AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

RCB vs RR Turning Point: ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!
Rcb
ಝಾಹಿರ್ ಯೂಸುಫ್
|

Updated on: Apr 11, 2026 | 8:02 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ.

ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್ ತಂಡವು ಅತ್ಯುತ್ತಮವಾಗಿ ಆಡಿರುವುದು ಸ್ಪಷ್ಟ. ಈ ಭರ್ಜರಿ ಆಟದೊಂದಿಗೆ ಆರ್​ಸಿಬಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳು ಈ ಕೆಳಗಿನಂತಿದೆ…

ವೈಭವ್ ಸೂರ್ಯವಂಶಿ ಬಿರುಗಾಳಿ: ರಾಜಸ್ಥಾನ್ ರಾಯಲ್ಸ್​ ತಂಡದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 78 ರನ್ (7 ಸಿಕ್ಸರ್, 8 ಬೌಂಡರಿ) ಸಿಡಿಸಿ ಆರ್‌ಸಿಬಿ ಬೌಲರ್‌ಗಳನ್ನು ಕಂಗೆಡಿಸಿದರು. ಪವರ್‌ಪ್ಲೇನಲ್ಲಿ ಅವರು ನೀಡಿದ ಈ ಸ್ಫೋಟಕ ಆರಂಭವೇ ಪಂದ್ಯದ ದಿಕ್ಕನ್ನು ಬದಲಿಸಿತು.

ಧ್ರುವ್ ಜುರೆಲ್ ಜವಾಬ್ದಾರಿಯುತ ಆಟ: ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಾಗ ಧ್ರುವ್ ಜುರೆಲ್ ಅಜೇಯ 81* ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರ ಸ್ಥಿರ ಆಟದಿಂದಾಗಿ ರಾಜಸ್ಥಾನ್ ರಾಯಲ್ಸ್​ ತಂಡ ಸುಲಭವಾಗಿ ಗುರಿ ತಲುಪಲು ಸಾಧ್ಯವಾಯಿತು.

ದುಬಾರಿಯಾದ ಬೌಲಿಂಗ್: ಆರ್‌ಸಿಬಿ ಬೌಲರ್‌ಗಳು ರನ್ ನಿಯಂತ್ರಿಸುವಲ್ಲಿ ವಿಫಲರಾದರು. ಅದರಲ್ಲೂ ಅಭಿನಂದನ್ ಸಿಂಗ್ 3 ಓವರ್‌ಗಳಲ್ಲಿ 54 ರನ್ ನೀಡಿ ಅತ್ಯಂತ ದುಬಾರಿಯಾದರು. ಪಂದ್ಯದ ನಂತರ ಮಾತನಾಡಿದ ನಾಯಕ ರಜತ್ ಪಾಟಿದಾರ್, ಬೌಲಿಂಗ್ ವೈಫಲ್ಯವೇ ಸೋಲಿಗೆ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.

ಮಧ್ಯಮ ಕ್ರಮಾಂಕದ ಕುಸಿತ: ಬ್ಯಾಟಿಂಗ್ ವೇಳೆ ಒಂದು ಹಂತದಲ್ಲಿ ಆರ್‌ಸಿಬಿ 94 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ರವಿ ಬಿಷ್ಣೋಯ್ ಮತ್ತು ಬ್ರಿಜೇಶ್ ಶರ್ಮಾ ಅವರ ಸ್ಪಿನ್ ದಾಳಿಗೆ ಬ್ಯಾಟರ್‌ಗಳು ತತ್ತರಿಸಿದರು. ಅಂತಿಮವಾಗಿ ವೆಂಕಟೇಶ್ ಅಯ್ಯರ್ ಅವರ ಅಬ್ಬರದಿಂದಾಗಿ ತಂಡ 200ರ ಗಡಿ ದಾಟಿತು.

ಪವರ್​ಪ್ಲೇನಲ್ಲಿ ಇಲ್ಲದ ಪವರ್​: ಆರ್​ಸಿಬಿ ತಂಡವು ಪವರ್​ಪ್ಲೇನಲ್ಲಿ ಪವರ್​ ತೋರಿಸುವಲ್ಲಿ ವಿಫಲವಾಗಿದ್ದರು. ಅಂದರೆ ಮೊದಲ 6 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು 61 ರನ್​ಗಳು. ಈ 61 ರನ್​ಗಳಲ್ಲಿ ಒಂದೇ ಒಂದು ಸಿಕ್ಸ್​ ಇರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಪವರ್​ಪ್ಲೇನಲ್ಲಿ ಬಿಗ್ ಹಿಟ್​ಗಳ ಮೂಲಕ ಆರ್​ಸಿಬಿ ಬೃಹತ್ ಮೊತ್ತವನ್ನು ಕಲೆಹಾಕುವಲ್ಲಿ ವಿಫಲವಾಗಿದ್ದಾರೆ ಎಂದೇ ಹೇಳಬಹುದು.

ಈ ಕಾರಣಗಳಿಂದಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ಅಚ್ಚರಿ ಎನಿಸಿದರೂ ಸತ್ಯ… ಒಂದು ಸಿಕ್ಸ್​​ಗಾಗಿ 11.3 ಓವರ್​ ಆಡಿದ RCB

ಪಂದ್ಯದ ಸಂಕ್ಷಿಪ್ತ ಸ್ಕೋರ್:

  • ರಾಯಲ್ ಚಾಲೆಂಜರ್ಸ್​ ಬೆಂಗಳೂರು: 201/8 (20 ಓವರ್) – ರಜತ್ ಪಾಟಿದಾರ್ 63, ವೆಂಕಟೇಶ್ ಅಯ್ಯರ್ 29*.
  • ರಾಜಸ್ಥಾನ್ ರಾಯಲ್ಸ್: 202/4 (18 ಓವರ್) – ಧ್ರುವ್ ಜುರೆಲ್ 81*, ವೈಭವ್ ಸೂರ್ಯವಂಶಿ 78.

Follow Us
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ