RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ

IPL 2024 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಟ್ಟು 15 ಪಂದ್ಯಗಳನ್ನಾಡಿತ್ತು. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಮ್ಯಾಚ್​ಗಳನ್ನು ಮಾತ್ರ. ಇದಾಗ್ಯೂ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸುವ ಮೂಲಕ ಆರ್​ಸಿಬಿ ಐಪಿಎಲ್​ನಿಂದ ಹೊರಬಿದ್ದಿತ್ತು.

RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ
RCB
Follow us
| Updated By: ಝಾಹಿರ್ ಯೂಸುಫ್

Updated on:Jun 01, 2024 | 9:59 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1 ಜೂನ್ 1993 ರಲ್ಲಿ ರಜತ್ ಪಾಟಿದಾರ್ ಮಧ್ಯಪ್ರದೇಶದಲ್ಲಿ ಜನಿಸಿದ್ದರು. ಇನ್ನು 1985 ರಲ್ಲಿ ಡಿಕೆ ಇದೇ ದಿನಾಂಕದಂದು ಚೆನ್ನೈನಲ್ಲಿ ಹುಟ್ಟಿದ್ದರು. ಇದೀಗ ಇಬ್ಬರು ಆಟಗಾರರು ಒಂದೇ ದಿನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ಅಭಿಮಾನಿಗಳು ಜನ್ಮದಿನ ಶುಭ ಕೋರುತ್ತಿದ್ದಾರೆ.

ಮಿಂಚಿದ ಡಿಕೆ-ರಪಾ:

ಈ ಬಾರಿಯ ಐಪಿಎಲ್​ನಲ್ಲಿ ರಜತ್ ಪಾಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 15 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ್ 5 ಅರ್ಧಶತಕಗಳೊಂದಿಗೆ 395 ರನ್ ಬಾರಿಸಿ ಮಿಂಚಿದ್ದರು.

ಮತ್ತೊಂದೆಡೆ ಆರ್​ಸಿಬಿ ಪರ ಫಿನಿಶರ್ ಆಗಿ ಅಬ್ಬರಿಸಿದ್ದ ದಿನೇಶ್ ಕಾರ್ತಿಕ್ 15 ಇನಿಂಗ್ಸ್​ಗಳಲ್ಲಿ 2 ಅರ್ಧಶತಕಗಳೊಂದಿಗೆ ಒಟ್ಟು 326 ರನ್ ಚಚ್ಚಿದ್ದರು. ಈ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ದಿನೇಶ್ ಕಾರ್ತಿಕ್ ವಿದಾಯ:

ಈ ಬಾರಿಯ ಐಪಿಎಲ್​ನೊಂದಿಗೆ ದಿನೇಶ್ ಕಾರ್ತಿಕ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದ ಬಳಿಕ ಡಿಕೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದು, ಹೀಗಾಗಿ ಮುಂದಿನ ಸೀಸನ್​ನಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ: IPL 2025: RCB ರಿಟೈನ್ ಮಾಡಿಕೊಳ್ಳಲಿರುವ 4 ಆಟಗಾರರು..!

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

Published On - 9:58 am, Sat, 1 June 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ