಬೌಂಡರಿ ಲೈನ್ ನಿಂದ ಓಡಿ ಪಿಚ್ ಬಳಿ ಬಂದು ಕೊಹ್ಲಿಯ ಪಾದ ಸ್ಪರ್ಷ ಮಾಡಿದ್ದಾರೆ. ಹೀಗೆ ಮಾಡಿದ ತಕ್ಷಣ ಖುಷಿ ತಾಳಲಾರದೆ ಮೈದಾನದಲ್ಲೇ ಕುಣಿದು ನಂತರ ಪ್ಲೇಕ್ಷಕ ಗ್ಯಾಲರಿ ಕಡೆ ಓಡಿದ್ದಾರೆ. ಆದರೆ, ಈ ಸಂದರ್ಭ ಅಹ್ಮದಾಬಾದ್ ಪೊಲೀಸರು ಅವರನ್ನು ಮೈದಾನದಲ್ಲೇ ತಮ್ಮ ವಶಕ್ಕೆ ಪಡೆದುಕೊಂಡರು.

ಇದನ್ನೂ ಓದಿ
Image
Faf du Plessis: ಪಂದ್ಯ ಮುಗಿದ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದ್ರು ಗೊತ್ತೇ?
Image
IPL 2022 Final: 14 ವರ್ಷಗಳ ನಂತರ ರಾಜಸ್ಥಾನ ಫೈನಲ್‌ಗೆ! ಟೇಬಲ್ ಟಾಪರ್ ಗುಜರಾತ್ ಮುಂದಿನ ಎದುರಾಳಿ
Image
RR vs RCB Qualifier 2, IPL 2022: ಐದು ಓವರ್‌, ಕೇವಲ 34 ರನ್, ಐದು ವಿಕೆಟ್! ಆರ್​ಸಿಬಿ ಸೋಲಿಗೆ ಕಾರಣವಿದು
Image
RR vs RCB Qualifier 2: ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣವಾಗಿದ್ದು ಈ ಒಬ್ಬ ಬೌಲರ್

ಕಳೆದ ಲಖನೌ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲೂ ಇದೇರೀತಿ ನಡೆದಿತ್ತು. ಬೌಂಡರಿ ಲೈನ್ ನಲ್ಲಿದ್ದ ವಿರಾಟ್ ಅವರನ್ನು ನೋಡಲು ಮೈದಾನದ ಒಳಗೆ ಪ್ರವೇಶಿಸಿದರು. ಆದರೆ ಇವರು ಮೈದಾನ ಪ್ರವೇಶಿಸಿ ವಿರಾಟ್ ಹತ್ತಿರ ಬರುತ್ತಿದಂತೆ ಅಲ್ಲೇ ಇದ್ದ ಕೋಲ್ಕತ್ತಾ ಪೊಲೀಸರು ಆತನನ್ನು ತಡೆದು ಎತ್ತುಕೊಂಡು ಹೋಗಿದ್ದರು.

Sanju Samson: ನಾವು ಆತನಿಗೋಸ್ಕರ ಕಪ್ ಗೆದ್ದೇ ಗೆಲ್ಲುತ್ತೇವೆ ಎಂದ ರಾಜಸ್ಥಾನ್ ರಾಯಲ್ಸ್

ಎಲಿಮಿನೇಟರ್ – 2 ಪಂದ್ಯದಲ್ಲಿ ಮೊದಲ ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇನ್ನಿಂಗ್ಸ್‌ ಆರಂಭಿಸಿದ ವಿರಾಟ್‌ ಕೊಹ್ಲಿ(7) ಮತ್ತೊಮ್ಮೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ನಂತರ ಜೊತೆಯಾದ ನಾಯಕ ಫಾಫ್‌ ಡುಪ್ಲೆಸ್ಸಿ(25) ಹಾಗೂ ರಜತ್‌ ಪಟಿದಾರ್‌(58) 2ನೇ ವಿಕೆಟ್‌ಗೆ 70 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌(24) ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಆದರೆ ಪಟಿದಾರ್‌ ವಿಕೆಟ್‌ ಪತನದ ಬಳಿಕ ಬಂದ ಯಾವುದೇ‌ ಬ್ಯಾಟ್ಸ್‌ಮನ್‌ಗಳು ನೆಲಕಚ್ಚಿ ಆಡಲಿಲ್ಲ. ಆರ್‌ಸಿಬಿ 8 ವಿಕೆಟಿಗೆ ಕೇವಲ 157 ರನ್‌ ಗಳಿಸಿತು.

ಇದಕ್ಕುತ್ತರವಾಗಿ ರಾಜಸ್ಥಾನ ತಂಡವು 18.1 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 161 ರನ್ ಗಳಿಸಿ ಗೆದ್ದಿತು. ಜೋಸ್ ಬಟ್ಲರ್ (ಅಜೇಯ 106; 60ಎ, 4X10, 6X6) ಈ ಬಾರಿಯ ಟೂರ್ನಿಯಲ್ಲಿ ನಾಲ್ಕನೇ ಶತಕ ಪೂರೈಸಿದರು. ಯಶಸ್ವಿ ಜೈಸ್ವಾಲ್ (21 ರನ್) ಮತ್ತು ಬಟ್ಲರ್ ಇನಿಂಗ್ಸ್‌ಗೆ ಉತ್ತಮ ಆರಂಭ ನೀಡಿದರು. ಕೇವಲ ಐದು ಓವರ್‌ಗಳಲ್ಲಿ 61 ರನ್‌ಗಳು ಸೇರಿದವು. ಸಂಜು 23 ರನ್ ಗಳಿಸಿ ಹಸರಂಗಾ ಬೌಲಿಂಗ್‌ನಲ್ಲಿ ಔಟಾದರು. ದೇವದತ್ ಪಡಿಕ್ಕಲ್ ಕೂಡ 9 ರನ್ ಗಳಿಸಿ ನಿರ್ಗಮಿಸಿದರು. ಬಟ್ಲರ್ ತಾವೆದುರಿಸಿದ 59ನೇ ಎಸೆತದಲ್ಲಿ ಶತಕ ಪೂರೈಸಿದರು. ನಂತರದ ಎಸೆತದಲ್ಲಿ ಸಿಕ್ಸರ್ ಗಳಿಸಿ, ತಂಡವನ್ನು ಗೆಲುವಿನ ಗೆರೆ ದಾಟಿಸಿ ಫೈನಲ್​ ಪ್ರವೇಶಿಸುವಂತೆ ಮಾಡಿದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ