AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಗಿಂತ ರೋಹಿತ್ ಅತ್ಯುತ್ತಮ ನಾಯಕ: ಇಬ್ಬರ ನಡುವಿನ ವ್ಯತ್ಯಾಸ ತಿಳಿಸಿದ ರಿಕಿ ಪಾಂಟಿಂಗ್

ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು ಯಾವುದೇ ಪ್ರಮುಖ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿಯೇ ವಿರಾಟ್ ಕೊಹ್ಲಿಗಿಂತ ನಾಯಕತ್ವದಲ್ಲಿ ರೋಹಿತ್ ಶರ್ಮಾ ಬೆಸ್ಟ್.

ಕೊಹ್ಲಿಗಿಂತ ರೋಹಿತ್ ಅತ್ಯುತ್ತಮ ನಾಯಕ: ಇಬ್ಬರ ನಡುವಿನ ವ್ಯತ್ಯಾಸ ತಿಳಿಸಿದ ರಿಕಿ ಪಾಂಟಿಂಗ್
Ricky Ponting-Rohit Sharma-Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Oct 17, 2023 | 7:27 PM

Share

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 2023 ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೊದಲ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲೂ ಭಾರತ ತಂಡ ಗೆಲ್ಲುವ ವಿಶ್ವಾಸದಲ್ಲಿದೆ. ಈ ವಿಶ್ವಾಸವನ್ನು ಇಮ್ಮಡಿಗೊಳಿಸುವಂತಹ ಹೇಳಿಕೆ ನೀಡಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್.

ಈ ಬಗ್ಗೆ ಮಾತನಾಡಿರುವ ರಿಕಿ ಪಾಂಟಿಂಗ್, ನಾಯಕತ್ವದ ವಿಷಯದಲ್ಲಿ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಮುಂದಿದ್ದಾರೆ. ಏಕೆಂದರೆ ಅವರ ನಾಯಕತ್ವದಲ್ಲಿ ಭಾರತ ತಂಡವು ಎರಡು ಬಾರಿ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದಿದೆ. ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು.

ಇದಲ್ಲದೆ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು ಯಾವುದೇ ಪ್ರಮುಖ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿಯೇ ವಿರಾಟ್ ಕೊಹ್ಲಿಗಿಂತ ನಾಯಕತ್ವದಲ್ಲಿ ರೋಹಿತ್ ಶರ್ಮಾ ಬೆಸ್ಟ್ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ. ಹೆಚ್ಚು ಚಿಂತಿಸಬೇಕಾಗಿಲ್ಲ. ಅವರು ಆಡುವ ರೀತಿಯಲ್ಲಿ ನೀವು ಈ ವಿಷಯಗಳನ್ನು ನೋಡಬಹುದು. ಮೈದಾನದ ಒಳಗೆ ಮತ್ತು ಹೊರಗೆ ಅವರು ಹೀಗೆಯೇ ಇರುತ್ತಾರೆ. ರೋಹಿತ್ ಶರ್ಮಾ ಮೇಲೆ ಯಾವುದೇ ಒತ್ತಡವಿಲ್ಲ, ಒತ್ತಡವು ಅವರಿಗೆ ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ಒತ್ತಡವಿದ್ದರೂ ಅವರು ಅದನ್ನು ಚೆನ್ನಾಗಿ ನಿಭಾಯಿಸುತ್ತಾರೆ.

ಆದರೆ ಇದೇ ವಿಷಯದಲ್ಲಿ ವಿರಾಟ್ ಕೊಹ್ಲಿ ತುಂಬಾ ಭಾವುಕರಾಗುತ್ತಾರೆ. ಕೊಹ್ಲಿ ತಮ್ಮ ವ್ಯಕ್ತಿತ್ವದಿಂದಾಗಿ, ಕೆಲವು ತೊಂದರೆಗಳನ್ನು ಎದುರಿಸುತ್ತಾರೆ. ಆದರೆ ರೋಹಿತ್ ಶರ್ಮಾ ವಿಷಯದಲ್ಲಿ ಇಂತಹ ಸಮಸ್ಯೆಗಳು ಎದುರಾಗುತ್ತಿಲ್ಲ ಎಂದು ರಿಕಿ ಪಾಂಟಿಂಗ್ ಹೇಳಿದರು.

ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ ಎಂದು ರಿಕಿ ಪಾಂಟಿಂಗ್ ತಿಳಿಸಿದರು.

ಇದನ್ನೂ ಓದಿ: ಹಳೆಯ ದಾಖಲೆಗಳು ಉಡೀಸ್: ಹೊಸ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ