AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಿಜವಾದ ಹೀರೋ ಸೂರ್ಯಕುಮಾರ್, ಕೊಹ್ಲಿಯಲ್ಲ ಎಂದ ಗಂಭೀರ್..!

T20 World Cup 2022: ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 51 ರನ್​ ಸಿಡಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 20 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 179 ಕ್ಕೆ ಬಂದು ನಿಂತಿತು.

Virat Kohli: ನಿಜವಾದ ಹೀರೋ ಸೂರ್ಯಕುಮಾರ್, ಕೊಹ್ಲಿಯಲ್ಲ ಎಂದ ಗಂಭೀರ್..!
Gautam Gambhir-Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on:Oct 27, 2022 | 7:19 PM

Share

T20 World Cup 2022:  ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಟಿ20 ವಿಶ್ವಕಪ್​ನ 23ನೇ ಪಂದ್ಯದಲ್ಲಿ ನೆದರ್​ಲ್ಯಾಂಡ್ಸ್​ ವಿರುದ್ಧ ಟೀಮ್ ಇಂಡಿಯಾ (India vs Netherlands)  ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ (9) ಬೇಗನೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಜೊತೆಯಾಟವಾಡಿದರು. 3ನೇ ವಿಕೆಟ್​ಗೆ 95 ರನ್​ಗಳನ್ನು ಕಲೆಹಾಕಿದ ಈ ಜೋಡಿಯು ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರಂತೆ 44 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ವಿರಾಟ್ ಕೊಹ್ಲಿ ಅಜೇಯ 62 ರನ್ ಬಾರಿಸಿದರೆ,

ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 51 ರನ್​ ಸಿಡಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 20 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 179 ಕ್ಕೆ ಬಂದು ನಿಂತಿತು. ಇನ್ನು 180 ರನ್​ಗಳ ಟಾರ್ಗೆಟ್ ಪಡೆದ ನೆದರ್​ಲ್ಯಾಂಡ್ಸ್​ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 56 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಈ ಗೆಲುವಿನ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ನೀಡಿರುವ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ. ಟೀಮ್ ಇಂಡಿಯಾ ಬ್ಯಾಟಿಂಗ್​ ಅನ್ನು ಪರಾಮರ್ಶಿಸುವ ವೇಳೆ ಸೂರ್ಯಕುಮಾರ್ ಯಾದವ್ ಅವರನ್ನು ಹೊಗಳಿದರು. ಆದರೆ ಇದೇ ವೇಳೆ ವಿರಾಟ್ ಕೊಹ್ಲಿಯನ್ನು ನಿರ್ಲಕ್ಷಿಸಿರುವುದೇ ಈಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿದ ಗಂಭೀರ್, ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಿಜವಾದ ಹೀರೋ ಸೂರ್ಯಕುಮಾರ್ ಯಾದವ್. ವಿರಾಟ್ ಕೊಹ್ಲಿ ಅಲ್ಲ. ಏಕೆಂದರೆ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಯಾವುದೇ ಒತ್ತಡವನ್ನು ತೆಗೆದುಕೊಂಡಿಲ್ಲ. ಎಲ್ಲವನ್ನೂ ಸೂರ್ಯಕುಮಾರ್ ಒಬ್ಬರೇ ನಿಭಾಯಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಗಂಭೀರ್ ಅವರ ಈ ಹೇಳಿಕೆಯು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಸೂರ್ಯಕುಮಾರ್ ಅತ್ಯುತ್ತಮ ಇನಿಂಗ್ಸ್​ ಆಡಿರುವುದು ನಿಜ. ಆದರೆ ಮತ್ತೊಂದು ಕಡೆ ವಿರಾಟ್ ಕೊಹ್ಲಿ ಕೂಡ ಅಮೂಲ್ಯ 62 ರನ್​ಗಳ ಕಾಣಿಕೆ ನೀಡಿದ್ದರು. ಇಂತಹದೊಂದು ಇನಿಂಗ್ಸ್​ ಅನ್ನು ನಿರ್ಲಕ್ಷಿಸಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೊಹ್ಲಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೂ ಮುನ್ನ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಯನ್ನೇ ಗುರಿಯಾಗಿಸಿ ಹೇಳಿಕೆ ನೀಡಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ. ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಗಂಭೀರ್, ದಾಖಲೆಗಾಗಿ ಅಲ್ಲ, ತಂಡ ಗೆಲುವಿಗಾಗಿ ಆಡಿ ಎಂದು ವಿರಾಟ್ ಕೊಹ್ಲಿಗೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಅನೇಕ ಅಭಿಮಾನಿಗಳು ಗಂಭೀರ್ ವಿರುದ್ಧ ಕಿಡಿಕಾರಿದ್ದರು. ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿ ಗಂಭೀರ್​ ನೀಡಿರುವ ಹೇಳಿಕೆಯನ್ನು ಅಭಿಮಾನಿಗಳಂತು ಗಂಭೀರವಾಗಿ ಪರಿಗಣಿಸಿದ್ದಾರೆ.

Published On - 6:54 pm, Thu, 27 October 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ