AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಯನ್ನು ಗೇಲಿ ಮಾಡಿದ ಅಂಬಟಿ ರಾಯುಡುನನ್ನು ಹಿಗ್ಗಾಮುಗ್ಗಾ ಜಾಡಿಸಿದ ಆರ್​ಸಿಬಿ ಫ್ಯಾನ್ಸ್

RCB's 50-Run Thrashing of CSK in Chepauk: ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 50 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಆದರೆ, ಈ ಗೆಲುವಿನ ಬಳಿಕ ಮಾಜಿ ಸಿಎಸ್‌ಕೆ ಆಟಗಾರ ಅಂಬಟಿ ರಾಯುಡು ಅವರನ್ನು ಆರ್‌ಸಿಬಿ ಅಭಿಮಾನಿಗಳು ತೀವ್ರವಾಗಿ ಟೀಕಿಸುತ್ತಿದ್ದಾರೆ.

IPL 2025: ಆರ್​ಸಿಬಿಯನ್ನು ಗೇಲಿ ಮಾಡಿದ ಅಂಬಟಿ ರಾಯುಡುನನ್ನು ಹಿಗ್ಗಾಮುಗ್ಗಾ ಜಾಡಿಸಿದ ಆರ್​ಸಿಬಿ ಫ್ಯಾನ್ಸ್
Ambati Rayudu
ಪೃಥ್ವಿಶಂಕರ
|

Updated on:Mar 29, 2025 | 12:09 AM

Share

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ 50 ರನ್​ಗಳ ಬೃಹತ್ ಜಯ ಸಾಧಿಸಿದೆ. ಆರ್​ಸಿಬಿ ನೀಡಿದ 196 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​​ಕೆ 146 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ 18 ಆವೃತ್ತಿಗಳ ಐಪಿಎಲ್ (IPL 2025) ಇತಿಹಾಸದಲ್ಲಿ ಎರಡನೇ ಬಾರಿಗೆ ಚೆಪಾಕ್ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ಜಯಗಳಿಸಿದ ಸಾಧನೆ ಮಾಡಿದೆ. ಅಲ್ಲದೆ, ಬೆಂಗಳೂರು ಈ ಸೀಸನ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇತ್ತ ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಅತ್ತ ಸೋಶಿಯಲ್ ಮೀಡಿಯಾದಲ್ಲಿ ಮಾಜಿ ಸಿಎಸ್​ಕೆ ಆಟಗಾರ ಅಂಬಟಿ ರಾಯುಡುರನ್ನು (Ambati Rayudu) ಆರ್​ಸಿಬಿ ಅಭಿಮಾನಿಗಳು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ರೋಲಿಗರಿಗೆ ಆಹಾರವಾದ ರಾಯುಡು

ವಾಸ್ತವವಾಗಿ ಆರ್​​ಸಿಬಿ ತಂಡವನ್ನು ಬಹಿರಂಗವಾಗಿಯೇ ಟೀಕಿಸುವ ಆಟಗಾರರ ಪಟ್ಟಿಯಲ್ಲಿ ಸದಾ ಅಗ್ರಸ್ಥಾನದಲ್ಲಿರುವ ಅಂಬಟಿ ರಾಯುಡು, ಆರ್​ಸಿಬಿ ಟ್ರೋಫಿ ಗೆಲ್ಲದಿರುವುದನ್ನು ಯಾವಾಗಲೂ ಗೇಲಿ ಮಾಡುತ್ತಿರುತ್ತಾರೆ. ಆರ್​ಸಿಬಿ ಫ್ರಾಂಚೈಸಿಯ ಜೊತೆಗೆ ಅಭಿಮಾನಿಗಳನ್ನು ತನ್ನ ಹೇಳಿಕೆಗಳಿಂದ ಕೆರಳಿಸುವ ರಾಯುಡು, ವಿಶ್ವ ಕ್ರಿಕೆಟ್​ನ ದಿಗ್ಗಜ ಬ್ಯಾಟರ್​ ಕೊಹ್ಲಿಯನ್ನು ಟಿ20 ಕ್ರಿಕೆಟ್​ಗೆ ಅಸಮರ್ಥ ಆಟಗಾರ ಎಂಬಂತೆಯೂ ಮಾತನಾಡುತ್ತಾರೆ. ಇದೀಗ ಚೆನ್ನೈ ತಂಡವನ್ನು ಅವರ ನೆಲದಲ್ಲೇ ಆರ್​ಸಿಬಿ ಮಣಿಸಿರುವ ಖುಷಿಯಲ್ಲಿರುವ ಆರ್​ಸಿಬಿ ಫ್ಯಾನ್ಸ್, ಅಂಬಟಿ ರಾಯುಡು ಇನ್ನೊಂದು ವಾರ ಸೋಶಿಯಲ್ ಮೀಡಿಯಾವನ್ನು ನೋಡದಂತೆ ಟ್ರೋಲ್ ಮಾಡುತ್ತಿದ್ದಾರೆ.

ಆರ್​ಸಿಬಿಯನ್ನು ಗೇಲಿ ಮಾಡಿದ್ದ ರಾಯುಡು

ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಈ ಪಂದ್ಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಕ್ರಿಕೆಟಿಗರಾದ ಅಂಬಟಿ ರಾಯುಡು ಮತ್ತು ಎಸ್ ಬದ್ರಿನಾಥ್, ಟ್ರೋಫಿ ಗೆಲ್ಲುವ ಆರ್‌ಸಿಬಿಯ ಕನಸನ್ನು ಅಣಕಿಸಿದ್ದರು. ಈ ಇಬ್ಬರ ಗೇಲಿ ಮಾತಿನ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈಗ ವೈರಲ್ ಆಗಿರುವ ವಿಡಿಯೋದಲ್ಲಿ ‘ಈ ವರ್ಷ ಆರ್‌ಸಿಬಿ ತನ್ನ ಟ್ರೋಫಿಯ ಬರಗಾಲವನ್ನು ನೀಗಿಸಲು ಸಾಧ್ಯವಾಗುತ್ತದೆಯೇ ಎಂದು ಬದರಿನಾಥ್ ತಮಾಷೆಯಾಗಿ ರಾಯುಡು ಬಳಿ ಪ್ರಶ್ನೆ ಕೇಳಿದ್ದಾರೆ. ಇದನ್ನು ಕೇಳಿದ ಕೂಡಲೇ ಇಬ್ಬರೂ ಆಟಗಾರರು ನಗಲು ಆರಂಭಿಸಿದ್ದಾರೆ. ಆ ಬಳಿಕ ಈ ಪ್ರಶ್ನೆಗೆ ಉತ್ತರಿಸಿರುವ ರಾಯುಡು, ‘ಆರ್‌ಸಿಬಿ ಟ್ರೋಫಿ ಗೆಲ್ಲುವುದಕ್ಕೆ ಮಾಡುವ ಹೋರಾಟವನ್ನು ನೋಡಿ ನಾನು ಯಾವಾಗಲೂ ಆನಂದಿಸುತ್ತೇನೆ ಎಂದಿದ್ದಾರೆ.

ಮುಂದುವರೆದು ಮಾತನಾಡಿರುವ ರಾಯುಡು, ‘ಒಂದು ದಿನ ಆರ್‌ಸಿಬಿ ಟ್ರೋಫಿ ಗೆಲ್ಲಬೇಕೆಂದು ನಾನು ಬಯಸುತ್ತೇನೆ, ಆದರೆ ಈ ವರ್ಷ ಅಲ್ಲ!’. ವಾಸ್ತವವಾಗಿ, ಐಪಿಎಲ್‌ಗೆ ನಿರಂತರವಾಗಿ ನಿರೀಕ್ಷೆಗಳನ್ನು ಹೆಚ್ಚಿಸುವ ಆದರೆ ಅವುಗಳನ್ನು ಪೂರೈಸಲು ಸಾಧ್ಯವಾಗದ ತಂಡ ಬೇಕು. ಇದು ಪಂದ್ಯಾವಳಿಯನ್ನು ಇನ್ನಷ್ಟು ಮೋಜಿನಿಂದ ಕೂಡಿಸುತ್ತದೆ!’ ಎಂದಿದ್ದಾರೆ. ರಾಯುಡು ಅವರ ಈ ಕಾಮೆಂಟ್ ಮತ್ತೆ ಆರ್‌ಸಿಬಿ ಅಭಿಮಾನಿಗಳು ಕೆರಳುವಂತೆ ಮಾಡಿತ್ತು. ಇದೀಗ ಸಿಎಸ್​ಕೆ ವಿರುದ್ಧ ಆರ್​ಸಿಬಿ ಭರ್ಜರಿ ಗೆಲುವು ಸಾಧಿಸಿದ್ದು, ಆರ್​ಸಿಬಿ ಅಭಿಮಾನಿಗಳು ರಾಯುಡು ಮೇಲೆ ಮುಗಿಬಿದ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 pm, Fri, 28 March 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ