AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs SRH: ಆರ್​ಸಿಬಿಗೆ ಡಬಲ್ ಖುಷ್: ಈ ಆಟಗಾರ ಕೂಡ ಫಿಟ್, ಇಂದು ಕಣಕ್ಕೆ

Royal Challengers Bengaluru vs Sunrisers Hyderabad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುರುವಾರ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ ಐಪಿಎಲ್ ಪ್ಲೇ-ಆಫ್‌ಗಳಿಗೆ ಲಭ್ಯವಿಲ್ಲದ ಕಾರಣ ಅವರ ಬದಲಿಗೆ ನ್ಯೂಝಿಲೆಂಡ್‌ನ ಟಿಮ್ ಸೀಫರ್ಟ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇದರ ಜೊತೆಗೆ ತಂಡದ ನಾಯಕ ರಜತ್ ಪಾಟಾದರ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಕೋಚ್ ಅಧಿಕೃತವಾಗಿ ಹೇಳಿದ್ದಾರೆ

RCB vs SRH: ಆರ್​ಸಿಬಿಗೆ ಡಬಲ್ ಖುಷ್: ಈ ಆಟಗಾರ ಕೂಡ ಫಿಟ್, ಇಂದು ಕಣಕ್ಕೆ
Rcb (28)
Vinay Bhat
|

Updated on: May 23, 2025 | 7:11 AM

Share

ಬೆಂಗಳೂರು (ಮೇ. 23): ಇಂಡಿಯನ್ ಪ್ರೀಮಿಯರ್ ಲೀಗ್ 2025 (Indian Premier League) ಈಗ ಪ್ಲೇಆಫ್ ಹಂತದತ್ತ ಸಾಗುತ್ತಿದೆ. ಲೀಗ್‌ನಲ್ಲಿ ಇನ್ನೂ 7 ಪಂದ್ಯಗಳು ಉಳಿದಿವೆ ಆದರೆ ನಾಲ್ಕು ಪ್ಲೇಆಫ್ ತಂಡಗಳು ಈಗಾಗಲೇ ಪ್ಲೇ ಆಫ್​ಗೆ ಲಗ್ಗೆಯಿಟ್ಟಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಈ ವರ್ಷದ ಟಾಪ್ 4 ತಂಡಗಳಾಗಿ ಸ್ಥಾನ ಪಡೆದಿವೆ. ಆದರೆ ಪ್ಲೇಆಫ್‌ಗೆ ಹತ್ತಿರ ಇರುವಾಗ, ಆರ್‌ಸಿಬಿ ತಂಡಕ್ಕೆ ಡಬಲ್ ಗುಡ್ ನ್ಯೂಸ್ ಸಿಕ್ಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುರುವಾರ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ ಐಪಿಎಲ್ ಪ್ಲೇ-ಆಫ್‌ಗಳಿಗೆ ಲಭ್ಯವಿಲ್ಲದ ಕಾರಣ ಅವರ ಬದಲಿಗೆ ನ್ಯೂಝಿಲೆಂಡ್‌ನ ಟಿಮ್ ಸೀಫರ್ಟ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇದರ ಜೊತೆಗೆ ತಂಡದ ನಾಯಕ ರಜತ್ ಪಾಟಾದರ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಕೋಚ್ ಅಧಿಕೃತವಾಗಿ ಹೇಳಿದ್ದಾರೆ ಮತ್ತು ಇಂದಿನ ಸನ್​ರೈಸರ್ಸ್ ಹೈದರಬಾದ್ ವಿರುದ್ಧದ ಪಂದ್ಯದಲ್ಲಿ ರಜತ್ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ.

ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್‌ಸಿಬಿ ತಂಡ ಈವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಬೆರಳಿಗೆ ಗಾಯವಾಗಿತ್ತು. ಇದಾದ ನಂತರ ಅವರು ಕಣಕ್ಕಿಳಿಯುವ ಬಗ್ಗೆ ಅನುಮಾನವಿತ್ತು. ಆದರೆ ಈಗ ತಂಡದ ಕೋಚ್ ಆಂಡಿ ಫ್ಲವರ್ ಅವರು ರಜತ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಆಂಗ್ಲರ ಹುಟ್ಟಡಗಿಸಲು ಸಜ್ಜಾದ ಭಾರತದ 5 ವಿಭಿನ್ನ ತಂಡಗಳು
Image
ಒಟ್ಟಿಗಿರಲು ಸಾಧ್ಯವೇ ಇಲ್ಲ; ಬಿಸಿಸಿಐ ಮಹತ್ವದ ನಿರ್ಧಾರ
Image
ಲ್ಯಾವೆಂಡರ್ ಬಣ್ಣದ ಜೆರ್ಸಿ ಧರಿಸಿ ಕಣಕ್ಕಿಳಿದ ಗುಜರಾತ್
Image
ಭಾರತ ಅಂಡರ್-19 ತಂಡದಲ್ಲಿ ವೈಭವ್​ಗೆ ಅವಕಾಶ

‘‘ಐಪಿಎಲ್ ವಿರಾಮದ ಬಗ್ಗೆ ನಮಗೆ ಚಿಂತೆ ಇಲ್ಲ. ತಂಡವು ಋತುವಿನ ಉದ್ದಕ್ಕೂ ಕಠಿಣ ಪರಿಶ್ರಮ ವಹಿಸಿದೆ ಮತ್ತು ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದೆ. ಈ ವಿರಾಮವು ಕೆಲವು ಆಟಗಾರರಿಗೆ ಫಿಟ್ ಆಗಲು ಅವಕಾಶವನ್ನು ನೀಡಿತು. ಮೇ 17 ರಂದು ನಡೆಯಬೇಕಿದ್ದ ಆರ್‌ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು, ಇದರಿಂದಾಗಿ ವಿರಾಮ ಮತ್ತಷ್ಟು ದೀರ್ಘವಾಯಿತು. ಈಗ ರಜತ್ ಪಾಟಿದಾರ್ ಬ್ಯಾಟಿಂಗ್ ಮಾಡಲು ಫಿಟ್ ಆಗಿದ್ದಾರೆ, ಅದು ಒಳ್ಳೆಯದೇ. ಆರಂಭಿಕ ಆಟಗಾರ ಫಿಲ್ ಸಾಲ್ಟ್ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದರು ಆದರೆ ವಿರಾಮದ ಸಮಯದಲ್ಲಿ ಅವರಿಗೆ ಫಿಟ್ ಆಗಲು ಅವಕಾಶ ಸಿಕ್ಕಿತು. ಈಗ ಅವರು ಸಂಪೂರ್ಣವಾಗಿ ಫ್ರೆಶ್ ಆಗಿದ್ದು ಆಡಲು ಸಿದ್ಧರಾಗಿದ್ದಾರೆ’’ ಎಂದು ಹೇಳಿದ್ದಾರೆ.

IND vs ENG: ಒಂದಲ್ಲ, ಎರಡಲ್ಲ… ಭಾರತದ 5 ವಿಭಿನ್ನ ತಂಡಗಳ ಇಂಗ್ಲೆಂಡ್‌ ಪ್ರವಾಸ

ಆರ್‌ಸಿಬಿಗೆ ತವರಿನಲ್ಲಿ ಯಾವುದೇ ಪಂದ್ಯವಿಲ್ಲ:

ಆರ್‌ಸಿಬಿ ಈಗ ಉಳಿದ ಎಲ್ಲಾ ಪಂದ್ಯಗಳನ್ನು ತನ್ನ ತವರು ಮೈದಾನದ ಹೊರಗೆ ಆಡಬೇಕಾಗಿದೆ ಮತ್ತು ತಂಡವು ಈ ಸವಾಲಿಗೆ ಸಿದ್ಧವಾಗಿದೆ ಎಂದು ಕೋಚ್ ಹೇಳಿದರು. ಬೆಂಗಳೂರಿನಲ್ಲಿ ಮಳೆಯಿಂದಾಗಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯ ಲಕ್ನೋದಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಪಂದ್ಯವನ್ನು ಆಡದಿರುವುದು ನಮಗೆ ನಿರಾಶೆ ತಂದಿದೆ ಎಂದು ಅವರು ಹೇಳಿದರು. ಇತರ ಮೈದಾನಗಳಲ್ಲಿ ನಮ್ಮ ದಾಖಲೆ ಅತ್ಯುತ್ತಮವಾಗಿದೆ ಮತ್ತು ಹೈದರಾಬಾದ್ ವಿರುದ್ಧ ತಂಡವು ಉತ್ತಮವಾಗಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದರು.

ಆರ್‌ಸಿಬಿ 8 ಪಂದ್ಯಗಳನ್ನು ಗೆದ್ದಿದೆ:

ಆರ್‌ಸಿಬಿ ತಂಡವು ಪ್ರಸಕ್ತ ಋತುವಿನಲ್ಲಿ ಒಟ್ಟು 12 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 8 ಪಂದ್ಯಗಳಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಇವರು 17 ಅಂಕಗಳನ್ನು ಹೊಂದಿದ್ದು, ನಿವ್ವಳ ರನ್ ರೇಟ್ ಪ್ಲಸ್ 0.482 ಆಗಿದೆ. ಆರ್​ಸಿಬಿ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!