AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಯನ್ನು ಗೇಲಿ ಮಾಡಿದ ಅಂಬಟಿ ರಾಯುಡುನನ್ನು ಹಿಗ್ಗಾಮುಗ್ಗಾ ಜಾಡಿಸಿದ ಆರ್​ಸಿಬಿ ಫ್ಯಾನ್ಸ್

RCB's 50-Run Thrashing of CSK in Chepauk: ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 50 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಆದರೆ, ಈ ಗೆಲುವಿನ ಬಳಿಕ ಮಾಜಿ ಸಿಎಸ್‌ಕೆ ಆಟಗಾರ ಅಂಬಟಿ ರಾಯುಡು ಅವರನ್ನು ಆರ್‌ಸಿಬಿ ಅಭಿಮಾನಿಗಳು ತೀವ್ರವಾಗಿ ಟೀಕಿಸುತ್ತಿದ್ದಾರೆ.

IPL 2025: ಆರ್​ಸಿಬಿಯನ್ನು ಗೇಲಿ ಮಾಡಿದ ಅಂಬಟಿ ರಾಯುಡುನನ್ನು ಹಿಗ್ಗಾಮುಗ್ಗಾ ಜಾಡಿಸಿದ ಆರ್​ಸಿಬಿ ಫ್ಯಾನ್ಸ್
Ambati Rayudu
Follow us
ಪೃಥ್ವಿಶಂಕರ
|

Updated on:Mar 29, 2025 | 12:09 AM

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ 50 ರನ್​ಗಳ ಬೃಹತ್ ಜಯ ಸಾಧಿಸಿದೆ. ಆರ್​ಸಿಬಿ ನೀಡಿದ 196 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​​ಕೆ 146 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ 18 ಆವೃತ್ತಿಗಳ ಐಪಿಎಲ್ (IPL 2025) ಇತಿಹಾಸದಲ್ಲಿ ಎರಡನೇ ಬಾರಿಗೆ ಚೆಪಾಕ್ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ಜಯಗಳಿಸಿದ ಸಾಧನೆ ಮಾಡಿದೆ. ಅಲ್ಲದೆ, ಬೆಂಗಳೂರು ಈ ಸೀಸನ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇತ್ತ ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಅತ್ತ ಸೋಶಿಯಲ್ ಮೀಡಿಯಾದಲ್ಲಿ ಮಾಜಿ ಸಿಎಸ್​ಕೆ ಆಟಗಾರ ಅಂಬಟಿ ರಾಯುಡುರನ್ನು (Ambati Rayudu) ಆರ್​ಸಿಬಿ ಅಭಿಮಾನಿಗಳು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ರೋಲಿಗರಿಗೆ ಆಹಾರವಾದ ರಾಯುಡು

ವಾಸ್ತವವಾಗಿ ಆರ್​​ಸಿಬಿ ತಂಡವನ್ನು ಬಹಿರಂಗವಾಗಿಯೇ ಟೀಕಿಸುವ ಆಟಗಾರರ ಪಟ್ಟಿಯಲ್ಲಿ ಸದಾ ಅಗ್ರಸ್ಥಾನದಲ್ಲಿರುವ ಅಂಬಟಿ ರಾಯುಡು, ಆರ್​ಸಿಬಿ ಟ್ರೋಫಿ ಗೆಲ್ಲದಿರುವುದನ್ನು ಯಾವಾಗಲೂ ಗೇಲಿ ಮಾಡುತ್ತಿರುತ್ತಾರೆ. ಆರ್​ಸಿಬಿ ಫ್ರಾಂಚೈಸಿಯ ಜೊತೆಗೆ ಅಭಿಮಾನಿಗಳನ್ನು ತನ್ನ ಹೇಳಿಕೆಗಳಿಂದ ಕೆರಳಿಸುವ ರಾಯುಡು, ವಿಶ್ವ ಕ್ರಿಕೆಟ್​ನ ದಿಗ್ಗಜ ಬ್ಯಾಟರ್​ ಕೊಹ್ಲಿಯನ್ನು ಟಿ20 ಕ್ರಿಕೆಟ್​ಗೆ ಅಸಮರ್ಥ ಆಟಗಾರ ಎಂಬಂತೆಯೂ ಮಾತನಾಡುತ್ತಾರೆ. ಇದೀಗ ಚೆನ್ನೈ ತಂಡವನ್ನು ಅವರ ನೆಲದಲ್ಲೇ ಆರ್​ಸಿಬಿ ಮಣಿಸಿರುವ ಖುಷಿಯಲ್ಲಿರುವ ಆರ್​ಸಿಬಿ ಫ್ಯಾನ್ಸ್, ಅಂಬಟಿ ರಾಯುಡು ಇನ್ನೊಂದು ವಾರ ಸೋಶಿಯಲ್ ಮೀಡಿಯಾವನ್ನು ನೋಡದಂತೆ ಟ್ರೋಲ್ ಮಾಡುತ್ತಿದ್ದಾರೆ.

ಆರ್​ಸಿಬಿಯನ್ನು ಗೇಲಿ ಮಾಡಿದ್ದ ರಾಯುಡು

ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಈ ಪಂದ್ಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಕ್ರಿಕೆಟಿಗರಾದ ಅಂಬಟಿ ರಾಯುಡು ಮತ್ತು ಎಸ್ ಬದ್ರಿನಾಥ್, ಟ್ರೋಫಿ ಗೆಲ್ಲುವ ಆರ್‌ಸಿಬಿಯ ಕನಸನ್ನು ಅಣಕಿಸಿದ್ದರು. ಈ ಇಬ್ಬರ ಗೇಲಿ ಮಾತಿನ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈಗ ವೈರಲ್ ಆಗಿರುವ ವಿಡಿಯೋದಲ್ಲಿ ‘ಈ ವರ್ಷ ಆರ್‌ಸಿಬಿ ತನ್ನ ಟ್ರೋಫಿಯ ಬರಗಾಲವನ್ನು ನೀಗಿಸಲು ಸಾಧ್ಯವಾಗುತ್ತದೆಯೇ ಎಂದು ಬದರಿನಾಥ್ ತಮಾಷೆಯಾಗಿ ರಾಯುಡು ಬಳಿ ಪ್ರಶ್ನೆ ಕೇಳಿದ್ದಾರೆ. ಇದನ್ನು ಕೇಳಿದ ಕೂಡಲೇ ಇಬ್ಬರೂ ಆಟಗಾರರು ನಗಲು ಆರಂಭಿಸಿದ್ದಾರೆ. ಆ ಬಳಿಕ ಈ ಪ್ರಶ್ನೆಗೆ ಉತ್ತರಿಸಿರುವ ರಾಯುಡು, ‘ಆರ್‌ಸಿಬಿ ಟ್ರೋಫಿ ಗೆಲ್ಲುವುದಕ್ಕೆ ಮಾಡುವ ಹೋರಾಟವನ್ನು ನೋಡಿ ನಾನು ಯಾವಾಗಲೂ ಆನಂದಿಸುತ್ತೇನೆ ಎಂದಿದ್ದಾರೆ.

ಮುಂದುವರೆದು ಮಾತನಾಡಿರುವ ರಾಯುಡು, ‘ಒಂದು ದಿನ ಆರ್‌ಸಿಬಿ ಟ್ರೋಫಿ ಗೆಲ್ಲಬೇಕೆಂದು ನಾನು ಬಯಸುತ್ತೇನೆ, ಆದರೆ ಈ ವರ್ಷ ಅಲ್ಲ!’. ವಾಸ್ತವವಾಗಿ, ಐಪಿಎಲ್‌ಗೆ ನಿರಂತರವಾಗಿ ನಿರೀಕ್ಷೆಗಳನ್ನು ಹೆಚ್ಚಿಸುವ ಆದರೆ ಅವುಗಳನ್ನು ಪೂರೈಸಲು ಸಾಧ್ಯವಾಗದ ತಂಡ ಬೇಕು. ಇದು ಪಂದ್ಯಾವಳಿಯನ್ನು ಇನ್ನಷ್ಟು ಮೋಜಿನಿಂದ ಕೂಡಿಸುತ್ತದೆ!’ ಎಂದಿದ್ದಾರೆ. ರಾಯುಡು ಅವರ ಈ ಕಾಮೆಂಟ್ ಮತ್ತೆ ಆರ್‌ಸಿಬಿ ಅಭಿಮಾನಿಗಳು ಕೆರಳುವಂತೆ ಮಾಡಿತ್ತು. ಇದೀಗ ಸಿಎಸ್​ಕೆ ವಿರುದ್ಧ ಆರ್​ಸಿಬಿ ಭರ್ಜರಿ ಗೆಲುವು ಸಾಧಿಸಿದ್ದು, ಆರ್​ಸಿಬಿ ಅಭಿಮಾನಿಗಳು ರಾಯುಡು ಮೇಲೆ ಮುಗಿಬಿದ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 pm, Fri, 28 March 25

ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!