AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತವರಿನಲ್ಲಿ 4ನೇ ಪಂದ್ಯವನ್ನಾಡಲು ಆರ್​ಸಿಬಿ ಸಜ್ಜು; ಪಂದ್ಯ ಯಾವಾಗ ಆರಂಭ?

RCB vs RR IPL 2025 Match 42: ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025ರ 42ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ತವರಿನಲ್ಲಿ ಸೋಲಿನ ಸರಮಾಲೆಯನ್ನು ಎದುರಿಸುತ್ತಿರುವ ಆರ್​ಸಿಬಿ ಪ್ಲೇ ಆಫ್ ಗೆ ಅರ್ಹತೆ ಪಡೆಯಲು ಹೋರಾಡಲಿದೆ. ರಾಜಸ್ಥಾನ್ ಕೂಡ ಪ್ಲೇ ಆಫ್ ರೇಸ್ ನಲ್ಲಿ ಜೀವಂತವಾಗಿರಲು ಹೋರಾಡಬೇಕಿದೆ. ಪಂದ್ಯದ ನೇರಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

IPL 2025: ತವರಿನಲ್ಲಿ 4ನೇ ಪಂದ್ಯವನ್ನಾಡಲು ಆರ್​ಸಿಬಿ ಸಜ್ಜು; ಪಂದ್ಯ ಯಾವಾಗ ಆರಂಭ?
Rcb Vs Rr
ಪೃಥ್ವಿಶಂಕರ
|

Updated on: Apr 23, 2025 | 9:31 PM

Share

ಐಪಿಎಲ್ 2025 (IPL 2025) ರ 42ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. ಏಕೆಂದರೆ ತವರಿನಲ್ಲಿ ಆಡಿರುವ 3 ಪಂದ್ಯಗಳನ್ನು ಸೋತಿರುವ ಆರ್​ಸಿಬಿಗೆ ನಾಳಿನ ಪಂದ್ಯ ಅತ್ಯಂತ ಮಹತ್ವದಾಗಿದೆ. ಇತ್ತ ರಾಜಸ್ಥಾನ್ ಕೂಡ ಕಳೆದ ಮುಖಾಮುಖಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಗೂ ಪ್ಲೇ ಆಫ್ ರೇಸ್​ನಲ್ಲಿ ಜೀವಂತವಾಗಿರಲು ಹೋರಾಡಲಿದೆ. ಏಕೆಂದರೆ ರಾಜಸ್ಥಾನ್ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 10 ರಲ್ಲಿ ಎಂಟನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಆರ್​ಸಿಬಿ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳನ್ನು ಸೋತು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ

ಹೆಡ್ ಟು ಹೆಡ್

ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ನಡೆದ 32 ಪಂದ್ಯಗಳಲ್ಲಿ, ಆರ್​ಸಿಬಿ 16 ರಲ್ಲಿ ಗೆದ್ದಿದ್ದರೆ, ರಾಜಸ್ಥಾನ್ 14 ರಲ್ಲಿ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಆದಾಗ್ಯೂ, ಬೆಂಗಳೂರಿನಲ್ಲಿ ನಡೆದ ಪಂದ್ಯಗಳಲ್ಲಿ ರಾಜಸ್ಥಾನ್ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಮೂರು ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಕಳೆದ ಬಾರಿ ಜೈಪುರದಲ್ಲಿ ಎರಡೂ ತಂಡಗಳು ಮುಖಾಮುಖಿಯಾದಾಗ ಆರ್​ಸಿಬಿ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿತ್ತು.

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ?

ಆರ್​ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ ಹಾಗೂ ಜಿಯೋ ಹಾಟ್​ಸ್ಟಾರ್​ನಲ್ಲಿ ವೀಕ್ಷಿಸಬಹುದಾಗಿದೆ.

IPL 2025: ಬ್ಯಾಟ್​ಗೂ ತಾಗಲಿಲ್ಲ, ಅಂಪೈರೂ ಔಟ್ ಕೊಡಲಿಲ್ಲ; ಔಟೆಂದು ತಾನೇ ಪೆವಿಲಿಯನ್ ಸೇರಿಕೊಂಡ ಕಿಶನ್

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ