AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..!

India vs England: ಭಾರತ ತಂಡವು 7 ರನ್​ಗಳ ಗೆಲುವು ದಾಖಲಿಸಿ ಟಿ20 ವಿಶ್ವಕಪ್​ನ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್​ಗಳಿಸಿದರೆ, ಇಂಗ್ಲೆಂಡ್ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳ ಜಯದೊಂದಿಗೆ ಫೈನಲ್​ ಫೈಟ್​ಗೆ ಅರ್ಹತೆ ಪಡೆದುಕೊಂಡಿದೆ.

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..!
Team India
ಝಾಹಿರ್ ಯೂಸುಫ್
|

Updated on: Mar 06, 2026 | 7:42 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ಗೆ ಸೋಲುಣಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ರಣರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 253 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೋಲಿನ ಅಂತರ ಕೇವಲ 7 ರನ್​ಗಳು ಮಾತ್ರ. ಈ ಅಂತರ ಸೃಷ್ಟಿಯಾಗಿದ್ದು ಹೇಗೆ? ಈ ಗೆಲುವಿಗೆ ಕಾರಣಕರ್ತರು ಯಾರೆಂದು ನೋಡುವುದಾದರೆ….

  • ಸಂಜು ಸ್ಯಾಮ್ಸನ್ ಅಬ್ಬರ: ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರನಾಗಿ ಬಂದ ಸಂಜು ಸ್ಯಾಮ್ಸನ್ ಕೇವಲ 42 ಎಸೆತಗಳಲ್ಲಿ 89 ರನ್ (7 ಸಿಕ್ಸರ್, 8 ಬೌಂಡರಿ) ಸಿಡಿಸಿ ಭಾರತಕ್ಕೆ ಬೃಹತ್ ಮೊತ್ತದ ಅಡಿಪಾಯ ಹಾಕಿಕೊಟ್ಟಿದ್ದರು. ಈ ಒಂದು ಭರ್ಜರಿ ಇನಿಂಗ್ಸ್ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಲು ಕಾರಣವಾಯಿತು.
  • ತಿಲಕ್ ವರ್ಮಾ 3 ಸಿಕ್ಸ್​: ಟೀಮ್ ಇಂಡಿಯಾ ಪರ ಎಲ್ಲಾ ಬ್ಯಾಟರ್​ಗಳು ಅಬ್ಬರಿಸಿದರೂ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ತಿಲಕ್ ವರ್ಮಾ ಅವರ ಮೂರು ಸಿಕ್ಸ್​. ಏಕೆಂದರೆ 18ನೇ ಓವರ್​ನ ಮುಕ್ತಾಯದ ವೇಳೆಗೆ ಕ್ರೀಸ್​ಗೆ ಆಗಮಿಸಿದ ತಿಲಕ್ ವರ್ಮಾ ಜೋಫ್ರಾ ಅರ್ಚರ್ ಎಸೆದ 19ನೇ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ 7 ಎಸೆತಗಳಲ್ಲಿ 21 ರನ್​ಗಳ ಕೊಡುಗೆ ನೀಡಿದ್ದರು.
  • ಬುಮ್ರಾ ಮ್ಯಾಜಿಕ್ ಸ್ಪೆಲ್: ಇಂಗ್ಲೆಂಡ್ ತಂಡವು ಗೆಲುವಿನ ಹಾದಿಯಲ್ಲಿದ್ದಾಗಜಸ್ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅಂದರೆ ಅಂತಿಮ ಎರಡು ಓವರ್​ಗಳಲ್ಲಿ ಬುಮ್ರಾ ನೀಡಿದ್ದರು ಕೇವಲ 14 ರನ್​ಗಳು ಮಾತ್ರ.
  • 16ನೇ ಓವರ್​ನಲ್ಲಿ 8 ರನ್ ನೀಡಿದ್ದ ಬುಮ್ರಾ 18ನೇ ಓವರ್​ನಲ್ಲಿ ಬಿಟ್ಟುಕೊಟ್ಟಿದ್ದು ಕೇವಲ 6 ರನ್​​ಗಳು ಮಾತ್ರ. ಈ ಎರಡು ಓವರ್​ಗಳು ಇಂಗ್ಲೆಂಡ್​ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿತು.
  • ಅಕ್ಷರ್ ಪಟೇಲ್ ಕೈಚಳಕ: ಅಕ್ಷರ್ ಪಟೇಲ್ ಹಿಡಿದ ಎರಡು ಅದ್ಭುತ ಕ್ಯಾಚ್‌ಗಳು ಪಂದ್ಯದ ಗತಿಯನ್ನು ಬದಲಿಸಿದವು. ಮೊದಲಿಗೆ ಹ್ಯಾರಿ ಬ್ರೂಕ್ ಅವರ ಅದ್ಭುತ ಕ್ಯಾಚ್ ಹಿಡಿದಿದ್ದ ಅಕ್ಷರ್ ಪಟೇಲ್, ಆ ಬಳಿಕ ಡೇಂಜರಸ್ ವಿಲ್ ಜ್ಯಾಕ್ಸ್ ಅವರ ರಿಲೇ ಕ್ಯಾಚ್ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ 7 ರನ್​ಗಳ ವ್ಯತ್ಯಾಸಕ್ಕೆ ಪ್ರಮುಖ ಕಾರಣವಾಗಿದ್ದು ಅಕ್ಷರ್ ಪಟೇಲ್ ಅವರ ಅತ್ಯದ್ಭುತ ಫೀಲ್ಡಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾ ಅವರ ಮಿಂಚಿನ ದಾಳಿ ಎನ್ನಬಹುದು.

ಇದನ್ನೂ ಓದಿ: IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್

ಅದರಲ್ಲೂ ನಿರ್ಣಾಯಕ ಹಂತದಲ್ಲಿ 2 ಓವರ್​ಗಳಲ್ಲಿ ಕೇವಲ 14 ರನ್ ನೀಡುವ ಮೂಲಕ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟಿದ್ದರು. ಬುಮ್ರಾ ಅವರ ಈ ಬುಮ್ರಾಸ್ತ್ರದಿಂದ ಭಾರತ ತಂಡವು 7 ರನ್​ಗಳ ಜಯ ಸಾಧಿಸಲು ಸಾಧ್ಯವಾಯಿತು ಎಂದರೂ ತಪ್ಪಾಗಲಾರದು.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!